Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 30 ಜನವರಿ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಿಟ್ಟಿನ ಭರದಲ್ಲಿ ನಿರ್ಧಾರ ಕೈಗೊಳ್ಳಲು ಹೋಗಿ ಅವಾಂತರ ಮಾಡಿಕೊಳ್ಳಿ. ಸಂಗಾತಿಯ ಮನಸ್ಸು ಅರಿತು ನಡೆದುಕೊಳ್ಳಿ. ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆ ಹಮ್ಮಿಕೊಳ್ಳಲಿದ್ದೀರಿ.

ವೃಷಭ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಚಿಂತೆಗೆ ಕಾರಣವಾದೀತು. ದೂರ ಪ್ರಯಾಣ ಕೆಲವು ದಿನಗಳ ಕಾಲ ಮುಂದೂಡುವುದೇ ಉತ್ತಮ. ಹತ್ತು ಹಲವು ಚಿಂತೆಗಳನ್ನು ಕೆಲವು ದಿನ ಮರೆತು ಪ್ರೀತಿ ಪಾತ್ರರೊಂದಿಗೆ ಕಾಲ ಕಳೆಯಿರಿ.

ಮಿಥುನ: ಹುಟ್ಟುಗುಣ ಸುಟ್ಟರೂ ಬದಲಾಗದು ಅಂತಾರಲ್ಲ, ಹಾಗೆಯೇ ಕೆಲವೊಂದು ಬದಲಾಯಿಸಲು ಹೋಗದಿರುವುದೇ ಉತ್ತಮ. ಬೇರೆಯವರ ವಿಚಾರದಲ್ಲಿ ಅನಗತ್ಯ ಚಿಂತೆ ಬೇಡ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಆತುರದ ನಿರ್ಧಾರದಿಂದ ತೊಂದರೆಯೇ ಹೆಚ್ಚು. ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳ ನಿವಾರಣೆಗೆ ಸಹೋದ್ಯೋಗಿಗಳ ನೆರವು ಪಡೆಯುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು.

ಸಿಂಹ: ಎಷ್ಟೋ ದಿನದಿಂದ ನೀವು ಹುಡುಕುತ್ತಿದ್ದ ವಸ್ತು ಇಂದು ತಾನಾಗೇ ನಿಮ್ಮ ಕೈ ಸೇರಲಿದೆ. ಬಯಸಿದ ವ್ಯಕ್ತಿಗಳ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮರೆಯದಿರಿ.

ಕನ್ಯಾ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾಗಲಿವೆ. ನಯವಂಚಕರೊಂದಿಗೆ ವ್ಯವಹರಿಸುವಾಗ ಎಚ್ಚರ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಅಗತ್ಯ.

ತುಲಾ: ಗೃಹಿಣಿಯರಿಗೆ ಸಂಪತ್ತು ವೃದ್ಧಿಯಾಗಲಿದೆ. ಬಯಸಿದ ವಸ್ತುಗಳ ಖರೀದಿಗೆ ಇದು ಸಕಾಲ. ಕಾರ್ಯರಂಗದಲ್ಲಿ ಪ್ರತಿಷ್ಠಿತರ ಸಹವಾಸದಿಂದ ಕೆಲಸ ಸುಗಮವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭ್ಯವಾಗಲಿದೆ.

ವೃಶ್ಚಿಕ: ಶುಭ ಮಂಗಲ ಕಾರ್ಯಗಳು ವಿಳಂಬವಾಗಿ ನೆರವೇರೀತು. ತಾಳ್ಮೆ, ಸಂಯಮ ಅಗತ್ಯ. ಉದ್ಯೋಗ ಕ್ಷೇತ್ರದಲ್ಲಿ ಸ್ವಜನ ಪಕ್ಷಪಾತದಿಂದ ಮನಸ್ಸಿಗೆ ಬೇಸರವಾದೀತು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಧನು: ಆಡಿದ ಮಾತಿನಂತೆ ನಡದುಕೊಳ್ಳಲು ಕಲಿಯಿರಿ. ಕಿರಿಯರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಮಿತವಾಗಿ ವೆಚ್ಚ ಮಾಡಿ.

ಮಕರ: ಆಪ್ತರೊಂದಿಗೆ ಸಮಾಲೋಚನೆ ಮಾಡುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಯೋಗ್ಯ ವಯಸ್ಕರಿಗೆ ನಿಧಾನವಾಗಿಯಾದರೂ ಸೂಕ್ತ ಸಂಬಂಧಗಳು ಕೂಡಿಬರಲಿವೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಚಿಂತೆ ಬೇಡ.

ಕುಂಭ: ಮನಸ್ಸಿನಲ್ಲೇ ಕೊರಗುತ್ತಿದ್ದ ವಿಚಾರಕ್ಕೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಕೆಲಸದ ವಿಚಾರದಲ್ಲಿ ವಿಳಂಬದ ನಿರ್ಧಾರ ಒಳ್ಳೆಯದಲ್ಲ. ಸಂಗಾತಿಯ ಸಲಹೆಗಳನ್ನು ಸ್ವೀಕರಿಸಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ನಿಮ್ಮ ಪ್ರಾಮಾಣಿಕತೆಗೆ ತಕ್ಕ ಬೆಲೆ ಸಿಗುವುದು. ಋಣಾತ್ಮಕ ಚಿಂತೆಗಳು ಕಾಡದಂತೆ ನೋಡಿಕೊಳ್ಳಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಸ್ವಸ್ತಿಕ ಸಂಕೇತವನ್ನು ಬರೆದರೆ ಏನಾಗುತ್ತದೆ ಗೊತ್ತಾ?