ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 4 ಏಪ್ರಿಲ್ 2021 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಭವಿಷ್ಯದ ದೃಷ್ಟಿಯಿಂದ ಸರಿಯಾದ ಯೋಜನೆ ಹಾಕಿಕೊಳ‍್ಳುವುದು ಮುಖ್ಯ. ವೃತ್ತಿರಂಗದಲ್ಲಿ ಎಚ್ಚರಿಕೆಯ ಹೆಜ್ಜೆಯಿಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ಮಹಿಳೆಯರಿಗೆ ಮನೆಗೆ ಅತಿಥಿಗಳನ್ನು ಎದಿರುಗೊಳ್ಳುವ ಸಂಭ್ರಮ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ವೆಚ್ಚ ಇರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ವಿದ್ಯಾರ್ಥಿಗಳಿಗೆ ಕಲಿತ ವಿದ್ಯೆಗೆ ತಕ್ಕ ಫಲ ಸಿಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕೃಷಿಕರು ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಪಡೆಯಲಿದ್ದಾರೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಹಿರಿಯರ ಅಭಿಪ್ರಾಯಗಳಿಗೆ ಬೆಲೆಕೊಡುವುದು ಮುಖ್ಯ. ಅನಿರೀಕ್ಷಿತವಾಗಿ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಬೇಕಾಗುತ್ತದೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ.

ಸಿಂಹ: ಹೊಸ ಸಂಬಂಧಗಳು, ಹೊಸ ವ್ಯವಹಾರಗಳು ನಿಮ್ಮಲ್ಲಿ ಹೊಸ ಚೈತನ್ಯವನ್ನು ತರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಗಮನ ಕೊಡುವುದು ಮುಖ್ಯ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆಯಿದ್ದರೂ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿರಲಿ.

ಕನ್ಯಾ: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ ಕೂಡಿಬರಲಿದೆ. ಮಹಿಳೆಯರು ಬಹುದಿನಗಳಿಂದ ಕಾದಿದ್ದ ವಸ್ತು ಕೈಗೆ ಬರಲಿದೆ. ನೂತನ ಗೃಹ, ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಬಹುದು. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ತುಲಾ: ಆದಾಯ ಮೀರಿ ಖರ್ಚು ವೆಚ್ಚಗಳು ಕಂಡುಬಂದೀತು. ಗೃಹ ಸಂಬಂಧೀ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಕಾರ್ಯದೊತ್ತಡದಿಂದ ಬಿಡುವು ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ಅವಿವಾಹಿತರಿಗೆ ಶೀಘ‍್ರದಲ್ಲೇ ಸೂಕ್ತ ವೈವಾಹಿಕ ಸಂಬಂಧವನ್ನು ಪಡೆಯಲಿದ್ದಾರೆ. ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಆತಂಕಕ್ಕೆ ಕಾರಣವಾದೀತು. ವಿಲಾಸೀ ವಸ್ತುಗಳ ಖರೀದಿ ಮಾಡಲಿದ್ದೀರಿ. ತಾಳ್ಮೆ ಅಗತ್ಯ.

ಧನು: ಬೇರೆಯವರ ಬಗ್ಗೆ ಅತಿಯಾದ ಕಾಳಜಿ ತೋರುವುದೂ ನಿಮಗೆ ಸಮಸ್ಯೆಯಾದೀತು. ಅರ್ಚಕ ವೃತ್ತಿಯವರಿಗೆ ಮನ್ನಣೆ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾದೀತು. ಆದರೆ ಅತಿಯಾದ ಮುತುವರ್ಜಿ ವಹಿಸಲು ಹೋಗಬೇಡಿ.

ಮಕರ: ದೈವಾನುಕೂಲದಿಂದ ಇಂದು ನೀವಂದುಕೊಂಡಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ಆದರೆ ಹಣಕಾಸಿನ ತೊಂದರೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಸಂಗಾತಿಯ ಸಲಹೆ ಸ್ವೀಕರಿಸಿ.

ಕುಂಭ: ಸಾಂಸಾರಿಕವಾಗಿ ಹೊಸ ಸಮಸ್ಯೆಗಳನ್ನು ಎದುರಿಸಲು ಸಿದ್ಧವಾಗಬೇಕಾಗುತ್ತದೆ. ಹೊಸ  ವೃತ್ತಿಜೀವನ ಆರಂಭಿಸಿದವರಿಗೆ ಸವಾಲುಗಳು ಎದುರಾಗಲಿವೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಚಿಂತೆ ಬೇಡ.

ಮೀನ: ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಮಹಿಳೆಯರ ಮನೋಕಾಮನೆಗಳು ಪೂರ್ತಿಯಾಗಲಿವೆ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧವಾಗಿರಿ. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ವಿಷ್ಣುಸಹಸ್ರನಾಮ ಓದುವುದರ ಫಲ ತಿಳಿದರೆ ದಂಗಾಗುತ್ತೀರಿ

ಶಾಲೆಗೆ ಹೋಗುವ ಮೊದಲು ಮಕ್ಕಳಿಗೆ ಸ್ತೋತ್ರ ಹೇಳಿಸಿ

ಮಂಗಳವಾರ ಈ ಮಂತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments