Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 2 ಮಾರ್ಚ್ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ತಪ್ಪು ಅಭಿಪ್ರಾಯಗಳಿಂದಾಗಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ಬರಬಹುದು. ತಾಳ್ಮೆ, ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಕಿರಿ ಕಿರಿ ಉಂಟಾಗಬಹುದು. ತಾಳ್ಮೆಯಿಂದ ನಿಭಾಯಿಸಿರಿ.

ವೃಷಭ: ನಿಮ್ಮ ಅಭಿಪ್ರಾಯಗಳನ್ನು ಇತರರಿಗೆ ತಾಳ್ಮೆಯಿಂದ ಹೇಳಿ. ಇಲ್ಲದೇ ಹೋದರೆ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಉಂಟಾಗಬಹುದು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಖರ್ಚು ವೆಚ್ಚ ಮಿತಿಯಿರಲಿ.

ಮಿಥುನ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗದೇ ಬೇಸರವಾದೀತು. ಪ್ರಯತ್ನ ಬಿಡಬೇಡಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರಲಿದೆ. ನಿರೀಕ್ಷಿತ ಕೆಲಸಗಳಿಗೆ ಅಡೆತಡೆಯಿದ್ದರೂ ಯಶಸ್ಸು ಸಿಗುವುದು.

ಕರ್ಕಟಕ: ನಿಮ್ಮ ವ್ಯವಹಾರಗಳಿಗೆ ಇರುವ ಅಡ್ಡಿ ನಿವಾರಿಸಲು ಕ್ರಮ ಕೈಗೊಳ್ಳಲಿದ್ದೀರಿ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಕುಟುಂಬ ಸದಸ್ಯರ ಸಹಕಾರ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ಸಿಂಹ: ಇತರರಿಗೆ ನಿಮ್ಮ ನಿರ್ಧಾರಗಳು ಹಿಡಿಸದೇ ಹೋದೀತು. ಹಾಗಿದ್ದರೂ ಇಟ್ಟ ಹೆಜ್ಜೆಯಿಂದ ಹಿಂದೆ ಬರುವ ಸ್ವಭಾವ ನಿಮ್ಮದಲ್ಲ. ಸರಕಾರಿ ಕೆಲಸಗಳಲ್ಲಿ ಮುನ್ನಡೆಯ ಯೋಗವಿದೆ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಮನ್ನಣೆ ಸಿಗದೇ ಬೇಸರವಾದೀತು. ಆದರೆ ಸಂಗಾತಿಯ ಸಾಂತ್ವನ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಉಂಟಾದೀತು. ನಿಮ್ಮ ವೈಯಕ್ತಿಕ ವಿಚಾರದಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಕೊಡಬೇಡಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ವೃಶ್ಚಿಕ: ಉದ್ಯೋಗ ಸಂಬಂಧವಾಗಿ ಬರುವ ಸಮಸ್ಯೆಗಳ ನಿವಾರಣೆಗೆ ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲ ಸಿಗಲಿದೆ.

ಧನು: ಕುಟುಂಬದವರ ಹಿತವಚನಗಳಿಗೆ ಕಿವಿಗೊಡಬೇಕಾಗುತ್ತದೆ. ಕೋರ್ಟು ಕಚೇರಿ ವ್ಯವಹಾಗಳಲ್ಲಿ ಹಿನ್ನಡೆಯುಂಟಾದೀತು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಹಿರಿಯರು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯನ್ನು ಅಲಕ್ಷಿಸುವುದು ಬೇಡ. ಕಾಳಜಿವಹಿಸಿ.

ಮಕರ: ಮುಂದೆ ಆಗಬೇಕಾದ ಕೆಲಸಗಳಿಗೆ ಇಂದೇ ತಯಾರಿ ಆರಂಭಿಸಲಿದ್ದೀರಿ. ನಿಮ್ಮ ಮುಂದಾಲೋಚನೆಯ ಗುಣ ಉಪಯೋಗಕ್ಕೆ ಬರಲಿದೆ. ಗೃಹ ನಿರ್ಮಾಣ, ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಹಿತಶತ್ರುಗಳ ಕಾಟ ತಪ್ಪಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ಸರಿಯಾಗಿ ಬಳಸಿಕೊಳ್ಳಿ.

ಮೀನ: ಕೆಲವು ವಿಚಾರಗಳು ತಪ್ಪು ಎಂದು ನಿಮಗೆ ಗೊತ್ತಿದ್ದರೂ ಸುಮ್ಮನೇ ಇರಬೇಕಾದ ಪರಿಸ್ಥಿತಿ ಎದುರಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಏರುಪೇರಾದೀತು, ಎದುರಿಸಲು ಸಿದ್ಧರಾಗಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಸೂರ್ಯ ದೇವನ ಅನುಗ್ರಹ ಪಡೆಯಲು ಈ ದಿಕ್ಕಿನಲ್ಲಿ ಈ ಬಣ್ಣದ ವಸ್ತುಗಳನ್ನು ಇಡಿ