Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 17 ಜನವರಿ 2021 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾಗಿ ಬರಲಿದೆ. ಪ್ರಯಾಣದಲ್ಲಿ ಎಚ್ಚರವಿರಲಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಸಂಬಂಧಗಳಲ್ಲಿ ಬಿರುಕು ಮೂಡದಂತೆ ಎಚ್ಚರಿಕೆ ವಹಿಸಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ವೃಷಭ: ಮನಸ್ಸಿಗೆ ಖುಷಿ ಕೊಡುವ ಕೆಲಸ ಮಾಡಲಿದ್ದೀರಿ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆಗಾಗಿ ಪ್ರಯತ್ನ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಮಿಥುನ: ನಿಮ್ಮ ಪಾಲಿಗೆ ಇಂದಿನ ದಿನ ಸಂತೋಷದಾಯಕ ದಿನವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಸಿಗಲಿದೆ. ಅವಕಾಶಗಳನ್ನು ಬಳಸಿಕೊಳ್ಳಿ.

ಕರ್ಕಟಕ: ಯಾವುದೇ ವಿಚಾರಕ್ಕಾದರೂ ಅಂತಿಮ ನಿರ್ಧಾರಕ್ಕೆ ಬರುವ ಮೊದಲು ಸರಿಯಾಗಿ ಪರಾಮರ್ಶಿಸಿ. ಕಳೆದು ಹೋದ ವಸ್ತುಗಳ ಬಗ್ಗೆ ಚಿಂತೆ ಮಾಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಸಿಂಹ: ನೀವು ಮಾಡುವ ಕೆಲಸದ ಬಗ್ಗೆ ಜನರೇನು ಅಂದುಕೊಳ್ಳುತ್ತಾರೋ ಎಂಬ ಚಿಂತೆಯಲ್ಲಿ ಹಿಂಜರಿಯಬೇಡಿ. ನಿಮ್ಮ ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಕಿರು ಸಂಚಾರದ ಯೋಗ ಕೂಡಿಬರಲಿದೆ.

ಕನ್ಯಾ: ಉದ್ಯೋಗಾರ್ಥಿಗಳಿಗೆ ಅಧಿಕ ಓಡಾಟ ನಡೆಸಬೇಕಾಗುತ್ತದೆ. ವ್ಯವಹಾರದಲ್ಲಿ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಮೆಚ್ಚಿನ ವ್ಯಕ್ತಿಗಳನ್ನು ಬೇಟಿಯಾಗುವ ಯೋಗವಿದೆ. ಪ್ರೇಮಿಗಳು ತಮ್ಮ ಮನದಾಳವನ್ನು ಹಂಚಿಕೊಳ್ಳಲಿದ್ದಾರೆ.

ತುಲಾ: ನಿಮ್ಮ ಮನಸ್ಸಿನಲ್ಲಿರುವ ಚಿಂತನೆಗಳನ್ನು ಕಾರ್ಯರೂಪಕ್ಕೆ ತನ್ನಿ. ಯಾರಿಗೂ ಹೆದರುವ ಅಥವಾ ಹಿಂಜರಿಯುವ ಅಗತ್ಯವಿಲ್ಲ. ಹಿರಿಯರಿಂದ ನಿಮ್ಮ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ದಾಯಾದಿ ಕಲಹಗಳು ಅಂತ್ಯವಾಗಲಿದೆ. ಚಿಂತೆ ಬೇಡ.

ವೃಶ್ಚಿಕ: ಹೊಸ ಜನರ ಭೇಟಿಯಾಗಲಿದ್ದೀರಿ. ಹಿರಿಯರಿಗೆ ಸಾಧು ಸಂತರ ಆಶೀರ್ವಾದ ಪಡೆಯುವ ಯೋಗ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಗತ್ಯ ಚಿಂತೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಧನು: ನಿಮ್ಮ ಕೆಲವೊಂದು ಮಾತುಗಳು ಕಿರಿಯರ ಮಾತಿಗೆ ನೋವುಂಟು ಮಾಡಲಿದೆ. ಮಾತಿನ ಮೇಲೆ ನಿಗಾ ಇರಲಿ. ಶಾಂತಿ ಸಮಾಧಾನದಿಂದಿರುವುದು ಮುಖ್ಯ. ದೇಹಾರೋಗ್ಯದ ಬಗ್ಗೆ ಅನಾದರಣೆ ಬೇಡ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ ಕಾದಿದೆ.

ಮಕರ: ನಿಮ್ಮ ಮಾತು, ನಡತೆಯಿಂದ ಎಲ್ಲರ ಪ್ರೀತಿ, ಆದರಗಳಿಗೆ ಪಾತ್ರರಾಗಲಿದ್ದೀರಿ. ಯೋಗ್ಯ  ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮಕ್ಕಳ ಭವಿಷ್ಯದ ಯೋಜನೆಗೆ ಸಹಕಾರ ನೀಡಿ.

ಕುಂಭ: ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ನಿಮ್ಮ ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮೀನ: ಮೆಚ್ಚಿನ ಮನದೆನ್ನೆಯ ಬಹುದಿನಗಳ ಆಸೆ ಪೂರೈಸಲಿದ್ದೀರಿ. ವಾಹನದಲ್ಲಿ ಪ್ರಯಾಣ ಮಾಡುವಾಗ ಅಪಘಾತ ಭಯವಿದೆ. ಎಚ್ಚರಿಕೆಯಿರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗಣೇಶ ಸಹಸ್ರನಾಮ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಮುಂದಿನ ಸುದ್ದಿ
Show comments