Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 26 ಮಾರ್ಚ್ 2021 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಮನಸ್ಸಿಗೆ ಆದ ನೋವುಗಳನ್ನು ಮರೆಯಲು ಹೊಸ ವಿಚಾರಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕ್ರಿಯಾತ್ಮಕ ಕೆಲಸಗಳನ್ನು ಮಾಡಿ ಸಂತೋಷಪಡೆಯುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಅನಗತ್ಯವಾಗಿ ಇನ್ನೊಬ್ಬರ ತಂಟೆಗೆ ಹೋಗದೇ ಇದ್ದರೇ ಒಳ್ಳೆಯದು. ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗವಿದೆ. ಸಂಗಾತಿಯ ಬಹಳ ದಿನಗಳ ಕನಸು ನನಸು ಮಾಡಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರಿಂದ ಸಮಸ್ಯೆಗಳು ಬಂದೀತು. ತಾಳ್ಮೆ, ಸಂಯಮವಿರಲಿ. ಸರಕಾರಿ ಕೆಲಸದಲ್ಲಿರುವವರಿಗೆ ಉದ್ಯೋಗದಲ್ಲಿ ಮುನ್ನಡೆಯ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಕರ್ಕಟಕ: ಸಾಂಸಾರಿಕವಾಗಿ ನೀವು ಹೊಂದಾಣಿಕೆಯಿಂದಿದ್ದಷ್ಟೂ ಸಾಮರಸ್ಯವಿರಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ನಷ್ಟವಾದೀತು. ಇನ್ನೊಬ್ಬರಿಗೆ ಸಾಲ ಕೊಡುವ ಮುನ್ನ ನೂರು ಬಾರಿ ಯೋಚಿಸಿ ಮುನ್ನಡೆಯುವುದು ಉತ್ತಮ.

ಸಿಂಹ: ದೇಹಾರೋಗ್ಯದಲ್ಲಿ ಏರುಪೇರಾಗುವುದರಿಂದ ಅಂದುಕೊಂಡ ಕೆಲಸಗಳಲ್ಲಿ ಹಿನ್ನಡೆಯುಂಟಾದೀತು. ಆರ್ಥಿಕ ಪರಿಸ್ಥಿತಿಯನ್ನು ನೋಡಿಕೊಂಡು ಮುಂದಿನ ಹೆಜ್ಜೆಯಿಡಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ.

ಕನ್ಯಾ: ಅಧಿಕ ಲಾಭಕ್ಕೆ ಆಸೆಪಟ್ಟು ಇದ್ದುದನ್ನು ಕಳೆದುಕೊಳ್ಳಬೇಡಿ. ಯಾವುದೇ ವ್ಯವಹಾರ ಮಾಡುವಾಗ ಸರಿಯಾಗಿ ಯೋಚಿಸಿ ಹೆಜ್ಜೆಯಿಡಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮನ್ನು ಇದುವರೆಗೆ ಕಾಡುತ್ತಿದ್ದ ಸಮಸ್ಯೆಗೆ ಒಂದು ರೀತಿಯಲ್ಲಿ ಅಂತ್ಯ ಹಾಡಲಿದ್ದೀರಿ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ವೆಚ್ಚ ನಿಯಂತ್ರಣ ಮಾಡಿ.

ವೃಶ್ಚಿಕ: ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಕಂಡುಬರಲಿದೆ. ಉನ್ನತ ಸ್ಥಾನಕ್ಕೇರುವ ಯೋಗ ಕೂಡಿಬಂದಾಗ ಬಳಸಿಕೊಳ್ಳಿ. ಸಾಮಾಜಿಕವಾಗಿ ಪ್ರತಿಷ್ಠೆ ಹೆಚ್ಚಲಿದೆ. ಹಣಕಾಸಿನ ಆದಾಯ ಮೂಲಗಳು ವೃದ್ಧಿಯಾದೀತು.

ಧನು: ಇಷ್ಟ ಮಿತ್ರರೊಂದಿಗೆ ಸಂಚಾರ, ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಹೊಸ ಅತಿಥಿಗಳ ಆಗಮನವಾಗಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಮಕರ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತವಾಗಿ ದೂರ ಸಂಚಾರ ಮಾಡಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬಂದೀತು. ಅದನ್ನು ಸರಿಪಡಿಸಿಕೊಳ್ಳುವುದು ಉತ್ತಮ.

ಕುಂಭ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟಿನಿಂದ ನಿಮ್ಮ ಕನಸಿನ ಯೋಜನೆ ಅರ್ಧಕ್ಕೇ ನಿಂತೀತು. ನೆರೆಹೊರೆಯವರಿಂದ ನೆರವು ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಪ್ರತಿಫಲಾಪೇಕ್ಷೆಯಿಲ್ಲದೇ ಹಿಂದೆ ಮಾಡಿದ ಕೆಲಸಗಳಿಗೆ ಇಂದು ಫಲ ಸಿಗಲಿದೆ. ಹಣಕಾಸಿನ ಮುಗ್ಗಟ್ಟು ತೋರಿಬಂದರೂ ಸಕಾಲದಲ್ಲಿ ನೆರವೂ ಸಿಕ್ಕೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments