Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 2 ಏಪ್ರಿಲ್ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವೃತ್ತಿರಂಗದಲ್ಲಿ ಹಿತಶತ್ರುಗಳ ಕೈವಾಡದಿಂದ ಸಿಗಬೇಕಾದ ಸ್ಥಾನ ತಪ್ಪಿ ಹೋದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚ ಬೇಡ. ಮಕ್ಕಳ ಶಿಕ್ಷಣದಲ್ಲಿ ಉನ್ನತ ಸಾಧನೆಯಿಂದ ಸಂತೋಷ ಸಿಗಲಿದೆ.

ವೃಷಭ: ಸಾಂಸಾರಿಕವಾಗಿ ಜಂಜಾಟಗಳಿಂದ ಕೂಡಿದ ದಿನವಾಗಲಿದೆ. ನಿಮ್ಮ ಕೆಲವೊಂದು ನಿರ್ಧಾರಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾದೀತು.  ಆದಾಯ ಗಳಿಕೆಯಲ್ಲಿ ವೃದ್ಧಿಯಾದರೂ, ಖರ್ಚೂ ಅಷ್ಟೇ ಹೆಚ್ಚಾಗಲಿದೆ.

ಮಿಥುನ: ನೂತನ ಕಟ್ಟಡ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಸಂಗಾತಿಯ ಮನೋಭಿಲಾಷೆ ಪೂರೈಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಧಾರ್ಮಿಕ ಕ್ರಿಯೆಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿರಿಯರ ಮನೋಭಿಲಾಷೆಗಳು ಪೂರ್ತಿಯಾಗಲಿವೆ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗ ಸಿಗದೇ ನಿರಾಸೆಯಾದೀತು. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ಸಿಂಹ: ಹೆಚ್ಚು ವೇತನ ಪಡೆಯುವ ನಿಮ್ಮ ಕನಸು ನನಸಾಗಲು ಕೆಲವು ದಿನ ಕಾಯಬೇಕಾಗುತ್ತದೆ. ರಾಜಕೀಯ ರಂಗದಲ್ಲಿರುವವರಿಗೆ ಮುಂಗೋಪವೇ ಶತ್ರುವಾದೀತು. ಮಾನಸಿಕವಾಗಿ ಅಸ್ಥಿರತೆ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಸಾಂಸಾರಿಕವಾಗಿ ಸುಖವಿದ್ದರೂ ಅನವಶ್ಯಕ ಮಾತುಗಳಿಂದ ಭಿನ್ನಾಭಿಪ್ರಾಯಗಳು ಮೂಡಿಬಂದೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸುವುದು ಉತ್ತಮ. ಆಸ್ತಿ ವಿವಾದಗಳನ್ನು ಬಗೆಹರಿಸಲು ಹಿರಿಯರ ಸಲಹೆ ಪಡೆಯಿರಿ.

ತುಲಾ: ಕಳೆದು ಹೋಯಿತೆಂದು ಅಂದುಕೊಂಡಿದ್ದ ವಸ್ತುಗಳು ಮರಳಿ ಕೈಸೇರಲಿವೆ. ಮಹಿಳೆಯರಿಗೆ ಚಿನ್ನಾಭರಣ ಕೊಳ್ಳುವ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಕುಲದೇವರ ದೇವಾಲಯ ದರ್ಶನ ಮಾಡಿ.

ವೃಶ್ಚಿಕ: ಚಿಂತಿತ ಕಾರ್ಯಗಳು ಅಂದುಕೊಂಡಂತೆ ನಡೆಯಲು ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಬಡ್ತಿಯ ಪ್ರಯತ್ನಕ್ಕೆ ಫಲ ಸಿಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗುವುದು.

ಧನು: ವಿದ್ಯಾರ್ಥಿಗಳಿಗೆ ಮಾನಸಿಕವಾಗಿ ಅಸ್ಥಿರತೆ ಕಂಡುಬಂದೀತು. ನಿರುದ್ಯೋಗಿಗಳು ಉದ್ಯೋಗ ಬೇಟೆಗಾಗಿ ದೂರದೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಲಾಭ ಸಿಕ್ಕೀತು. ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.

ಮಕರ: ಕುಟುಂಬದ ಶ್ರೇಯಸ್ಸಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗಿ ಬರಲಿದೆ. ಇಷ್ಟ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಸರಕಾರಿ ವೃತ್ತಿಯವರಿಗೆ ಆಕಸ್ಮಿಕವಾಗಿ ಬಡ್ತಿ ಯೋಗ ಸಿಕ್ಕೀತು. ಪ್ರೇಮಿಗಳಿಗೆ ಶೀಘ್ರವೇ ವೈವಾಹಿಕ ಜೀವನಕ್ಕೆ ಕಾಲಿಡುವ ಯೋಗ. ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದ್ದು, ಅಭಿವೃದ್ಧಿ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ವೃತ್ತಿರಂಗದಲ್ಲಿ ಏನೇ ಕಷ್ಟ-ನಷ್ಟ ಎದುರಾದರೂ ಸಮಚಿತ್ತದಿಂದ ಎದುರಿಸಲು ಕಲಿಯಬೇಕು. ವಿದ್ಯಾರ್ಥಿಗಳು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ವ್ಯಾಪಾರಸ್ಥರಿಗೆ ಹೊಸ ಯೋಜನೆಗಳಿಗೆ ಹೂಡಿಕೆ ಮಾಡಲು ಸಕಾಲ. ಆದರೆ ಅವಸರ ಬೇಡ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments