Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 27 ಫೆಬ್ರವರಿ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನಗತ್ಯವಾಗಿ ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಿಕೊಳ್ಳಬೇಡಿ. ಸಂಗಾತಿಯೊಂದಿಗೆ ಅನಗತ್ಯ ಘರ್ಷಣೆ ಬೇಡ. ವಿದ್ಯಾರ್ಥಿಗಳಿಗೆ ಮುನ್ನಡೆಗೆ ಅವಕಾಶಗಳು ತೋರಿಬರಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ.

ವೃಷಭ: ನಿಮ್ಮ ದೂರದೃಷ್ಟಿಯ ಯೋಚನೆಗಳು ಕಷ್ಟಕಾಲದಲ್ಲಿ ನೆರವಿಗೆ ಬರಲಿದೆ. ಕಾರ್ಯರಂಗದಲ್ಲಿ ಛಲಬಿಡದೇ ಕಷ್ಟಪಟ್ಟು ದುಡಿದರೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಚಿಂತೆ ಬೇಡ.

ಮಿಥುನ: ಶೈಕ್ಷಣಿಕ ರಂಗದಲ್ಲಿ ಹೆಚ್ಚು ಸಾಧನೆ ಮಾಡುವ ಹುರುಪು ಸಿಗಲಿದೆ. ಅವಿವಾಹಿತರಿಗೆ ಅನಿರೀಕ್ಷಿತ ರೀತಿಯಲ್ಲಿ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಸಾಂಸಾರಿಕವಾಗಿ ಪತ್ನಿ ಮಕ್ಕಳಿಗೆ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಕರ್ಕಟಕ: ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಬುದ್ಧಿವಂತಿಕೆಯಿಂದ ಸಮಸ್ಯೆಗಳನ್ನು ನಿಭಾಯಿಸುವುದೇ ಜಾಣತನ. ಬೇರೆಯವರ ಇಷ್ಟಕ್ಕೆ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ಸಿಂಹ: ಹಣಕಾಸಿನ ಪರಿಸ್ಥಿತಿಯಲ್ಲಿ ಏರುಪೇರಾಗಿದ್ದರೂ ವ್ಯವಹಾರದಲ್ಲಿ ನಿಮ್ಮ ಮುನ್ನಡೆಗೆ ತೊಡಕಾಗದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ.

ಕನ್ಯಾ: ಆದಾಯ ವೃದ್ಧಿಯಾಗಲಿದ್ದು, ಹಂತ ಹಂತವಾಗಿ ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಮಹಿಳೆಯರಿಂದ ಅಪವಾದದ ಭೀತಿ ಎದುರಾಗಲಿದೆ. ತಾಳ್ಮೆ, ಸಂಯಮದಿಂದ ನಿಭಾಯಿಸಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ತುಲಾ: ಹೊಸ ವ್ಯವಹಾರ, ವ್ಯಾಪಾರಿಗಳಿಗೆ ಮುನ್ನಡೆಗೆ ಅವಕಾಶ ಸಿಗಲಿದೆ. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ದೂರ ಸಂಚಾರದಿಂದ ದೇಹಾಯಾಸವಾದೀತು. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.

ಧನು: ಮನಸ್ಸಿನಲ್ಲಿ ಕೊರೆಯುತ್ತಿರುವ ಯೋಚನೆಗಳಿಗೆ ಒಂದು ರೀತಿಯ ಕೊನೆ ಹಾಡಲಿದ್ದೀರಿ. ಮನಸ್ಸಿನ ಮಾತುಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಿ. ಕಳೆದು ಹೋದ ವಸ್ತುಗಳು ಅನಿರೀಕ್ಷಿತವಾಗಿ ಮರಳಿ ಕೈಸೇರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಇಷ್ಟು ದಿನ ಅರ್ಧಕ್ಕೇ ಬಾಕಿಯಾಗಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಣಕಾಸಿನ ಪರಿಸ್ಥಿತಿಗೆ ತಕ್ಕಂತೆ ನಿಮ್ಮ ಆಸೆ ಆಕಾಂಕ್ಷೆಗಳನ್ನು ನಿಯಂತ್ರಿಸಿಕೊಳ್ಳಬೇಕಾಗುತ್ತದೆ. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ.

ಕುಂಭ: ನಿಮ್ಮ ಹೊಸ ಬಗೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ.

ಮೀನ: ಚಿತ್ತ ಚಾಂಚಲ್ಯದಿಂದಾಗಿ ನಿರ್ಧಾರ ಕೈಗೊಳ‍್ಳಲು ಹಿಂದೇಟು ಹಾಕಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಕಾರ್ಯಕ್ಷೇತ್ರದಲ್ಲಿ ಅಪರಿಚಿತರನ್ನು ನಂಬಿ ವ್ಯವಹಾರ ಮಾಡಲು ಹೋಗಬೇಡಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಕರ ರಾಶಿಯವರು ಶಿವರಾತ್ರಿಯಂದು ಈ ಕೆಲಸ ಮಾಡಿದರೆ ಅದೃಷ್ಟ ಒಲಿಯುತ್ತದೆ