ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 24 ಜನವರಿ 2021 (07:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವ ಯೋಗ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ವೈಯಕ್ತಿಕ ವಿಚಾರದಲ್ಲಿ ನಿಮ್ಮ ಮನಸ್ಸಿನ ನೋವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರುವುದು. ಮನಸ್ಸಿನ ಮಾತಿನಂತೆ ನಡೆಯಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಭಾವನೆ ಹಂಚಿಕೊಳ್ಳಲಿದ್ದೀರಿ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಯಶಸ್ಸು ಪಡೆಯುವಿರಿ.

ಸಿಂಹ: ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ಸ್ನೇಹಿತರೊಂದಿಗೆ ಪ್ರವಾಸ, ವಿನೋದ ಯಾತ್ರೆ ಕೈಗೊಳ್ಳುವ ಯೋಗವಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ನಿಮ್ಮ ಕೈ ಮೀರಿ ಹೋದ ಘಟನೆಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹಣಕಾಸಿನ ಮುಗ್ಗಟ್ಟು ಸರಿದೂಗಿಸಲು ಪ್ರಯತ್ನ ನಡೆಸಬೇಕಾಗುತ್ತದೆ. ಸಂಗಾತಿಯ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದರೆ ಉತ್ತಮ.

ತುಲಾ: ವೈಯಕ್ತಿಕವಾಗಿ ಕೆಲವೊಂದು ದೃಢ ನಿರ್ಧಾರ ಕೈಗೊಳ್ಳುವ ಸಂದರ್ಭಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗಕ್ಕೆ ಹೊಸ ದಾರಿಗಳು ಕಂಡುಬರಲಿದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಬರುವ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ವಿಘ್ನ ಭಯವಿದ್ದರೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಧನು: ಬೇರೆಯವರೊಂದಿಗೆ ನಿಮ್ಮನ್ನು ಹೋಲಿಸಿಕೊಂಡು ಕೀಳರಿಮೆ ಪಟ್ಟುಕೊಳ್ಳುವುದನ್ನು ಬಿಡಿ. ಹೊಸ ವಸ್ತ್ರಾಭರಣ ಖರೀದಿ ಯೋಗವಿದೆ. ಸಂಗಾತಿಯ ಸಲಹೆಗಳು ಅಪಥ್ಯವೆನಿಸೀತು. ತಾಳ್ಮೆ, ಸಂಯಮವಿರಲಿ. ಹೊಸ ಮಿತ್ರರ ಭೇಟಿಯಾಗಲಿದ್ದೀರಿ.

ಮಕರ: ಕೌಟುಂಬಿಕವಾಗಿ ನಿರ್ಧಾರಗಳನ್ನು ಕೈಗೊಳ್ಳುವಾಗ ಎಲ್ಲರ ಸಹಮತ ಪಡೆದು ಮುನ್ನಡೆದರೆ ಉತ್ತಮ. ನಿಮ್ಮ ಗುಟ್ಟುಗಳು ಬಹಿರಂಗವಾಗಿದೆ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಮನಸ್ತಾಪ ಬಂದೀತು. ತಾಳ್ಮೆಯಿರಲಿ.

ಕುಂಭ: ನಿಮ್ಮ ಉತ್ಸಾಹಕ್ಕೆ ಭಂಗ ತರುವ ಘಟನೆಗಳಾದೀತು. ಸರಕಾರಿ ಲೆಕ್ಕ ಪತ್ರಗಳನ್ನು ಸರಿಯಾಗಿ ಜೋಡಿಸಿಟ್ಟುಕೊಳ್ಳಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿ ನಿಮಿತ್ತ ಅಧಿಕ ಖರ್ಚು ವೆಚ್ಚಗಳಾದೀತು. ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಬಂಧು ಜನರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಮುಂದಿನ ಸುದ್ದಿ
Show comments