Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 31 ಜನವರಿ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರತಿಕೂಲ ಸನ್ನಿವೇಶದಿಂದಾಗಿ ನೀವು ಕೈಗೊಳ್ಳುವ ನಿರ್ಧಾರಗಳೆಲ್ಲವೂ ತಿರುಗಿಬೀಳುವ ಸಾಧ್ಯತೆಯಿದೆ. ತಾಳ್ಮೆ, ಸಂಯಮವಿರಲಿ. ಮಹಿಳೆಯರು ಗೃಹಕೃತ್ಯಗಳಿಂದ ಹೈರಾಣಾಗುವರು. ಸಂಗಾತಿಯ ಸಹಕಾರ ಪಡೆಯಲಿದ್ದೀರಿ.

ವೃಷಭ: ನಾಲಿಗೆಗೆ ಪ್ರಿಯವಾದ ಭೋಜನ ತಯಾರಿಸಲಿದ್ದೀರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಸಂತಸವುಂಟು ಮಾಡಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಿಥುನ: ನಿಮ್ಮ ಮನಸ್ಸಿಗೆ ಭಾವನೆಗಳಿಗೆ ಧಕ್ಕೆಯಾಗಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳುಂಟಾದೀತು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಪಡೆಯಲು ದೂರ ಸಂಚಾರ ಮಾಡಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಕಾರಣವಾಗಬಹುದಾದ ಅಂಶಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸ್ವಲ್ಪ ಮಟ್ಟಿಗೆ ಪರಿಹಾರವಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ದೂರ ಪ್ರಯಾಣ, ಪ್ರವಾಸಾದಿಗಳಿಂದ ಮನಸ್ಸಿಗೆ ಸಂತಸವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ. ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಕನ್ಯಾ: ಕೌಟುಂಬಿಕವಾಗಿ ಅಮೂಲ್ಯವಾದ ಸಮಯ ಕಳೆಯಲಿದ್ದೀರಿ. ಮಕ್ಕಳಿಗೆ ಹೊಸ ವಸ್ತುಗಳ ಖೀರಿದಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ವಾಹನ ರಿಪೇರಿ ಕೆಲಸ ಮಾಡಬೇಕಾಗಿ ಬಂದೀತು.

ತುಲಾ: ನಿಮ್ಮ ಸಮಯ ಬರುವವರೆಗೂ ತಾಳ್ಮೆಯಿಂದ ಕಾಯುವುದು ಉತ್ತಮ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ವೃಶ್ಚಿಕ: ಹೊಸ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಉದ್ದೇಶಿತ ಕೆಲಸಗಳಿಗೆ ಹಣಕಾಸಿನ ಅಡಚಣೆ ಬಂದೀತು. ಮಿತ್ರರ ಸಹಾಯ ಪಡೆಯಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ಧನು: ಹಿಂದೆ ಕೊಟ್ಟ ಮಾತು ಪಾಲಿಸಲೇಬೇಕಾದ ಅನಿವಾರ್ಯತೆ ಎದುರಾಗಲಿದೆ. ಕೌಟುಂಬಿಕವಾಗಿ ಬಂಧು ಜನರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು.

ಮಕರ: ರಾಜಕೀಯ ರಂಗದಲ್ಲಿರುವವರಿಗೆ ತಮ್ಮ ಸ್ಥಾನ ಸುಗಮಗೊಳಿಸಲು ತೊಡಕುಗಳು ಎದುರಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಯಾವುದೇ ತೊಂದರೆಯಾಗದು. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಮನಸ್ಸಿಗೆ ಹೊಸ ವಿಚಾರಗಳು ಹೊಳೆಯಲಿದ್ದು, ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಓದಿಗೆ ಭಂಗ ತರುವ ಘಟನೆಗಳಾದೀತು, ಎಚ್ಚರಿಕೆಯಿರಲಿ. ವಾಹನ ಖರೀದಿ ಯೋಗ ಸದ್ಯದಲ್ಲೇ ನನಸಾಗಲಿದೆ.

ಮೀನ: ನೂತನ ದಂಪತಿಗಳಿಗೆ ಸದ್ಯದಲ್ಲೇ ಸಂತಾನ ಫಲ ಸೂಚನೆ ದೊರೆಯಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಪೂರೈಸಲು ಖರ್ಚು ವೆಚ್ಚಗಳಾದೀತು. ವಿವೇಚನೆಯಿಂದ ಯೋಚನೆ ಮಾಡಿ ಹೆಜ್ಜೆಯಿಡುವುದರಿಂದ ಸಂಭಾವ್ಯ ಅಪಾಯ ತಪ್ಪಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಶಂಖವನ್ನು ಮನೆಯಲ್ಲಿ ಇಡುವಾಗ ಈ ನಿಯಮ ಪಾಲಿಸಿ