ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 22 ಜನವರಿ 2021 (07:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಪ್ರವಾಸಾದಿ ಓಡಾಟದಿಂದ ದೇಹಾಯಾಸವಾದೀತು. ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಶತ್ರು ಬಾಧೆ ಅಧಿಕವಾಗಲಿದೆ. ಮಾನಸಿಕವಾಗಿ ಗಟ್ಟಿಯಾಗಬೇಕಾದ ಸಮಯವಿದು. ವಿದ್ಯಾರ್ಥಿಗಳ ಮೇಲೆ ನಿರೀಕ್ಷೆ ಹೆಚ್ಚಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆ ನೋಡಿ ಇತರರು ಅಸೂಯೆಪಡಲಿದ್ದಾರೆ. ಕಾರ್ಯವೈಫಲ್ಯದಿಂದ ಹಿಂಜರಿಯುವುದು ಬೇಡ. ಮನೆಯಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಸಹೋದರ ವರ್ಗದವರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗ ಕಂಡುಕೊಳ್ಳಲಿದ್ದೀರಿ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾದೀತು. ಮಡದಿಯ ಮನದಿಚ್ಛೆ ಪೂರೈಸಲಿದ್ದೀರಿ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಬಂದೀತು. ಆದರೆ ಆರ್ಥಿಕವಾಗಿ ಸರಿಯಾದ ಯೋಜನೆ ಹಾಕಿಕೊಳ್ಳುವುದು ಉತ್ತಮ. ವೈಯಕ್ತಿಕ ಸಂಬಂಧಗಳನ್ನು ಕಾಪಾಡಲು ಕಾಳಜಿವಹಿಸಬೇಕಾಗುತ್ತದೆ. ಕಿರು ಓಡಾಟ ನಡೆಸಲಿದ್ದೀರಿ.

ಸಿಂಹ: ದೈವಾನುಕೂಲದಿಂದ ನೀವು ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿವೆ. ಗೃಹೋಪಕರಣಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಅಪಘಾತದ ಭಯವಿದೆ. ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ.

ಕನ್ಯಾ: ನಿರೀಕ್ಷೆಗೂ ಮೀರಿ ಆದಾಯ ಕೈ ಸೇರಲಿದೆ. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಹೆಮ್ಮೆಯಾಗಲಿದೆ. ಚಿನ್ನಾಭರಣ ಖರೀದಿ ಯೋಗವಿದೆ. ಸರಕಾರಿ ನೌಕರರಿಗೆ ಆದಾಯ ಹೆಚ್ಚಳವಾಗಲಿದೆ.

ತುಲಾ: ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳಿಗೆ ಮನ್ನಣೆ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹೊಸ ಮಿತ್ರರ ಸಂಪಾದನೆ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ಸಿಟ್ಟು, ಮುಂಗೋಪದಿಂದ ಕಾರ್ಯಹಾನಿಯಾದೀತು. ಕೌಟುಂಬಿಕ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಿ. ದಾಯಾದಿ ಕಲಹಗಳಿಗೆ ಹಿರಿಯರ ಸಲಹೆ ಪಡೆಯಲಿದ್ದೀರಿ. ವಾಹನ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ.

ಧನು: ಅವಿವಾಹಿತ ಕನ್ಯೆಯರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ. ಕಾರ್ಯಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ. ವ್ಯಾಪಾರಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

ಮಕರ: ಬಂಧು ಮಿತ್ರರ ಸಹಾಯದಿಂದ ಸಂಭಾವ್ಯ ಕಷ್ಟದಿಂದ ಪಾರಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರಿಂದ ಉಡುಗೊರೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕುಂಭ: ಮಾನಸಿಕವಾಗಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ರಾಜೀ ಸಂಧಾನಕ್ಕೆ ಮಧ‍್ಯಸ್ಥಿಕೆ ವಹಿಸಲಿದ್ದೀರಿ. ಕೂಡಿಟ್ಟ ಹಣ ಸದ್ಭಳಕೆ ಮಾಡಲಿದ್ದೀರಿ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಗೆ ಸಹಕಾರಿಯಾಗುವ ಅವಕಾಶಗಳು ಒದಗಿಬರಲಿವೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಋಣ ಮುಕ್ತರಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments