Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 27 ಮಾರ್ಚ್ 2021 (08:43 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಭಿವೃದ್ಧಿ, ಮುನ್ನಡೆಗೆ ಅವಕಾಶಗಳು ತೋರಿಬಂದಾಗಿ ಸರಿಯಾಗಿ ಬಳಸಿಕೊಳ್ಳಿ. ಆರ್ಥಿಕವಾಗಿ ಸಾಲಗಾರರ ಕಾಟ ಕಾಡಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೃಷಭ: ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ತೊಂದರೆಯಾಗದು. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೌಟುಂಬಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ಧೀರಿ.

ಮಿಥುನ: ಚಿಂತಿಸಿದ ಕಾರ್ಯವನ್ನು ಕಾರ್ಯರೂಪಕ್ಕೆ ತರಲು ನೂರೆಂಟು ವಿಘ್ನಗಳು ತೋರಿಬಂದೀತು. ತಾಳ್ಮೆ, ಸಂಯಮವಿರಲಿ. ಬೇರೆಯವರ ಕಷ್ಟಕ್ಕೆ ಆಗಲಿದ್ದೀರಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ವೈದ್ಯ ವೃತ್ತಿಯವರಿಗೆ ಮುನ್ನಡೆಯ ಯೋಗವಿದೆ. ವ್ಯಾಪಾರಿಗಳಿಗೆ ಹಣ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರುವುದು. ಯೋಗ್ಯ ವಯಸ್ಕರಿಗೆ ಸಂಗಾತಿಯ ಹುಡುಕಾಟ ಆರಂಭಿಸಲು ಇದು ಸಕಾಲ.

ಸಿಂಹ: ಅನಗತ್ಯ ಚಿಂತೆಗಳನ್ನು ಬದಿಗಿಟ್ಟು ಕಾರ್ಯರಂಗದಲ್ಲಿ ಪ್ರಗತಿ ಸಾಧಿಸಲು ದಾರಿ ಹುಡುಕಿಕೊಳ್ಳಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಕನ್ಯಾ: ವೈಯಕ್ತಿಕವಾಗಿ ಕೆಲವು ಮಾನಸಿಕ ಚಿಂತೆಗಳು ಕಾಡಿಬಂದೀತು. ಪ್ರೀತಿ ಪಾತ್ರರನ್ನು ಭೇಟಿಯಾಗಲಾಗದ ಹತಾಶೆ ಕಾಡಲಿದೆ. ಮಕ್ಕಳ ವಿಚಾರಕ್ಕೆ ಸಂಗಾತಿಯೊಂದಿಗೆ ಚರ್ಚೆ ನಡೆಸುವಿರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ತುಲಾ: ನಿಮ್ಮದೇ ನಡೆಯಬೇಕೆಂಬ ಹಠ ಬಿಟ್ಟು ನಡೆದರೆ ಸಮಸ್ಯೆಗೆ ನಾನಾ ಪರಿಹಾರ ಸಿಕ್ಕೀತು. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಯುವಂತಹ ಪರಿಸ್ಥಿತಿ ಬಂದೀತು. ತಾಳ್ಮೆಯಿರಲಿ. ಖರ್ಚು ವೆಚ್ಚಗಳು ನಿಯಂತ್ರದಲ್ಲಿರಲಿ.

ವೃಶ್ಚಿಕ: ಕಳೆದು ಹೋದ ವಸ್ತುಗಳನ್ನು ಮರಳಿ ಪಡೆದ ಸಂತಸ ನಿಮ್ಮದಾಗಲಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ದಾಯಾದಿ ಕಲಹಗಳಿಗೆ ಅಂತ್ಯ ಸಿಗಲಿದೆ. ವೈಯಕ್ತಿಕ ಅಭಿವೃದ್ಧಿ ಕಂಡುಬರುವುದು.

ಧನು: ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಬದಲಾವಣೆಯಾಗುವ ಸಾಧ್ಯತೆಯಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಕಿರು ಸಂಚಾರ ಮಾಡುವಿರಿ.

ಕುಂಭ: ಬೇಡದ ವಿಚಾರಕ್ಕೆ ಪ್ರೀತಿ ಪಾತ್ರರೊಂದಿಗೆ ಸಂಘರ್ಷಕ್ಕಿಳಿಯಬೇಡಿ. ಸ್ವಯಂ ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ವಿದ್ಯಾರ್ಥಿಗಳು ಸರಿಯಾದ ದಾರಿಯನ್ನು ಆರಿಸುವ ಸಂದರ್ಭ ಎದುರಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿಗೆ ಆದ ಸಂತೋಷವನ್ನು ಹಿಡಿದಿಟ್ಟುಕೊಳ್ಳಲಾಗಂತಹ ಸಂದರ್ಭ ನಿಮ್ಮದಾಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments