Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 1 ಏಪ್ರಿಲ್ 2021 (08:58 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ದೇಹಾರೋಗ್ಯದ ಬಗ್ಗೆ ನೀವೇ ಕಾಳಜಿವಹಿಸಬೇಕು. ರಾಜೀಮನೋಭಾವವಿದ್ದಲ್ಲಿ ಸಂಸಾರದಲ್ಲಿ ಸಾಮರಸ್ಯವರಿಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ದರಾಗಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯನಿಮಿತ್ತ ಸಹೋದ್ಯೋಗಿಗಳ ನೆರವು ಪಡೆಯಬೇಕಾಗುತ್ತದೆ. ನಯವಂಚಕರಿಂದ ದೂರವಿದ್ದರೆ ಉತ್ತಮ. ವಿದ್ಯಾರ್ಥಿಗಳಿಗೆ ಹಿಂದೆ ಕಲಿತ ವಿದ್ಯೆ ಫಲಕೊಡಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಕೌಟುಂಬಿಕವಾಗಿ ಆಸ್ತಿ ವಿಚಾರವಾಗಿ ಪೋಷಕರೊಂದಿಗೆ ಭಿನ್ನಾಭಿಪ್ರಾಯಗಳು ಮೂಡಿಬಂದೀತು. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ರಾಜಕೀಯ ರಂಗದಲ್ಲಿರುವವರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ಕರ್ಕಟಕ: ಸಂಗಾತಿಯ ಕೆಲಸಗಳಿಗೆ ಕೈಲಾದ ಸಹಾಯ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಎಷ್ಟೇ ಕೆಲಸ ಮಾಡಿದರೂ ತೃಪ್ತಿ ಭಾವವಿರದು. ನಿರುದ್ಯೋಗಿಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿದರೆ ದಾರಿ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ನಿಮ್ಮ ಮಾನಸಿಕ ಸಮಸ್ಯೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಕ್ಕಾಗಿ ಹುಡುಕಾಟ ಮುಂದುವರಿಯಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ.

ಕನ್ಯಾ: ಯಾವುದೇ ವಿಚಾರವಾದರೂ ಕುಟುಂಬ ಸದಸ್ಯರ ಅಭಿಪ್ರಾಯ ಪಡೆದು ಮುನ್ನಡೆಯುವುದು ಅಗತ್ಯ. ಪ್ರೀತಿ ವಿಚಾರವನ್ನು ಮನೆಯವರೆದುರು ಹೇಳಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ.

ತುಲಾ: ಹೊಸ ಯೋಜನೆಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಅಡಚಣೆಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ.

ವೃಶ್ಚಿಕ: ನಿಮ್ಮನ್ನು ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಹಿಳೆಯರಿಗೆ ತಾಳ್ಮೆ, ಸಮಾಧಾನವೇ ಅಸ್ತ್ರವಾಗಲಿದೆ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ.

ಧನು: ತಂದೆ-ಮಕ್ಕಳೊಡನೆ ಭಿನ್ನಾಭಿಪ್ರಾಯ ಬರುವ ಸಾಧ್ಯತೆಯಿದೆ. ನಿಮ್ಮ ಎಲ್ಲಾ ವ್ಯವಹಾರಗಳೂ ಮುಚ್ಚುಮರೆಯಿಲ್ಲದೇ ಸಾಗಲಿ. ಚಿಂತಿತ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಅಡಚಣೆಗಳು ಬಂದರೂ ಧೈರ್ಯಗೆಡಬೇಡಿ.

ಮಕರ: ಹಿರಿಯರಿಗೆ ತೀರ್ಥಯಾತ್ರೆ ಕೈಗೊಳ್ಳುವ ಕನಸು ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಚಿಂತೆ ಬೇಡ.

ಕುಂಭ: ಸಾಂಸಾರಿಕವಾಗಿ ವಿಶೇಷ ಗಮನವಿರುವುದು ಮುಖ್ಯ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ವಿದೇಶ ಯಾನ ಕೈಗೊಳ್ಳುವವರ ಕನಸು ಶೀಘ್ರದಲ್ಲೇ ನನಸಾಗಲಿದೆ.

ಮೀನ: ಸರಕಾರಿ ಉದ್ಯೋಗಿಗಳಿಗೆ ಶತ್ರುಬಾಧೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರುವುದು. ಕುಲದೇವರ ಪ್ರಾರ್ಥನೆ ನಡೆಸಿದರೆ ಸ್ವಲ್ಪ ಮಟ್ಟಿಗೆ ವಿಘ್ನ ನಿವಾರಣೆಯಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments