Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 16 ಫೆಬ್ರವರಿ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಸಂಬಂಧವಾದ ವಿಚಾರಕ್ಕೆ ತಲೆಕೆಡಿಸಿಕೊಂಡು ವೈಯಕ್ತಿಕ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವರ್ತಿಸಿ. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನಹರಿಸಬೇಕಾಗುತ್ತದೆ.

ವೃಷಭ: ಇಷ್ಟದಿನ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರೊಂದಿಗೆ ಸಮಾಲೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿವೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಮನಸ್ಸಿನ ಆಸೆ ಪೂರೈಸಿಕೊಳ್ಳಲು ಖರ್ಚು ವೆಚ್ಚಗಳಾದೀತು. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಲಿದ್ದೀರಿ. ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ಕೃಷಿಕರು ಲಾಭದಾಯಕ ಬೆಳೆಯ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ಕರ್ಕಟಕ: ಕಳೆದು ಹೋದ ಸಂಬಂಧ ಮರಳಿ ಕೂಡಿಸಲು ಪ್ರಯತ್ನಿಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ವ್ಯಾವಹಾರಿಕವಾಗಿ ನಷ್ಟವಾಗದಂತೆ ಎಚ್ಚರಿಕೆ ವಹಿಸಿ. ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ವೃತ್ತಿರಂಗದಲ್ಲಿ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಕನ್ಯಾ: ಆದಾಯ ಮೂಲಕ್ಕೆ ಪೆಟ್ಟು ಬಿದ್ದು, ಅಂದುಕೊಂಡ ಕೆಲಸಗಳು ಏರುಪೇರಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಹನೆ ಎದುರಿಸಬೇಕಾಗುತ್ತದೆ. ತಾಳ್ಮೆ, ಸಂಯಮ ಅಗತ್ಯ. ಸಂಗಾತಿಯ ಸಹಕಾರ ಸಿಗಲಿದೆ.

ತುಲಾ: ದಾಂಪತ್ಯದಲ್ಲಿ ಕಲಹ, ಭಿನ್ನಾಭಿಪ್ರಾಯ ಕಂಡುಬಂದೀತು. ಮಾತು, ವರ್ತನೆ ಬಗ್ಗೆ ಎಚ್ಚರಿಕೆಯಿರಲಿ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಕಾರ್ಯಸಾಧನೆಯಾಗಲಿದೆ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು. ಧಾರ್ಮಿಕ ಕಾರ್ಯಕ್ರಮಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಧನು: ಕಾರ್ಯರಂಗದಲ್ಲಿ ಶತ್ರು ಪೀಡೆ ಅಧಿಕವಾಗಲಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸ ಸುಗಮವಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ.

ಮಕರ: ಮಾನಸಿಕವಾಗಿ ಋಣಾತ್ಮಕವಾದ ಯೋಚನೆಗಳಿಂದ ಕೆಲಸದಲ್ಲಿ ನಿರುತ್ಸಾಹ ಮೂಡೀತು. ಸಂಗಾತಿಯೊಂದಿಗೆ ನಿಮ್ಮ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕುಂಭ: ಇಂದು ನೀವು ಕೈಗೆತ್ತಿಕೊಳ್ಳಲಿರುವ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ನಿಮ್ಮ ಮುನ್ನಡೆಯನ್ನು ಯಾರಿಂದಲೂ ತಡೆಯಲಾಗದು. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಆತುರದಲ್ಲಿ ಕೈಗೊಳ್ಳುವ ನಿರ್ಧಾರಗಳಿಂದ ಕೈಸುಟ್ಟುಕೊಳ್ಳಬೇಕಾದೀತು. ಹೊಸ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದಿನ ಹವಾಮಾನ ವರದಿಯಂತೆ ಈ ಜಿಲ್ಲೆಯವರಿಗೆ ಎಚ್ಚರಿಕೆ ಅಗತ್ಯ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ

ಮುಂದಿನ ಸುದ್ದಿ
Show comments