Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 5 ಮಾರ್ಚ್ 2021 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ನೀವು ಕೈಗೊಳ್ಳುವ ನಿರ್ಧಾರಗಳಿಂದ ನಿಮ್ಮ ಜೀವನ ಬದಲಾಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಯ ಸಾಧ‍್ಯತೆಯಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಎದುರಾಗಲಿವೆ. ದೈವಾನುಗ್ರಹದಿಂದ ಮುನ್ನಡೆ ತೋರಿಬರಲಿದೆ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ.

ಸಿಂಹ: ನಿಮ್ಮ ಉತ್ತಮ ನಡುವಳಿಕೆಯಿಂದಲೇ ಎಲ್ಲರ ಗಮನ ಸೆಳೆಯಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು. ಎಚ್ಚರಿಕೆ ಅಗತ್ಯ.

ಕನ್ಯಾ: ಆರ್ಥಿಕವಾಗಿ ಉನ್ನತಿಗೆ ಅವಕಾಶಗಳಿದ್ದು, ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ದೈವಾನುಗ್ರಹದಿಂದ ನಿಮ್ಮ ಬಾಕಿ ಕೆಲಸಗಳು ನೆರವೇರಲಿವೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಕಾರ್ಯಕ್ಷೇತ್ರದಲ್ಲಿ ಮಿಶ್ರಫಲಗಳಿದ್ದು, ಎಲ್ಲವನ್ನೂ ಸಮನಾಗಿ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಿ. ವ್ಯಾಪಾರ, ವ್ಯವಹಾರದಲ್ಲಿ ಹಣಕಾಸಿನ ಗಳಿಕೆಗೆ ಮಾರ್ಗಗಳು ತೋರಿಬರಲಿವೆ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ.

ವೃಶ್ಚಿಕ: ಬಾಕಿ ಬರಬೇಕಾದ ಹಣ ವಸೂಲು ಮಾಡಲು ಪರದಾಡಬೇಕಾದೀತು. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ತೋರಿಬಂದೀತು. ತಾಳ್ಮೆ, ಸಂಯಮದಿಂದ ನಿಭಾಯಿಸಿ. ಕೃಷಿ, ಯಂತ್ರೋಪಕರಣಗಳ ವೃತ್ತಿಯವರಿಗೆ ಮುನ್ನಡೆ.

ಧನು: ಕಾರ್ಯರಂಗದಲ್ಲಿ ಇದು ಅತ್ಯಂತ ಮಹತ್ವ ಪೂರ್ಣ ನಿರ್ಧಾರ ಕೈಗೊಳ್ಳಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ ಅಪರಿಚತರೊಂದಿಗೆ ವ್ಯವಹಾರ ಮಾಡುವಾಗ ಎಚ್ಚರಿಕೆಯಿಂದಿರಿ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ.

ಮಕರ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ನಿಮ್ಮ ಆತ್ಮವಿಶ್ವಾಸದಿಂದಾಗಿ ಬರುವಂತಹ ಸಮಸ್ಯೆಗಳನ್ನು ಎದುರಿಸಲಿದ್ದೀರಿ. ಹಂತ ಹಂತವಾಗಿ ಅಭಿವೃದ್ಧಿ ಹೊಂದಲಿದ್ದೀರಿ. ತಾಳ್ಮೆ ಕಳೆದುಕೊಳ್ಳಬೇಡಿ.

ಕುಂಭ: ಆರ್ಥಿಕವಾಗಿ ಹಿನ್ನಡೆ ತೋರಿಬಂದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ಉದ್ಯೋಗ ರಂಗದಲ್ಲಿ ಅಧಿಕಾರಿ ವರ್ಗದವರಿಂದ ಕಿರಿ ಕಿರಿ ಎದುರಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ.

ಮೀನ: ಕಾರ್ಯಕ್ಷೇತ್ರದಲ್ಲಿ ಸಾಧಾರಣ ಗತಿಯಲ್ಲಿ ಮುನ್ನಡೆ ಕಂಡುಬರಲಿದೆ. ಕೌಟುಂಬಿಕವಾಗಿ ಬಂಧುಮಿತ್ರರ ಆಗಮನದಿಂದ ಸಂತೋಷದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಸಮಯದಲ್ಲಿ ಅಪ್ಪಿತಪ್ಪಿಯೂ ದೇವರ ಪೂಜೆ ಮಾಡಬೇಡಿ