Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 26 ಮಾರ್ಚ್ 2021 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿಗೆ ಆದ ನೋವುಗಳನ್ನು ಮರೆಯಲು ಹೊಸ ವಿಚಾರಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕ್ರಿಯಾತ್ಮಕ ಕೆಲಸಗಳನ್ನು ಮಾಡಿ ಸಂತೋಷಪಡೆಯುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಅನಗತ್ಯವಾಗಿ ಇನ್ನೊಬ್ಬರ ತಂಟೆಗೆ ಹೋಗದೇ ಇದ್ದರೇ ಒಳ್ಳೆಯದು. ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗವಿದೆ. ಸಂಗಾತಿಯ ಬಹಳ ದಿನಗಳ ಕನಸು ನನಸು ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರಿಂದ ಸಮಸ್ಯೆಗಳು ಬಂದೀತು. ತಾಳ್ಮೆ, ಸಂಯಮವಿರಲಿ. ಸರಕಾರಿ ಕೆಲಸದಲ್ಲಿರುವವರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ಸಾಂಸಾರಿಕವಾಗಿ ನೀವು ಹೊಂದಾಣಿಕೆಯಿಂದಿದ್ದಷ್ಟೂ ಸಾಮರಸ್ಯವಿರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ನಷ್ಟವಾದೀತು. ಇನ್ನೊಬ್ಬರಿಗೆ ಸಾಲ ಕೊಡುವ ಮುನ್ನ ನೂರು ಬಾರಿ ಯೋಚಿಸಿ ಮುನ್ನಡೆಯುವುದು ಉತ್ತಮ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗುವುದರಿಂದ ಅಂದುಕೊಂಡ ಕೆಲಸಗಳಲ್ಲಿ ಹಿನ್ನಡೆಯುಂಟಾದೀತು. ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಹೆಜ್ಜೆಯಿಡಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ.

ಕನ್ಯಾ: ಅಧಿಕ ಲಾಭಕ್ಕೆ ಆಸೆಪಟ್ಟು ಇದ್ದುದನ್ನು ಕಳೆದುಕೊಳ್ಳಬೇಡಿ. ಯಾವುದೇ ವ್ಯವಹಾರ ಮಾಡುವಾಗ ಸರಿಯಾಗಿ ಯೋಚಿಸಿ ಹೆಜ್ಜೆಯಿಡಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮನ್ನು ಇದುವರೆಗೆ ಕಾಡುತ್ತಿದ್ದ ಸಮಸ್ಯೆಗೆ ಒಂದು ರೀತಿಯಲ್ಲಿ ಅಂತ್ಯ ಹಾಡಲಿದ್ದೀರಿ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ವೆಚ್ಚ ನಿಯಂತ್ರಣ ಮಾಡಿ.

ವೃಶ್ಚಿಕ: ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ. ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬಂದಾಗ ಬಳಸಿಕೊಳ್ಳಿ. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಲಿದೆ. ಹಣಕಾಸಿನ ಆದಾಯ ಮೂಲಗಳು ವೃದ್ಧಿಯಾದೀತು.

ಧನು: ಇಷ್ಟ ಮಿತ್ರರೊಂದಿಗೆ ಸಂಚಾರ, ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಹೊಸ ಅತಿಥಿಗಳ ಆಗಮನವಾಗಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಮಕರ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತವಾಗಿ ದೂರ ಸಂಚಾರ ಮಾಡಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬಂದೀತು. ಅದನ್ನು ಸರಿಪಡಿಸಿಕೊಳ್ಳುವುದು ಉತ್ತಮ.

ಕುಂಭ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟಿನಿಂದ ನಿಮ್ಮ ಕನಸಿನ ಯೋಜನೆ ಅರ್ಧಕ್ಕೇ ನಿಂತೀತು. ನೆರೆಹೊರೆಯವರಿಂದ ನೆರವು ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಪ್ರತಿಫಲಾಪೇಕ್ಷೆಯಿಲ್ಲದೇ ಹಿಂದೆ ಮಾಡಿದ ಕೆಲಸಗಳಿಗೆ ಇಂದು ಫಲ ಸಿಗಲಿದೆ. ಹಣಕಾಸಿನ ಮುಗ್ಗಟ್ಟು ತೋರಿಬಂದರೂ ಸಕಾಲದಲ್ಲಿ ನೆರವೂ ಸಿಕ್ಕೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅದೃಷ್ಟವಂತರಾಗಲು ವಜ್ರವನ್ನು ಯಾರು? ಯಾವಾಗ ಧರಿಸಬೇಕು ಗೊತ್ತಾ?