Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 4 ಮಾರ್ಚ್ 2021 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ. ಆರ್ಥಿಕವಾಗಿ ಹಣಕಾಸಿಗೆ ಸಮಸ್ಯೆಯಾಗದು. ಆದರೆ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಪ್ರೀತಿ ಪಾತ್ರರಿಗೆ ಸಮಯ ಮೀಸಲಿಡಿ.

ವೃಷಭ: ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ಸಿಗಲಿದೆ. ಕೌಟುಂಬಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಅಭಿವೃದ್ಧಿಯಿಂದ ನೆಮ್ಮದಿಯಾಗಲಿದೆ.

ಮಿಥುನ: ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವಿರಲಿದೆ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಸೂಕ್ತ ಮನ್ನಣೆ ಸಿಗಲಿದೆ.

ಕರ್ಕಟಕ: ಹೊಸ ವ್ಯವಹಾರದಲ್ಲಿ ಬಂಡವಾಳ ಹೂಡಲು ಇದು ಸಕಾಲವಲ್ಲ. ಕಾರ್ಯರಂಗದಲ್ಲಿ ಮುನ್ನಡೆಗೆ ಅವಕಾಶಗಳು ತೋರಿಬರಲಿವೆ. ಅದನ್ನು ಸರಿಯಾಗಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.


ಸಿಂಹ: ಉದ್ಯೋಗ,ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಕಂಡುಬರಲಿದೆ. ಕ್ರಿಯಾತ್ಮಕ ಯೋಜನೆಗಳು ಕೈಗೂಡಲಿವೆ. ಪ್ರೇಮಿಗಳಿಗೆ ಮನೆಯವರಿಂದ ವ್ಯವಹಾರ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ವೈಯಕ್ತಿಕ ಜೀವನದಲ್ಲಿ ಪ್ರಗತಿ ಕಂಡುಬರಲಿದೆ. ನಿಮ್ಮ ಸುಖ ಸಂತೋಷಕ್ಕೆ ಯಾವ ಅಡ್ಡಿಯೂ ಆಗದು. ಆದರೆ ಅನಿಯಮಿತ ಖರ್ಚು ವೆಚ್ಚಗಳಿಂದ ಚಿಂತೆಯಾದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ತುಲಾ: ವೃತ್ತಿರಂಗದಲ್ಲಿ ಅನಿರೀಕ್ಷಿತ ರೀತಿಯಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಕಿರು ಓಡಾಟ ನಡೆಸಲಿದ್ದೀರಿ.

ವೃಶ್ಚಿಕ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಿಬಂದೀತು. ಕಲೆ, ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಹೆಸರು ಮಾಡುವ ಯೋಗ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ.

ಧನು: ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಆದರೆ ಅನಗತ್ಯವಾಗಿ ನೆರೆಹೊರೆಯವರ ವಿಚಾರಕ್ಕೆ ತಲೆತೂರಿಸಲು ಹೋಗಬೇಡಿ. ಆಸ್ತಿ ವಿಚಾರವಾಗಿ ಪೋಷಕರೊಂದಿಗೆ ಭಿನ್ನಾಭಿಪ್ರಾಯ ಕಂಡುಬಂದೀತು. ತಾಳ್ಮೆ, ಸಂಯಮವಿರಲಿ.

ಮಕರ: ಕೆಟ್ಟ ಸ್ನೇಹ ಸಂಗದಿಂದ ದೂರವಿದ್ದರೆ ಉತ್ತಮ. ಕಳೆದು ಹೋದ ವಸ್ತುಗಳನ್ನು ಮರಳಿ ಪಡೆಯಲು ಪ್ರಯತ್ನಿಸುವಿರಿ. ಧಾರ್ಮಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಾಹನ ಸಂಚಾರದಲ್ಲಿ ಅಪಘಾತ ಭೀತಿಯಿದೆ.

ಕುಂಭ: ಸಂಬಂಧಿಕರ ಸಹಕಾರದಿಂದ ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಲಿವೆ. ಹಿರಿಯರಿಗೆ ಆಧ‍್ಯಾತ್ಮದಲ್ಲಿ ಆಸಕ್ತಿ ಹೆಚ್ಚುವುದು. ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಬೇಡದ ಯೋಚನೆಗಳನ್ನು ಕಿತ್ತು ಹಾಕಿ.

ಮೀನ: ನೀವು ಸಕಾರಾತ್ಮಕವಾಗಿದ್ದರೆ ಎಲ್ಲವೂ ನೀವು ಅಂದುಕೊಂಡಂತೆಯೇ ನೆರವೇರುವುದು. ಇನ್ನೊಬ್ಬರಿಗೆ ಸ್ಪೂರ್ತಿ ತುಂಬುವ ಕೆಲಸ ಮಾಡಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೀವು ಹುಟ್ಟಿದ ಸಂಖ್ಯೆಯ ಮೂಲಕ ನೀವು ಯಾವ ದಿಕ್ಕಿನಲ್ಲಿ ಏನನ್ನು ಇಟ್ಟರೆ ಶುಭ ಗೊತ್ತಾ?