ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 31 ಮಾರ್ಚ್ 2021 (07:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಿರಿಯರಿಗೆ ದೇಹಾರೋಗ್ಯದಲ್ಲಿ ಸಮಸ್ಯೆಗಳು ಕಂಡುಬಂದೀತು. ಸಾಂಸಾರಿಕವಾಗಿ ಸಂಬಂಧಗಳು ಕೆಡದಂತೆ ಕಾಪಾಡಿಕೊಳ್ಳಲು ಕೆಲವು ಹೊಂದಾಣಿಕೆ ಮಾಡಬೇಕಾಗುತ್ತದೆ. ಮೇಲಧಿಕಾರಿಗಳೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ವೃಷಭ: ಆತುರದಲ್ಲಿ ವಿವೇಕರಹಿತವಾಗಿ ಕೈಗೊಳ್ಳುವ ನಿರ್ಧಾರದಿಂದ ತೊಂದರೆಯಾದೀತು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲು ಆಹ್ವಾನ ಬರಲಿದೆ. ವ್ಯವಹಾರದಲ್ಲಿ ಆರ್ಥಿಕವಾಗಿ ಮುನ್ನಡೆಯಿದ್ದೀತು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕುಟುಂಬದಲ್ಲಿ ಇದುವರೆಗೆ ಇದ್ದ ಸಂಘರ್ಷದ ವಾತಾವರಣ ತಿಳಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರೈಸಲಿದ್ದೀರಿ. ವಾಹನ ಸಂಚಾರದಲ್ಲಿ ಅಪಘಾತದ ಭಯವಿದೆ, ಎಚ್ಚರ.

ಕರ್ಕಟಕ: ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕೂಡಿಬಂದೀತು. ಕೌಟುಂಬಿಕವಾಗಿ ಸಂಭ್ರಮಾಚರಣೆಗೆ ಸೂಕ್ತ ಸಮಯ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ವೃತ್ತಿರಂಗದಲ್ಲಿ ಕಾರ್ಯಬಾಹುಳ್ಯ ಅಧಿಕವೆನಿಸಲಿದೆ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಹೊಸದಾಗಿ ಸೃಷ್ಟಿಯಾಗುವ ಸಂಬಂಧಗಳಿಂದ ಲಾಭವಾಗಲಿದೆ. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪರಿಶ್ರಮಪಡಬೇಕಾದ ದಿನಗಳಿವು.

ಕನ್ಯಾ: ಕೌಟುಂಬಿಕವಾಗಿ ನಿಮ್ಮ ಕೆಲವೊಂದು ನಡೆ-ನುಡಿಗಳು ಇತರ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ವ್ಯಾವಹಾರಿಕವಾಗಿ ಚೇತರಿಕೆ ಕಂಡುಬರಲಿದೆ. ಕಿರು ಸಂಚಾರ ಮಾಡುವಿರಿ.

ತುಲಾ: ದೂರ ಸಂಚಾರದಿಂದ ದೇಹಾಯಾಸವಾದೀತು. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಯಂತ್ರಣವಿರಲಿ.

ವೃಶ್ಚಿಕ: ನಿಮ್ಮನ್ನು ಪುಸಲಾಯಿಸಿ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಎಚ್ಚರಿಕೆಯಿಂದಿರಿ. ಸಾಮರ್ಥ್ಯಕ್ಕಿಂತ ಹೆಚ್ಚಿನ ಕೆಲಸ ಮಾಡಿದರೆ ಆರೋಗ್ಯ ಸಮಸ್ಯೆ ಕಂಡುಬಂದೀತು. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕೆ ಕಾಯುವುದು ಒಳಿತು.

ಧನು: ಕೆಲಸ ಕಾರ್ಯಗಳಲ್ಲಿ ಕಷ್ಟಗಳು ಬರುವುದು ಸಾಮಾನ್ಯ. ಅವುಗಳನ್ನು ಎದುರಿಸಿಕೊಂಡು ಹೋಗುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಧಾರ್ಮಿಕವಾಗಿ ಭಕ್ತಿ ಭಾವ ಹೆಚ್ಚೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಮನಸ್ಸಿಗೆ ಒಂದು ರೀತಿಯ ನಿರುತ್ಸಾಹ ಕಾಡಲಿದ್ದು, ಯಾಂತ್ರಿಕವಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊ‍ಳ್ಳಲಿದ್ದೀರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ.

ಕುಂಭ: ಯಾವುದೇ ವಿಚಾರದಲ್ಲೂ ಆತುರದ ತೀರ್ಮಾನ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಅರ್ಧಕ್ಕೇ ನಿಂತ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮಹಿಳೆಯರಿಗೆ ಕಾರ್ಯದೊತ್ತಡದಿಂದ ಬಿಡುವು ಸಿಗಲಿದೆ.

ಮೀನ: ಉದ್ಯೋಗ ರಂಗದಲ್ಲಿ ಸಹೋದ್ಯೋಗಿಗಳೊಂದಿಗಿನ ಭಿನ್ನಾಭಿಪ್ರಾಯಗಳು ಸರಿ ಹೋಗಲಿವೆ.  ಆತ್ಮೀಯರೊಂದಿಗೆ ಉತ್ತಮ ಕ್ಷಣ ಕಳೆಯಲಿದ್ದೀರಿ. ಉದ್ಯೋಗ ಅನ್ವೇಷಣೆಯಲ್ಲಿದ್ದವರಿಗೆ ಸಿಹಿ ಸುದ್ದಿ. ಇಷ್ಟ ದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಮುಂದಿನ ಸುದ್ದಿ
Show comments