Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 25 ಮಾರ್ಚ್ 2021 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕ ರಂಗದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೀವು ಹಿಂದೆ ಮಾಡಿದ ಕೆಲಸಕ್ಕೆ ಇಂದು ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ವೃಷಭ: ನಿಮ್ಮ ಜೀವನಕ್ಕೆ ನೀವೇ ಹೊಣೆಗಾರರು. ಅತಿಯಾಗಿ ಇನ್ನೊಬ್ಬರ ಅಭಿಪ್ರಾಯಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಇಷ್ಟು ದಿನ ದೂರವಿದ್ದ ಸಂಬಂಧಗಳು ಅನಿರೀಕ್ಷಿತವಾಗಿ ಹತ್ತಿರವಾಗಲಿದೆ. ಕಾರ್ಯಸಾಧನೆಗೆ ಸತತ ಪ್ರಯತ್ನ ಅಗತ್ಯ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಾರ್ಯನಿಮಿತ್ತ ಓಡಾಟ ನಡಸಲಿದ್ದೀರಿ.

ಕರ್ಕಟಕ: ಯಂತ್ರೋಪಕರಣಗಳ ರಿಪೇರಿ ನಿಮಿತ್ತ ಅಧಿಕ ಖರ್ಚುವೆಚ್ಚಗಳಾದೀತು. ಸಾಲಗಾರರ ಚಿಂತೆ ಕಾಡಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಅನ್ಯರ ವಿಚಾರದಲ್ಲಿ ಮೂಗು ತೂರಿಸಲು ಹೋಗದಿದ್ದರೆ ಲೇಸು.

ಸಿಂಹ: ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಪ್ರೇಮಿಗಳ ಮನೆಯವರ ಸಹಮತಿ ಸಿಗುವುದು. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಿವು. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಚಿಂತಿಸಲಿದ್ದೀರಿ.

ಕನ್ಯಾ: ಬೇರೆಯವರು ಏನಂದುಕೊಳ್ಳುತ್ತಾರೋ ಎಂಬ ಕೀಳರಿಮೆ ಇಲ್ಲದೇ ನಿಮ್ಮ ಕೆಲಸದಲ್ಲಿ ತೊಡಗಿಸಿಕೊಳ್ಳಿ. ಮೇಲಧಿಕಾರಿಗಳ ಕಿರಿ ಕಿರಿಗೆ ಉದಾಸೀನವೇ ಮದ್ದು. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭವಾದೀತು.

ತುಲಾ: ಅತಿಯಾಗಿ ಹಚ್ಚಿಕೊಂಡಿದ್ದವರಿಂದಲೇ ನೋವು ಅನುಭವಿಸುವ ಪರಿಸ್ಥಿತಿ ಎದುರಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ಹೂಡಿಕೆ ವ್ಯವಹಾರಗಳಲ್ಲಿ ಕೊಂಚ ಚೇತರಿಕೆಯ ವಾತಾವರಣ ಕಂಡುಬರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಧನು: ದಾಯಾದಿ ಕಲಹಗಳು ಕೋರ್ಟು ಮೆಟ್ಟಿಲೇರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸರಕಾರಿ ಕೆಲಸದಲ್ಲಿರುವವರಿಗೆ ಉನ್ನತ ಮಟ್ಟಕ್ಕೇರುವ ಯೋಗ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ.

ಮಕರ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ಆರ್ಥಿಕ ವಿಚಾರದಲ್ಲಿ ಆಶಾದಾಯಕ ವಾತಾವರಣವಿರಲಿದೆ. ಹೊಸ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ತಾಳ್ಮೆಯಿರಲಿ.

ಕುಂಭ: ಮಾನಸಿಕವಾಗಿ ಉತ್ಸಾಕ ಕಳೆದುಕೊಳ್ಳದಂತೆ ನೋಡಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಎಚ್ಚರಿಕೆಯಿಂದಿರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ಮೀನ: ಮಕ್ಕಳ ವಿದ್ಯಾಭ್ಯಾಸ ವಿಚಾರವಾಗಿ ಸಂಗಾತಿಯೊಂದಿಗೆ ಚರ್ಚೆ ನಡೆಸಲಿದ್ದೀರಿ. ಹೊಸ ಯೋಚನೆಗಳಿಗೆ ಮನಸ್ಸು ತೆರೆದುಕೊಳ್ಳಲಿ. ಗೃಹ ನಿರ್ಮಾಣ ವಿಚಾರವಾಗಿ ಓಡಾಟ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಆರ್ಥಿಕ ಅಭಿವೃದ್ಧಿಯನ್ನು ಸೂಚಿಸುತ್ತದೆ ಈ ಕನಸು