Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 30 ಮಾರ್ಚ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೈಚಾರಿಕವಾಗಿ ಭಿನ್ನತೆಯಿದ್ದರೂ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ನಿಮ್ಮ ಏಳಿಗೆಗೆ ಪೂರಕವಾದ ಬೆಳವಣಿಗೆಗಳು ನಡೆಯಲಿವೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು.

ವೃಷಭ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಉದ್ಯೋಗ ಸಂಬಂಧೀ ಅಡೆತಡೆಗಳು ನಿವಾರಣೆಯಾಗಲಿವೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆಬರುವುದು. ತಾಳ್ಮೆಯಿರಲಿ.

ಮಿಥುನ: ನಿಮ್ಮ ಏಳಿಗೆಗೆ ಅಡ್ಡಿ ಉಂಟುಮಾಡುವವರನ್ನು ಎದುರಿಸಲು ಕಲಿಯಬೇಕು. ಸರಕಾರಿ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡವಿದ್ದೀತು. ಮಹಿಳೆಯರಿಗೆ ಮುಖ್ಯವಾಗಿ ತಾಳ್ಮೆ ಅಗತ್ಯ. ದುಡುಕು ಮಾತಿನಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ.

ಕರ್ಕಟಕ: ಒಳ್ಳೆಯ ಕೆಲಸಗಳಿಗೆ ಕೈ ಹಾಕಲು ಎಷ್ಟೋ ದಿನದಿಂದ ಕಾಯುತ್ತಿದ್ದ ಶುಭ ಗಳಿಗೆ ಇಂದು ಕೂಡಿಬರಲಿದೆ. ಪ್ರೀತಿಪಾತ್ರರ ಸಲಹೆ, ಸೂಚನೆಗಳು ಉಪಯೋಗಕ್ಕೆ ಬಂದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.

ಸಿಂಹ: ಪಿತೃ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಹಿವಹಿಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಕಾರ್ಯಸಾಧನೆಯಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಇಷ್ಟ-ಕಷ್ಟಗಳಿಗೆ ಸಂಗಾತಿ ಹೆಗಲುಕೊಡಲಿದ್ದಾರೆ. ಯಾವುದೇ ವಿಚಾರವಾದರೂ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ತುಲಾ: ಮನಸ್ಸಿನ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ವ್ಯಾವಹಾರಿಕವಾಗಿ ನಿಮ್ಮ ಕೆಲಸಗಳು ಯಶಸ್ವಿಯಾಗಲಿವೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಶ್ಚಿಕ: ನಿಮ್ಮ ವೈಯಕ್ತಿಕ ಅಭಿಪ್ರಾಯಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಬೆಲೆ ಸಿಗದೇ ನಿರಾಸೆಯಾದೀತು. ಮೇಲಧಿಕಾರಿಗಳ ಸಲಹೆ ಪಾಲಿಸುವುದು ಉತ್ತಮ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗವಿದೆ. ತಾಳ್ಮೆಯಿರಲಿ.

ಧನು: ನಿಮ್ಮ ಅವಕಾಶ ಬರುವವರೆಗೂ ಕಾಯಬೇಕಾಗುತ್ತದೆ. ವಿದ್ಯಾರ್ಥಿಗಳು ಹೊಸ ಸವಾಲುಗಳನ್ನು ಎದುರಿಸಲಿದ್ದಾರೆ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು. ಅಧಿಕ ಖರ್ಚು ವೆಚ್ಚಗಳಿಗೆ ನಿಯಂತ್ರಣ ವಿಧಿಸಿ.

ಮಕರ: ಮನೋಭಿಲಾಷೆ ಪೂರೈಸಲು ಖರ್ಚು ವೆಚ್ಚಗಳಾದೀತು. ಆದಾಯಕ್ಕೆ ಹೊಸ ಮೂಲಗಳನ್ನು ಹುಡುಕಲಿದ್ದೀರಿ. ಸಂಗಾತಿಯ ಕೆಲವೊಂದು ಮಾತುಗಳು ನಿಮ್ಮಲ್ಲಿ ಅಸಮಾಧಾನ ತಂದೀತು. ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕುಂಭ: ಮಹಿಳೆಯರಿಗೆ ತವರಿನ ಕಡೆಯಿಂದ ಶುಭ ಸಮಾಚಾರ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಹೊಡೆತ ಬೀಳಲಿದೆ. ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿನ ಅಸಮಾಧಾನಗಳನ್ನು ಮನೆಯವರ ಮೇಲೆ ತೋರಿಸಲು ಹೋಗಬೇಡಿ. ಇದರಿಂದ ಕೌಟುಂಬಿಕ ನೆಮ್ಮದಿ ಹಾಳಾದೀತು. ನೆರೆಹೊರೆಯವರಿಂದ ಕಷ್ಟದ ಸಮಯದಲ್ಲಿ ನೆರವು ಸಿಗಲಿದೆ. ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

Shiva Mantra: ಸೋಮವಾರ ಶಿವನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

Shani Mantra: ಶನಿ ದೋಷ ಇರುವವರು ತಪ್ಪದೇ ಈ ಶನಿ ಮಂತ್ರವನ್ನು ಜಪಿಸಿ

Lakshmi Mantra: ಶುಕ್ರವಾರ ಮನೆಯಲ್ಲಿ ಐಶ್ವರ್ಯ ನೆಲೆಸಲು ಈ ಸ್ತೋತ್ರ ಓದಿ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments