Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 23 ಮಾರ್ಚ್ 2021 (08:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ದುಡುಕಿನ ನಿರ್ಧಾರದಿಂದ ಅನಾಹುತವೇ ಹೆಚ್ಚು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಗಳಿಸಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾದ ಅಗತ್ಯವಿದೆ. ಅನ್ಯರ ದೂಷಣೆಯಲ್ಲಿ ಕಾಲ ಹರಣ ಮಾಡಬೇಡಿ. ಯೋಗ್ಯ ವಯಸ್ಕರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗಬಹುದು.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು.

ಕರ್ಕಟಕ: ಅನಗತ್ಯ ವಿವಾದಗಳಿಗೆ ಮೂಗು ತೂರಿಸಲು ಹೋದರೆ ಅಪಾಯವೇ ಹೆಚ್ಚು. ಯಾವುದೇ ವಿಚಾರವನ್ನಾದರೂ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ಯೋಗ್ಯ ವಯಸ್ಕರಿಗೆ ಉತ್ತಮ ಸಲಹೆಗಳನ್ನು ಪಡೆಯಲಿದ್ದೀರಿ.

ಸಿಂಹ: ಸರಿಯಾದ ಸಮಯಕ್ಕೆ ಹಣಕಾಸಿನ ನೆರವು ಸಿಗುವುದರಿಂದ ಆರ್ಥಿಕ ಸಂಕಷ್ಟದಿಂದ ಪಾರಾಗಲಿದ್ದೀರಿ. ಎಷ್ಟೋ ದಿನದಿಂದ ಭೇಟಿ ಮಾಡಬೇಕೆಂದಿದ್ದ ವ್ಯಕ್ತಿ ಎದುರಾಗಲಿದ್ದಾರೆ. ಕಳೆದು ಹೋದ ವಸ್ತುವಿನ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ಕನ್ಯಾ: ಇಚ್ಛಾ ಶಕ್ತಿಯ ಕೊರತೆಯಿಂದ ಅಂದುಕೊಂಡ ಕೆಲಸಗಳು ನಡೆಯದೇ ಹೋದೀತು. ಸಂಗಾತಿಯ ಸಲಹೆಗಳನ್ನು ಉಪಯುಕ್ತವೆನಿಸಲಿದೆ. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲು ಹಿರಿಯರ ಸಹಾಯ ಪಡೆಯಲಿದ್ದೀರಿ.

ತುಲಾ: ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಯೋಜನೆಗಳಿಗೆ ಮನ್ನಣೆ ಸಿಗಲಿದೆ. ಸಹೋದ್ಯೋಗಿಗಳು ನಿಮ್ಮ ಪರಿಶ್ರಮವನ್ನು ಕೊಂಡಾಡಲಿದ್ದಾರೆ. ಆರ್ಥಿಕವಾಗಿ ಬೇಡದ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.

ವೃಶ್ಚಿಕ: ಬಂದುದನ್ನು ಬಂದ ಹಾಗೆಯೇ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಸರಕಾರಿ ಉದ್ಯೋಗಿಗಳಿಗೆ ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಮಿತ್ರರ ಬಗ್ಗೆ ಅನವಶ್ಯಕ ತಪ್ಪು ಅಭಿಪ್ರಾಯಗಳು ದೂರವಾಗಲಿದೆ.

ಧನು: ಬೇರೆಯವರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳಿಗೆ ಭವಿಷ್ಯದ ದೃಷ್ಟಿಯಿಂದ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಯೋಚಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಎಷ್ಟೋ ದಿನದಿಂದ ಕಾಡುತ್ತಿದ್ದ ಸಮಸ್ಯಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗುವಿರಿ. ನೆರೆಹೊರೆಯವರ ಸಹಾಯ ಹಸ್ತ ಸ್ವೀಕರಿಸಲಿದ್ದೀರಿ.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬಿಟ್ಟು ಕೆಲಸ ಮಾಡಿ. ಸಂಗಾತಿಯ ಪ್ರೋತ್ಸಾಹಕರ ಮಾತುಗಳು ಮನಸ್ಸಿನ ಉತ್ಸಾಹ ಹೆಚ್ಚಿಸಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ.

ಮೀನ: ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಕೌಟುಂಬಿಕ ಸಮಸ್ಯೆಗಳನ್ನು ಉಪೇಕ್ಷಿಸಿದರೆ ಮುಂದೆ ತೊಂದರೆಯಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೋಲಾಷ್ಟಕ್ ಸಮಯದಲ್ಲಿ ಈ ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ!