Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 18 ಮಾರ್ಚ್ 2021 (08:47 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನೆಯಲ್ಲಿ ನಡೆಯಬೇಕಿರುವ ಶುಭ ಕಾರ್ಯಗಳಿಗೆ ವಿಘ್ನಭಯ ಕಂಡುಬಂದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ. ಕಾರ್ಯಸಾಧನೆಗೆ ಪರಿಶ್ರಮ ಅಗತ್ಯ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.

ವೃಷಭ: ಬ್ಯಾಂಕ್ ಮತ್ತಿತರ ನೌಕರರಿಗೆ ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸಗಳಿಂದ ದೇಹಾಯಾಸವಾದೀತು. ಸಾಂಸಾರಿಕವಾಗಿ ಅನಗತ್ಯ ಅಪವಾದವೊಂದು ನಿಮ್ಮ ಮೇಲೆ ಬರಲಿದೆ. ತಾಳ್ಮೆ, ಸಂಯಮದಿಂದಿರಿ.

ಮಿಥುನ: ಕಾರ್ಯಸಾಧನೆಗಾಗಿ ಕಿರು ಪ್ರಯಾಣ ಮಾಡಬೇಕಾಗಿ ಬರುತ್ತದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಅಭಿಪ್ರಾಯಗಳಿಗೂ ಕೆಲವೊಮ್ಮೆ ಬೆಲೆ ಕೊಡಬೇಕಾಗುತ್ತದೆ. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ.

ಕರ್ಕಟಕ: ಆತ್ಮೀಯರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಆಸ್ತಿ ಖರೀದಿಗೆ ಮುಂದಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಬಾಕಿ ಹಣ ಸಂದಾಯವಾಗಲಿದೆ. ಪ್ರಯತ್ನಪಟ್ಟರೆ ಎಂತಹ ಕೆಲಸವೇ ಆದರೂ ಯಶಸ್ಸು ಸಾಧಿಸಲಿದ್ದೀರಿ. ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಾಯ ಸಿಗಲಿದೆ.

ಕನ್ಯಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಪಾಲಿಸಬೇಕು. ವೃತ್ತಿರಂಗದಲ್ಲಿ ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಬೇಕಾಗುತ್ತದೆ.

ತುಲಾ: ವೃತ್ತಿರಂಗದಲ್ಲಿ ಅಧಿಕಾರ ಗಳಿಸಲು ಹಾವು ಏಟಿ ಆಟಕ್ಕೆ ಸಿದ್ಧರಾಗಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾದೀತು. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಾಂಸಾರಿಕವಾಗಿ ತಾಳ್ಮೆ ತಪ್ಪುವ ಸಂದರ್ಭಗಳು ಎದುರಾದೀತು. ಕೋಪದ ಕೈಗೆ ಬುದ್ಧಿ ಕೊಟ್ಟು ನಿರ್ಧಾರ ತಳೆಯಬೇಡಿ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ತಾಳ್ಮೆ, ಸಂಯಮ ಅಗತ್ಯ.

ಧನು: ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಸಂಗಾತಿಯ ಮಾತಿಗೆ ಬೆಲೆಕೊಡಿ. ಮಹಿಳೆಯರಿಗೆ ಸಹೋದರರಿಂದ ಶುಭ ಸಮಾಚಾರ ಕೇಳಿಬಂದೀತು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಮಕರ: ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ವಿಘ‍್ನ ಭಯ ನಿವಾರಣೆಯಾಗಲಿದೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಇದುವರೆಗೆ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆಪ್ತರೊಂದಿಗೆ ಅಮೂಲ್ಯ ಸಮಯ ಕಳೆಯಲಿದ್ದೀರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಸರಕಾರಿ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ.

ಮೀನ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಭೂ ವ್ಯವಹಾರದಲ್ಲಿ ಲಾಭವಾಗಲಿದೆ. ಗೃಹಿಣಿಯರಿಗೆ ಚಿನ್ನಾಭರಣ ಖರೀದಿಯ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪಿತಪ್ಪಿಯೂ ಈ ದಿನಗಳಂದು ಪೀಠೋಪಕರಣಗಳನ್ನು ಖರೀದಿಸಬೇಡಿ