Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 25 ಮಾರ್ಚ್ 2021 (08:56 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಮಾಜಿಕ ರಂಗದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೀವು ಹಿಂದೆ ಮಾಡಿದ ಕೆಲಸಕ್ಕೆ ಇಂದು ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ವೃಷಭ: ನಿಮ್ಮ ಜೀವನಕ್ಕೆ ನೀವೇ ಹೊಣೆಗಾರರು. ಅತಿಯಾಗಿ ಇನ್ನೊಬ್ಬರ ಅಭಿಪ್ರಾಯಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಇಷ್ಟು ದಿನ ದೂರವಿದ್ದ ಸಂಬಂಧಗಳು ಅನಿರೀಕ್ಷಿತವಾಗಿ ಹತ್ತಿರವಾಗಲಿದೆ. ಕಾರ್ಯಸಾಧನೆಗೆ ಸತತ ಪ್ರಯತ್ನ ಅಗತ್ಯ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಾರ್ಯನಿಮಿತ್ತ ಓಡಾಟ ನಡಸಲಿದ್ದೀರಿ.

ಕರ್ಕಟಕ: ಯಂತ್ರೋಪಕರಣಗಳ ರಿಪೇರಿ ನಿಮಿತ್ತ ಅಧಿಕ ಖರ್ಚುವೆಚ್ಚಗಳಾದೀತು. ಸಾಲಗಾರರ ಚಿಂತೆ ಕಾಡಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಅನ್ಯರ ವಿಚಾರದಲ್ಲಿ ಮೂಗು ತೂರಿಸಲು ಹೋಗದಿದ್ದರೆ ಲೇಸು.

ಸಿಂಹ: ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಭಾಗ್ಯ ಕೂಡಿಬರಲಿದೆ. ಪ್ರೇಮಿಗಳ ಮನೆಯವರ ಸಹಮತಿ ಸಿಗುವುದು. ಕೌಟುಂಬಿಕವಾಗಿ ಸಂತೋಷದಾಯಕ ದಿನಗಳಿವು. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಚಿಂತಿಸಲಿದ್ದೀರಿ.

ಕನ್ಯಾ: ಬೇರೆಯವರು ಏನಂದುಕೊಳ್ಳುತ್ತಾರೋ ಎಂಬ ಕೀಳರಿಮೆ ಇಲ್ಲದೇ ನಿಮ್ಮ ಕೆಲಸದಲ್ಲಿ ತೊಡಗಿಸಿಕೊಳ್ಳಿ. ಮೇಲಧಿಕಾರಿಗಳ ಕಿರಿ ಕಿರಿಗೆ ಉದಾಸೀನವೇ ಮದ್ದು. ಕೊಡು ಕೊಳ್ಳುವ ವ್ಯವಹಾರದಲ್ಲಿ ಲಾಭವಾದೀತು.

ತುಲಾ: ಅತಿಯಾಗಿ ಹಚ್ಚಿಕೊಂಡಿದ್ದವರಿಂದಲೇ ನೋವು ಅನುಭವಿಸುವ ಪರಿಸ್ಥಿತಿ ಎದುರಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ಹೂಡಿಕೆ ವ್ಯವಹಾರಗಳಲ್ಲಿ ಕೊಂಚ ಚೇತರಿಕೆಯ ವಾತಾವರಣ ಕಂಡುಬರಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಧನು: ದಾಯಾದಿ ಕಲಹಗಳು ಕೋರ್ಟು ಮೆಟ್ಟಿಲೇರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸರಕಾರಿ ಕೆಲಸದಲ್ಲಿರುವವರಿಗೆ ಉನ್ನತ ಮಟ್ಟಕ್ಕೇರುವ ಯೋಗ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ.

ಮಕರ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ಆರ್ಥಿಕ ವಿಚಾರದಲ್ಲಿ ಆಶಾದಾಯಕ ವಾತಾವರಣವಿರಲಿದೆ. ಹೊಸ ಯೋಜನೆಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ತಾಳ್ಮೆಯಿರಲಿ.

ಕುಂಭ: ಮಾನಸಿಕವಾಗಿ ಉತ್ಸಾಕ ಕಳೆದುಕೊಳ್ಳದಂತೆ ನೋಡಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಎಚ್ಚರಿಕೆಯಿಂದಿರಿ. ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಕುಲದೇವರ ಪ್ರಾರ್ಥನೆಯಿಂದ ಶುಭವಾಗುವುದು.

ಮೀನ: ಮಕ್ಕಳ ವಿದ್ಯಾಭ್ಯಾಸ ವಿಚಾರವಾಗಿ ಸಂಗಾತಿಯೊಂದಿಗೆ ಚರ್ಚೆ ನಡೆಸಲಿದ್ದೀರಿ. ಹೊಸ ಯೋಚನೆಗಳಿಗೆ ಮನಸ್ಸು ತೆರೆದುಕೊಳ್ಳಲಿ. ಗೃಹ ನಿರ್ಮಾಣ ವಿಚಾರವಾಗಿ ಓಡಾಟ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments