Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 27 ಮಾರ್ಚ್ 2021 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ, ಮುನ್ನಡೆಗೆ ಅವಕಾಶಗಳು ತೋರಿಬಂದಾಗಿ ಸರಿಯಾಗಿ ಬಳಸಿಕೊಳ್ಳಿ. ಆರ್ಥಿಕವಾಗಿ ಸಾಲಗಾರರ ಕಾಟ ಕಾಡಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೃಷಭ: ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ತೊಂದರೆಯಾಗದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೌಟುಂಬಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ಧೀರಿ.

ಮಿಥುನ: ಚಿಂತಿಸಿದ ಕಾರ್ಯವನ್ನು ಕಾರ್ಯರೂಪಕ್ಕೆ ತರಲು ನೂರೆಂಟು ವಿಘ್ನಗಳು ತೋರಿಬಂದೀತು. ತಾಳ್ಮೆ, ಸಂಯಮವಿರಲಿ. ಬೇರೆಯವರ ಕಷ್ಟಕ್ಕೆ ಆಗಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ವೈದ್ಯ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ವ್ಯಾಪಾರಿಗಳಿಗೆ ಹಣ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರುವುದು. ಯೋಗ್ಯ ವಯಸ್ಕರಿಗೆ ಸಂಗಾತಿಯ ಹುಡುಕಾಟ ಆರಂಭಿಸಲು ಇದು ಸಕಾಲ.

ಸಿಂಹ: ಅನಗತ್ಯ ಚಿಂತೆಗಳನ್ನು ಬದಿಗಿಟ್ಟು ಕಾರ್ಯರಂಗದಲ್ಲಿ ಪ್ರಗತಿ ಸಾಧಿಸಲು ದಾರಿ ಹುಡುಕಿಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕನ್ಯಾ: ವೈಯಕ್ತಿಕವಾಗಿ ಕೆಲವು ಮಾನಸಿಕ ಚಿಂತೆಗಳು ಕಾಡಿಬಂದೀತು. ಪ್ರೀತಿ ಪಾತ್ರರನ್ನು ಭೇಟಿಯಾಗಲಾಗದ ಹತಾಶೆ ಕಾಡಲಿದೆ. ಮಕ್ಕಳ ವಿಚಾರಕ್ಕೆ ಸಂಗಾತಿಯೊಂದಿಗೆ ಚರ್ಚೆ ನಡೆಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ನಿಮ್ಮದೇ ನಡೆಯಬೇಕೆಂಬ ಹಠ ಬಿಟ್ಟು ನಡೆದರೆ ಸಮಸ್ಯೆಗೆ ನಾನಾ ಪರಿಹಾರ ಸಿಕ್ಕೀತು. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಯುವಂತಹ ಪರಿಸ್ಥಿತಿ ಬಂದೀತು. ತಾಳ್ಮೆಯಿರಲಿ. ಖರ್ಚು ವೆಚ್ಚಗಳು ನಿಯಂತ್ರದಲ್ಲಿರಲಿ.

ವೃಶ್ಚಿಕ: ಕಳೆದು ಹೋದ ವಸ್ತುಗಳನ್ನು ಮರಳಿ ಪಡೆದ ಸಂತಸ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ವೈಯಕ್ತಿಕ ಅಭಿವೃದ್ಧಿ ಕಂಡುಬರುವುದು.

ಧನು: ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಬದಲಾವಣೆಯಾಗುವ ಸಾಧ್ಯತೆಯಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಿರು ಸಂಚಾರ ಮಾಡುವಿರಿ.

ಕುಂಭ: ಬೇಡದ ವಿಚಾರಕ್ಕೆ ಪ್ರೀತಿ ಪಾತ್ರರೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ವಿದ್ಯಾರ್ಥಿಗಳು ಸರಿಯಾದ ದಾರಿಯನ್ನು ಆರಿಸುವ ಸಂದರ್ಭ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿಗೆ ಆದ ಸಂತೋಷವನ್ನು ಹಿಡಿದಿಟ್ಟುಕೊಳ್ಳಲಾಗಂತಹ ಸಂದರ್ಭ ನಿಮ್ಮದಾಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕಾಸಿನಲ್ಲಿ ಅಭಿವೃದ್ಧಿ ಹೊಂದಲು ಈ 2 ಗ್ರಹಗಳ ಅನುಗ್ರಹ ಪಡೆಯಿರಿ