Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 15 ಮಾರ್ಚ್ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಮನಸ್ಸಿನ ಮಾತುಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಾಯವಾಗಲಿದೆ. ಆದರೆ ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ವೃಷಭ: ವೃತ್ತಿರಂಗದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ನಡೆಸುತ್ತಿದ್ದವರ ಸಂಚುಗಳು ಬಯಲಾಗಲಿವೆ. ಅನಗತ್ಯ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರೇಮಿಗಳಿಗೆ ಮನೆಯವರ ಸಮ್ಮತಿ ಸಿಗುವುದು. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಉಂಟಾಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಂದ ಮುಕ್ತಿಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಮನಸ್ಸಿನ ಭಾವನೆಗಳು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವೈಯಕ್ತಿಕ ಸಮಸ್ಯೆಗಳನ್ನು ಇತರರಿಗೆ ಹೇಳಿಕೊಂಡರೆ ಪರಿಹಾರ ಸಿಗಲಿದೆ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉತ್ತಮ ಆಲೋಚನೆಗಳಿಗೆ ತಕ್ಕ ಮನ್ನಣೆ ಸಿಗಲಿದೆ. ಕೌಟುಂಬಿಕವಾಗಿ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಶುಭ ಮಂಗಲ ಕಾರ್ಯನಿಮಿತ್ತ ಸಂಚಾರ ಮಾಡಲಿದ್ದೀರಿ.

ಕನ್ಯಾ: ನಿಮ್ಮ ಭಾವನೆಯನ್ನು ಸಂಗಾತಿಗೆ ಅರ್ಥ ಮಾಡಿಸಲಿದ್ದೀರಿ. ಇದರಿಂದ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮನೆಯ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ತುಲಾ: ಕೌಟುಂಬಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಮನೆಯ ಹಿರಿಯ ಸದಸ್ಯರಿಗೆ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಂಭಾವ್ಯ ಅಪಾಯ ಎದುರಿಸಲು ಸಜ್ಜಾಗಿರಿ. ಸರಕಾರಿ ನೌಕರರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.

ಧನು: ಮನಸ್ಸಿನಲ್ಲಿ ಕಾಡುತ್ತಿರುವ ಕೆಲವೊಂದು ವಿಚಾರಗಳಿಗೆ ಆಪ್ತರೊಂದಿಗೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲಿದ್ದಾರೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಸಿಕ್ಕೀತು. ಆದರೆ ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.

ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ವ್ಯವಹಾರಗಳ ಬಗ್ಗೆ ಯೋಚನೆಗಳು ಮೂಡಲಿವೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಮಕ್ಕಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾಗಲಿವೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಸಾಂಸಾರಿಕವಾಗಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ಶುಭವಾರ್ತೆ ಕೇಳಿಬರಲಿದೆ.

ಮೀನ: ದುಡುಕಿ ಮಾತನಾಡಿ ಪಶ್ಚಾತ್ತಾಪಪಡುವ ಪರಿಸ್ಥಿತಿ ಎದುರಾದೀತು. ತಾಳ್ಮೆ, ಸಂಯಮ ಅಗತ್ಯವಿದೆ. ನಿಮ್ಮ ಜೀವನವೇ ಬದಲಾವಣೆಯಾಗುವಂತಹ ಘಟನೆಗಳು ನಡೆದೀತು. ಕಾರ್ಯಾನುಕೂಲಕ್ಕಾಗಿ ಕೆಲವು ಹೊಂದಾಣಿಕೆ ಅಗತ್ಯ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಹಣದ ಹರಿವು ಸ್ಥಿರವಾಗಿರಲು ನೈರುತ್ಯ ದಿಕ್ಕಿನಲ್ಲಿ ಈ ಪರಿಹಾರ ಮಾಡಿ