Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 17 ಮಾರ್ಚ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ತಾಳ್ಮೆಯಿಂದ ನಡೆದುಕೊಳ್ಳುವ ಅಗತ್ಯವಿದೆ. ಯಾವುದೇ ವಿಚಾರವಿರಲಿ ಆತುರದ ನಿರ್ಧಾರ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಷಭ: ಅನವಶ್ಯಕವಾಗಿ ವಾದ ವಿವಾದಗಳಿಗೆ ಆಸ್ಪದ ಕೊಡಬೇಡಿ. ಉದ್ಯೋಗ ಕ್ಷೇತ್ರದಲ್ಲಿ ಭಾವನೆಗಳನ್ನು ನಿಯಂತ್ರಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಮಿಥುನ: ಯಾವುದೇ ಆತುರದ ನಿರ್ಧಾರಗಳಿಂದ ಒಳಿತಾಗದು. ಮನೆಯ ವಿಚಾರದಲ್ಲಿ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಒಳ್ಳೆಯದು. ಮನಸ್ಸಿನ ಆಸೆಗಳನ್ನು ಪೂರೈಸಿಕೊಳ್ಳಲಿದ್ದೀರಿ. ಖರ್ಚು ವೆಚ್ಚಗಳಾಗಲಿದೆ.

ಕರ್ಕಟಕ: ಯೋಗ್ಯ ವಯಕಸ್ರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದ್ಯೋಗಿಗಳೊಂದಿಗೆ ಯಾವುದೇ ಭಿನ್ನಾಭಿಪ್ರಾಯಗಳಾಗದಂತೆ ನೋಡಿಕೊಳ್ಳಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ರಾಜಕೀಯವಾಗಿ ನಿಮ್ಮ ಶತ್ರುಗಳ ಕಾಟ ಕಡಿಮೆಯಾಗುವುದು. ಕ್ರಿಯಾತ್ಮಕಕವಾಗಿ ಯೋಚನೆ ಮಾಡಿ ಸಮಸ್ಯೆಗಳಿಂದ ದೂರವಾಗುವುದು ಉತ್ತಮ. ಸಂಬಂಧಿಕರ ಭೇಟಿಯಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಸಂಬಂಧದಲ್ಲಿ ಏರುಪೇರಾದೀತು. ತಾಳ್ಮೆ, ಸಂಯಮದಿಂದಿರಿ. ಎಲ್ಲವೂ ಒಳಿತಾಗುತ್ತದೆಂದು ಅಂದುಕೊಂಡಿದ್ದಾಗಲೇ ಅನಿರೀಕ್ಷಿತ ತಿರುವುಗಳು ಕಂಡುಬಂದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ನೀವು ಯಾವುದೇ ಹೆಜ್ಜೆಯಿಡುವಾಗಲೂ ನೂರಾರು ವಿಘ‍್ನಗಳು ಕಂಡುಬಂದೀತು. ಮಾನಸಿಕವಾಗಿ ಆತ್ಮಸ್ಥೈರ್ಯದಿಂದ ಮುನ್ನಡೆಯುವುದು ಅಗತ್ಯ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ.

ವೃಶ್ಚಿಕ: ಕಾರ್ಯಬಾಹುಳ್ಯದಿಂದಾಗಿ ಪ್ರೀತಿ ಪಾತ್ರರಿಗೆ ಸಮಯ ಒದಗಿಸಲು ಸಾಧ‍್ಯವಾಗದೇ ಹೋದೀತು. ಆದರೆ ಸಂಗಾತಿಯು ನಿಮ್ಮ ಕಷ್ಟಗಳಿಗೆ ಹೆಗಲು ಕೊಡಲಿದ್ದಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಧನು: ಇನ್ನೊಬ್ಬರ ಬಗ್ಗೆ ಅತಿಯಾಗಿ ಕಾಳಜಿ ಮಾಡುವುದೂ ಕೆಲವೊಮ್ಮೆ ಅನಾಹುತಕ್ಕೆ ಕಾರಣವಾದೀತು. ವಿಶೇಷ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿದೆ.

ಮಕರ: ಕರ್ತವ್ಯದಲ್ಲಿ ಏನೇ ಲೋಪ ಮಾಡಿದರೂ ಅದಕ್ಕೆ ದೊಡ್ಡ ಬೆಲೆ ತೆರಬೇಕಾದೀತು. ಕೌಟುಂಬಿಕವಾಗಿ ತೃಪ್ತಿ ಸಮಾಧಾನ ನೆಲೆಸಲಿದೆ. ಸಹೋದ್ಯೋಗಿಗಳ ಕಷ್ಟಕ್ಕೆ  ನೆರವಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಸ್ನೇಹಿತರೊಂದಿಗೆ ಮೋಜು ಮಸ್ತಿ ಮಾಡಲಿದ್ದೀರಿ. ಆದರೆ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಸ್ವಯಂ ಉದ್ಯೋಗಿಗಳಿಗೆಎ ಶತ್ರು ಕಾಟ ನಿವಾರಣೆಯಾದೀತು. ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಕಚೇರಿ ವಿಚಾರವನ್ನು ಮನೆಗೆ ತಂದು ಕೂಗಾಡುವುದರಿಂದ ಮನೆಯ ವಾತಾವರಣ ಹಾಳಾದೀತು. ತಾಳ್ಮೆ, ಸಂಯಮ ಅಗತ್ಯ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಾಳದೀತು. ದಿನದಂತ್ಯಕ್ಕೆ ಶುಭ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯೊಳಗೆ ಸಕರಾತ್ಮಕ ಶಕ್ತಿ ಪ್ರವೇಶಿಸಲು ಮುಖ್ಯ ದ್ವಾರದ ಬಳಿ ಹೀಗೆ ಮಾಡಿ