Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 25 ಫೆಬ್ರವರಿ 2021 (09:04 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗುತ್ತಿಲ್ಲ ಎಂಬ ಭಾವನೆ ನಿಮ್ಮಲ್ಲಿ ಬರಬಹುದು. ಹೊಸ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಮಾತುಕತೆ ವೇಳೆ ಎಚ್ಚರಿಕೆಯಿಂದಿದ್ದರೆ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಮನಸ್ಸು ಹೊಸತನ, ಹೊಸ ಸ್ಥಳಕ್ಕೆ ಭೇಟಿ ಬಯಸಲಿದೆ. ಆದರೆ ಹಣಕಾಸಿನ ವಿಚಾರ ನಿಮ್ಮನ್ನು ಚಿಂತೆಗೆ ದೂಡಲಿದೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಕೆಲವೊಮ್ಮೆ ನಿಮಗಿಷ್ಟವಿಲ್ಲದಿದ್ದರೂ ಪ್ರೀತಿ ಪಾತ್ರರಿಗಾಗಿ ಕೆಲವೊಂದು ಹೊಂದಾಣಿಕೆ ಮಾಡಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯ ನಿರ್ಲ್ಯಕ್ಷಿಸಬೇಡಿ.

ಕರ್ಕಟಕ: ವೃತ್ತಿರಂಗದಲ್ಲಿ ಹೊಸ ಹುಮ್ಮಸ್ಸಿನಿಂದ ಕೆಲಸ ಮಾಡಲಿದ್ದೀರಿ. ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳ ಮನೆಯವರ ಒಪ್ಪಿಗೆ ಸಿಗಲಿದೆ. ಅನಿರೀಕ್ಷಿತವಾಗಿ ಇಷ್ಟಮಿತ್ರರ ಭೇಟಿಯಾಗಲಿದ್ದೀರಿ.

ಸಿಂಹ: ನೀವು ಬಯಸುವುದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ದಾಯಾದಿಗಳ ಕಲಹಕ್ಕೆ ಹಿರಿಯರ ಸಲಹೆ ಪಡೆಯಿರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಸಹಕಾರಿಯಾಗುವ ಬೆಳವಣಿಗೆ ಕಂಡುಬರಲಿದೆ.

ಕನ್ಯಾ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಕೈ ಹಿಡಿದ ಕೆಲಸದಲ್ಲಿ ಸಫಲತೆ ಕಾಣುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದ್ದು, ಸಂತಸವಾಗಲಿದೆ. ಮಕ್ಕಳ ಸಂತೋಷಕ್ಕೆ ಕಾರಣರಾಗಲಿದ್ದೀರಿ.

ತುಲಾ: ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುವರೋ ಎಂಬ ಯೋಚನೆ ಬಿಡಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಬಳಸಿಕೊಳ್ಳುವುದು ಸೂಕ್ತ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಚಿಂತೆ ಬೇಡ.

ವೃಶ್ಚಿಕ: ಮಾನಸಿಕವಾಗಿ ಒಂದು ರೀತಿಯ ನಿರುತ್ಸಾಹ ಕಂಡುಬರಲಿದೆ. ಕೆಲಸ ಕಾರ್ಯಗಳು ಅರ್ಧಕ್ಕೇ ನಿಲ್ಲಲಿವೆ. ಹೊಸತನದ ಯೋಚನೆಗಳನ್ನು ಜಾರಿಗೆ ತರುವುದು ಉತ್ತಮ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಧನು: ಸಾಂಸಾರಿಕವಾಗಿ ನಿಮಗೆ ಸಂತಸದ ದಿನವಾಗಲಿದೆ. ನೂತನ ದಂಪತಿಗಳು ಸದ್ಯದಲ್ಲೇ ಶುಭ ಸುದ್ದಿ ಕೇಳಲಿದ್ದೀರಿ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹಣೆಗೆ ಅವಕಾಶವಿದ್ದರೂ ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ.

ಮಕರ: ಕೌಟುಂಬಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಮಾನಸಿಕವಾಗಿ ತಾಳ್ಮೆ ಕಳೆದುಕೊಳ್ಳದೇ ಎಲ್ಲವನ್ನೂ ನಿಭಾಯಿಸಬೇಕು. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ವ್ಯವಹರಿಸುವುದು ಮುಖ್ಯ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಹಿಂದೆ ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪ ಪಡುವಂತಾದೀತು. ಸಹಕಾರ ಮನೋಭಾವನೆ ತೋರಿದಲ್ಲಿ ಅಭಿವೃದ್ಧಿ ಹೊಂದಬಹುದು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಕ್ರಿಯಾತ್ಮಕ ಕೆಲಸ ಮಾಡಲಿದ್ದೀರಿ.

ಮೀನ: ವೈಯಕ್ತಿಕ ವಿಚಾರಗಳಿಗೆ ನೆರೆಹೊರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ವೃತ್ತಿರಂಗದಲ್ಲಿ ಅಪವಾದಗಳ ಭೀತಿಯಿದ್ದು, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ಕಷ್ಟಕಾಲದಲ್ಲಿ ಸ್ನೇಹಿತರ ಸಹಾಯ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ, ವಾಸ್ತು ದೋಷ ಕಾಡುತ್ತಿದ್ದರೆ ಈ ಗಿಡವನ್ನು ನೆಡಿ