Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 18 ಫೆಬ್ರವರಿ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸವಾಲುಗಳನ್ನು ಹೊಸ ರೀತಿಯಲ್ಲಿ ಎದುರಿಸಲು ಸಜ್ಜಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎಲ್ಲರ ಮನಗೆಲ್ಲಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಚಿಂತೆ ಬೇಡ.

ವೃಷಭ: ಇನ್ನೊಬ್ಬರನ್ನು ಮೆಚ್ಚಿಸಲು ನಿಮ್ಮತನವನ್ನು ಮರೆಯಬೇಕಿಲ್ಲ. ಮನಸ್ಸಿಗೆ ಹಿಡಿಸಿದ ಕೆಲಸ ಮಾಡಲಿದ್ದೀರಿ. ಸರಕಾರಿ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ಅತಿಯಾದ ವಿಶ್ವಾಸವೂ ವಂಚನೆಗೆ ಕಾರಣವಾದೀತು, ಎಚ್ಚರ.

ಮಿಥುನ: ಬಹುದಿನಗಳಿಂದ ಕುಟುಂಬ ಸದಸ್ಯರು ಮಾಡುತ್ತಿದ್ದ ಬೇಡಿಕೆ ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ.

ಸಿಂಹ: ಅನಿವಾರ್ಯ ಸಂದರ್ಭಗಳಲ್ಲಿ ಕೆಲವೊಂದು ಹೊಂದಾಣಿಕೆ ಮಾಡುವುದು ಅನಿವಾರ್ಯವೆನಿಸಲಿದೆ. ಇಷ್ಟ ಮಿತ್ರರ ಭೇಟಿಯಾಗಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಚಿಂತೆ ಬೇಡ.

ಕನ್ಯಾ: ಉದ್ಯೋಗ ನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಗುರಿಯಾದೀತು. ಹಾಗಿದ್ದರೂ ಇಟ್ಟ ಹೆಜ್ಜೆಯಿಂದ ಹಿಂದೆ ಸರಿಯುವ ಪ್ರಯತ್ನ ಬೇಡ. ಸ್ವಯಂ ವ್ಯಾಪಾರಿಗಳಿಗೆ ಶತ್ರುಬಾಧೆ ಕಂಡುಬಂದೀತು. ತಾಳ್ಮೆಯಿರಲಿ.

ವೃಶ್ಚಿಕ: ಇಷ್ಟಮಿತ್ರರೊಂದಿಗೆ ಸದ್ಯದಲ್ಲೇ ಪ್ರವಾಸ ಕೈಗೊಳ್ಳುವ ಯೋಗ ಕೂಡಿಬರಲಿದೆ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರೈಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ಪೂರ್ತಿಯಾಗಲಿವೆ. ಕಿರು ಓಡಾಟ ನಡೆಸಲಿದ್ದೀರಿ.

ಧನು: ವೃತ್ತಿರಂಗದಲ್ಲಿ ನಿಮಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಸಾಲಗಾರರ ಚಿಂತೆ ಕಾಡಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬಂದೀತು. ಅನಿರೀಕ್ಷಿತವಾಗಿ ಹಳೆಯ ಸಂಬಂಧಿಕರನ್ನು ಭೇಟಿ ಮಾಡಲಿದ್ದೀರಿ.

ಮಕರ: ಯಾವುದೇ ವಿಚಾರ ಅಥವಾ ವ್ಯಕ್ತಿಗಳನ್ನು ಮನಸ್ಸಿಗೆ ಅತಿಯಾಗಿ ಹಚ್ಚಿಕೊಂಡು ಕೊರಗುವುದು ಬೇಡ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಕೀರ್ತಿ ಸಂಪಾದಿಸುವ ಯೋಗ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ಕುಂಭ: ವೃತ್ತಿರಂಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೇ ನಿರಾಸೆಯಾದೀತು. ಆದರೆ ಭರವಸೆ ಕಳೆದುಕೊಳ್ಳಬೇಡಿ. ದಾಯಾದಿ ಕಲಹಗಳಿಗೆ ಹಿರಿಯರಿಂದ ಪರಿಹಾರ ಸಿಗಲಿದೆ. ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.

ಮೀನ: ಕೆಲವೊಂದು ವಿಚಾರಗಳಲ್ಲಿ ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಖರ್ಚು ವೆಚ್ಚಗಳಾದೀತು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನಸಿನಲ್ಲಿ ಚಿಕ್ಕ ಮಕ್ಕಳು ಕಂಡರೆ ಏನರ್ಥ ಗೊತ್ತಾ?