Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 16 ಮಾರ್ಚ್ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸರಿಯಾದ ನಿರ್ಧಾರ ಕೈಗೊಳ್ಳಲು ಯಾವುದೇ ಅಳುಕು ಬೇಕಾಗಿಲ್ಲ. ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂಬ ಹಿಂಜರಿಕೆ ಬಿಡಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಪ್ರಾಪ್ತಿಯಾಗಲಿದೆ.

ವೃಷಭ: ವ್ಯಾವಹಾರಿಕವಾಗಿ ನಿಮಗೆ ಆಗುತ್ತಿರುವ ಅಡ್ಡಿ ಆತಂಕಗಳನ್ನು ನಿವಾರಿಸಲು ದಾರಿ ಹುಡುಕಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ.

ಮಿಥುನ: ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿಡಲು ಹರಸಾಹಸ ಪಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆ, ಸಂಯಮವಿರಲಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯದಿಂದ ತಪ್ಪಿಸಿಕೊಳ್ಳಬಹುದು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ ಕೂಡಿಬರಲಿದೆ.

ಸಿಂಹ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಕೊರತೆಯಿಂದ ವೈಮನಸ್ಯವುಂಟಾದೀತು. ಪ್ರೀತಿ ಪಾತ್ರರ ಸಲಹೆಗಳಿಗೆ ಕಿವಿಗೊಡಿ. ವೃತ್ತರಂದಲ್ಲಿ ಮೇಲಧಿಕಾರಿಗಳ ಮಾತಿಗೆ ಬೆಲೆಕೊಡಿ. ಬೇಡದ ವಿವಾದ ಮೈಮೇಲೆಳೆದುಕೊಳ್ಳಬೇಡಿ.

ಕನ್ಯಾ: ಎಷ್ಟೋ ದಿನದಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ ಕೂಡಿಬರಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು.

ತುಲಾ: ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ನೆರೆಹೊರೆಯವರಿಂದ ಸಹಾಯ ಸಿಗುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ವೃಶ್ಚಿಕ: ಕಾರ್ಯರಂಗದಲ್ಲಿ ಮುನ್ನಡೆಯ ಯೋಗವಿದ್ದು, ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ನಿಮ್ಮ ಒಳ್ಳೆಯ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಧನು: ಅತಿಯಾಗಿ ಇನ್ನೊಬ್ಬರನ್ನು ಕಾಳಜಿ ವಹಿವುದು, ಚಿಂತೆ ಮಾಡುವುದು ಒಳ್ಳೆಯದಲ್ಲ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಲು ಕೆಲವು ಕಾಲ ಕಾಯಬೇಕಾದೀತು. ತಾಳ್ಮೆಯಿರಲಿ.

ಮಕರ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಕುಟುಂಬ ಸದಸ್ಯರ ಅಭಿಪ್ರಾಯಗಳಿಗೆ ಮನ್ನಣೆ ನೀಡಿ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಆತಂಕವುಂಟುಮಾಡೀತು.

ಕುಂಭ: ಅತಿಯಾಗಿ ಬಯಸಿದ ವಸ್ತು ನಿಮ್ಮ ಕೈ ಸೇರಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಾದೀತು. ಸಂಗಾತಿಗೆ ಅಚ್ಚರಿಯ ಉಡುಗೊರೆ ನೀಡಿ ಖುಷಿಪಡಿಸಲಿದ್ಧೀರಿ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಅಂದುಕೊಂಡ ಕೆಲಸಗಳು ನೆರವೇರಲಿದೆ. ಅರ್ಧಕ್ಕೇ ನಿಂತಿದ್ದ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿಂದಿರಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments