Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 13 ಮಾರ್ಚ್ 2021 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಪ್ರೀತಿ ಪಾತ್ರರ ಅಗಲುವಿಕೆಯ ನೋವು ಕಾಡಲಿದೆ. ಮನಸ್ಸಿನ ಬೇಸರ ಹೋಗಲಾಡಿಸಲು ಇಷ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೃತ್ತಿರಂಗದಲ್ಲಿ ಮುನ್ನಡೆಯ ಅವಕಾಶಗಳು ಸಿಗಲಿವೆ. ಕಿರು ಓಡಾಟ ನಡೆಸಲಿದ್ದೀರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲ್ದರ್ಜೆಗೇರಲು ಅವಕಾಶಗಳು ಒದಗಿಬರಲಿವೆ. ನಿಮ್ಮ ಸ್ನೇಹಿತರ ಕಷ್ಟಗಳಿಗೆ ನೆರವಾಗಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ಮಿಥುನ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿಕ ದುಃಖ ದುಮ್ಮಾನಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಕರ್ಕಟಕ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸಗಳು ನೆರವೇರಲಿವೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಎಲ್ಲವನ್ನೂ ಸ್ಪರ್ಧಾತ್ಮಕವಾಗಿ ನೋಡುವ ಮನೋಭಾವ ಬೆಳೆಸಿಕೊಳ್ಳಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡುವ ಮೂಲಕ ಸಂತೋಷ ಕೊಡಲಿದ್ದೀರಿ.

ಕನ್ಯಾ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ತಾಳ್ಮೆ, ಸಂಯಮದಿಂದ ವ್ಯವಹರಿಸಿ. ನೆರೆಹೊರೆಯವರು ನಿಮ್ಮ ಕಷ್ಟಕ್ಕೆ ನೆರವಾಗಲಿದ್ದೀರಿ. ಮಕ್ಕಳಿಂದ ಸಂತೋಷ ಅನುಭವಿಸಲಿದ್ದೀರಿ.

ತುಲಾ: ಮಹಿಳೆಯರಿಗೆ ಉದ್ಯೋಗ ರಂಗದಲ್ಲಿ ಮುನ್ನಡೆಗೆ ಅವಕಾಶ ಸಿಗಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ಪ್ರೀತಿ ಪಾತ್ರರನ್ನು ಅನಿರೀಕ್ಷಿತವಾಗಿ ಭೇಟಿ ಮಾಡಲಿದ್ದೀರಿ. ಉದ್ವೇಗದಲ್ಲಿ ನಿರ್ಧಾರಗಳನ್ನು ತೆಗೆದುಕೊಂಡರೆ ಅಪಾಯ ತಪ್ಪಿದ್ದಲ್ಲ.

ಧನು: ಹೊಸ ವೃತ್ತಿಯಲ್ಲಿ ತೊಡಗಿಸಿಕೊಳ್ಳಬೇಕೆಂಬ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ನಿರುದ್ಯೋಗಿಗಳಿಗೆ ಸೂಕ್ತ ಅವಕಾಶಗಳು ಒದಗಿಬರಲಿವೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ನೀವು ನಿರೀಕ್ಷಿಸಿದ ರೀತಿಯಲ್ಲಿ ಕೆಲಸಗಳು ನಡೆಯದೇ ನಿರಾಸೆಯಾದೀತು. ಆದರೆ ಕ್ರಿಯಾತ್ಮಕವಾಗಿ ಯೋಚಿಸಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ನಿಮ್ಮ ವ್ಯಕ್ತಿತ್ವದಿಂದಲೇ ಇತರರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಬೆಲೆ ಸಿಗಲಿದೆ. ವೈವಾಹಿಕ ಸಂಬಂಧದಲ್ಲಿ ಬಿರುಕುಗಳಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಆರ್ಥಿಕ ಪರಿಸ್ಥಿತಿಯಲ್ಲಿ ಏರಿಳಿತಗಳು ಸಾಮಾನ್ಯ. ಆದರೆ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ಬೇಕು. ಸಂಗಾತಿಯ ಕಷ್ಟದಲ್ಲಿ ಸಮಭಾಗಿಯಾಗಲಿದ್ದೀರಿ. ಬಂಧು ಮಿತ್ರರ ಸಹಕಾರ ಸಿಗಲಿದೆ. ಅನಗತ್ಯ ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ಹೀಗಿದೆ