Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 14 ಫೆಬ್ರವರಿ 2021 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಗೃಹಿಣಿಯರಿಗೆ ಬಿಡುವಿಲ್ಲದ ಕೆಲಸ ಕಾರ್ಯಗಳಿರುತ್ತವೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ಕಿರು ಓಡಾಟ ನಡೆಸುವಿರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮತನಕ್ಕೆ ಬೆಲೆ ಸಿಗದಂತಾದೀತು. ಆದರೆ ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ಕೆಲವೊಂದು ಸಾರಿ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಹಿರಿಯರಿಗೆ ತಮ್ಮ ಆಪ್ತೇಷ್ಟರ ಭೇಟಿಯಾದ ಸಂತೋಷ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ತಪ್ಪದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಕರ್ಕಟಕ: ಇಚ್ಛಾನುಸಾರ ಕೆಲಸ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳಲಿದ್ದೀರಿ. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡ ವಿಚಾರವನ್ನು ಸಂಗಾತಿ ಜೊತೆ ಹಂಚಿಕೊಳ್ಳಲಿದ್ಧೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ನಿಮ್ಮ ಸ್ವಭಾವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ. ಅನಿವಾರ್ಯವಾಗಿ ಕೆಲವೊಂದು ಹೊಂದಾಣಿಕೆಗೆ ಸಿದ್ಧರಾಗಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಒದಗಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕನ್ಯಾ: ಭಾವವೇಶಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಯೋಚನೆ ಮಾಡಲಿದ್ದಾರೆ. ಸಾಲಗಾರರ ಕಾಟಕ್ಕೆ ಮುಕ್ತಿ ಸಿಗಲಿದೆ. ದೈವಾನುಗ್ರಹದಿಂದ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ಸು ಸಿಗಲಿದೆ.

ತುಲಾ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ರಿಪೇರಿ ನಿಮಿತ್ತ ಖರ್ಚು ವೆಚ್ಚಗಳಾದೀತು. ಕೌಟುಂಬಿಕವಾಗಿ ನಿಮ್ಮ ಕೆಲವೊಂದು ಧೃಢ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ವೃಶ್ಚಿಕ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ನಿವಾರಣೆಗೆ ದಾರಿ ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡದೇ ಯಶಸ್ಸು ಸಿಗದು. 

ಧನು: ನೆರೆಹೊರೆಯವರು ನಿಮ್ಮ ಕಷ್ಟಕ್ಕೆ ಸ್ಪಂದಿಸಲಿದ್ದಾರೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸುವುದು ಸೂಕ್ತ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ.

ಮಕರ: ನಿಮ್ಮ ದುಃಖ ದುಮ್ಮಾನಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ದಾಯಾದಿ ಕಲಹಗಳಿಗೆ ಹಿರಿಯರ ಸಲಹೆ ಪಡೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ನಿಮ್ಮ ಪ್ರಬುದ್ಧ ಆಲೋಚನೆಗಳಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ವಿಪರೀತ ಕೆಲಸದೊತ್ತಡದಿಂದ ದೇಹಾಯಾಸವಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ಮಿತ್ರರೊಂದಿಗೆ ಕಿರು ಪ್ರವಾಸಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮನಸ್ಸಿನಲ್ಲಿ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ