Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 5 ಏಪ್ರಿಲ್ 2021 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದಿಡೀರ್ ಅನಾರೋಗ್ಯದಿಂದಾಗಿ ದೈನಂದಿನ ಕೆಲಸಗಳಲ್ಲಿ ಏರುಪೇರಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ಖರ್ಚು ವೆಚ್ಚಗಳಾಗಲಿವೆ. ತಾಳ್ಮೆಯಿರಲಿ.

ವೃಷಭ: ಬಹುದಿನಗಳ ನಿಮ್ಮ ಕನಸು ನನಸಾಗಿಸಲು ಇದು ಸಕಾಲ. ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದೆ. ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಮಿತ್ರರ ಆಗಮನ ಮನಸ್ಸಿಗೆ ಖುಷಿಕೊಡಲಿದೆ. ಚಿಂತೆ ಬೇಡ.

ಮಿಥುನ: ಸಹೋದರ ವರ್ಗದವರಿಂದ ಆಸ್ತಿ ವಿಚಾರವಾಗಿ ವೈಮನಸ್ಯ ಮೂಡಿಬಂದೀತು. ಹಿರಿಯರ ಅಭಿಪ್ರಾಯಗಳಿಗೆ ಬೆಲೆಕೊಡುವುದು ಮುಖ್ಯ. ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಎಚ್ಚರಿಕೆಯಿಂದಿರಿ.

ಕರ್ಕಟಕ: ನಿಮ್ಮ ಮಾತೇ ನಿಮಗೆ ಇಂದು ಅಸ್ತ್ರವಾಗಲಿದೆ. ವೃತ್ತಿರಂಗದಲ್ಲಿ ನಿಮ್ಮ ವಾಕ್ಚಾತುರ್ಯದಿಂದ ಎಲ್ಲರ ಮನಸ್ಸು ಗೆಲ್ಲಲಿದ್ದೀರಿ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ಎಚ್ಚರಿಕೆಯಿರಲಿ.

ಸಿಂಹ: ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಚೇತರಿಕೆಯಿದ್ದರೂ ಶತ್ರು ಕಾಟ ಕಂಡುಬಂದೀತು. ಸರಕಾರಿ ಉದ್ಯೋಗಿಗಳು ಅನಿರೀಕ್ಷಿತ ವರ್ಗಾವಣೆಗೆ ಸಿದ್ಧರಾಗಬೇಕಾಗುತ್ತದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕೆ ಕೆಲವು ದಿನ ಕಾಯುವುದು ಉತ್ತಮ.

ಕನ್ಯಾ: ಮಕ್ಕಳ ಮನಸ್ಸಿನ ಖುಷಿಗಾಗಿ ಕೆಲವೊಂದು ವಸ್ತು ಖರೀದಿಸಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಾಗಲಿವೆ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಲಹೆಯನ್ನು ಪಾಲಿಸಿದರೆ ಉತ್ತಮ.

ತುಲಾ: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬಿಸುವುದು, ವಿಶ್ವಾಸವಿಟ್ಟುಕೊಳ್ಳುವುದರಿಂದ ಮನಸ್ಸಿಗೆ ಘಾಸಿಯಾಗವು ಸಂದರ್ಭ ಎದುರಾದೀತು. ವೃತ್ತಿರಂಗದಲ್ಲಿ ಜವಾಬ್ಧಾರಿಗಳು ಹೆಚ್ಚಲಿವೆ. ವೈಯಕ್ತಿಕ ಆರೋಗ್ಯದ ಬಗ್ಗೆ ಗಮನವಿರಲಿ.

ವೃಶ್ಚಿಕ: ಶಿಕ್ಷಕ ವರ್ಗದವರಿಗೆ ಉದ್ಯೋಗದಲ್ಲಿ ಕಾರ್ಯದೊತ್ತಡವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ನಾನಾ ಖರ್ಚು ಕಂಡುಬರಲಿದೆ. ಮಹಿಳೆಯರಿಗೆ ಉದ್ಯೋಗದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಮಕ್ಕಳ ಆರೋಗ್ಯ ಚಿಂತೆಗೆ ಕಾರಣವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಕೆಲವು ದಿನ ಕಳೆಯುವ ಮನಸ್ಸಾಗಲಿದೆ. ಅವಿವಾಹಿತರಿಗೆ ಶೀಘ‍್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.

ಮಕರ: ನಿಮ್ಮ ಮನಸ್ಸಿಗೆ ಹಿಡಿಸಿದ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿ ದೇಹಾರೋಗ್ಯವನ್ನು ನಿರ್ಲಕ್ಷಿಸಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಕುಂಭ: ನೀವು ಅತೀವ ಇಷ್ಟ ಪಡುವ ವಸ್ತು ನಿಮ್ಮ ಕೈಯಿಂದಲೇ ನಾಶವಾಗಿ ಬೇಸರವಾದೀತು. ಕ್ರಿಯಾತ್ಮಕವಾಗಿ ಯೋಚನೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಂಗಾತಿಗೆ ಉಪಯುಕ್ತ ಸಲಹೆ ನೀಡಲಿದ್ದೀರಿ. ಚಿಂತೆ ಬೇಡ.

ಮೀನ: ಎಷ್ಟೋ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ವೃತ್ತಿರಂಗದಲ್ಲಿ ಎಲ್ಲಾ ರೀತಿಯಿಂದ ಅಭಿವೃದ್ಧಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments