Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 9 ಏಪ್ರಿಲ್ 2021 (08:46 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕಾರ್ಯರಂಗದಲ್ಲಿ ಸ್ವಾಭಿಮಾನ ಬದಿಗೊತ್ತಿ ಮುಂದುವರಿಯಬೇಕಾದರೆ ಯಶಸ್ಸು ಸಿಗಬೇಕಾದರೆ ಅದಕ್ಕೆ ತಕ್ಕ ಪರಿಶ್ರಮವೂ ಪಡಬೇಕು. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡಬೇಕು.

ವೃಷಭ: ಕೌಟುಂಬಿಕವಾಗಿ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಸಾವಧಾನದಿಂದ ಯೋಚನೆ ಮಾಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಧನಾಗಮನದಲ್ಲಿ ವಿಳಂಬವಾಗುವುದರಿಂದ ಅಂದುಕೊಂಡ ಕೆಲಸಗಳು ಪೂರ್ತಿಯಾಗದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಬಂಧು ಬಳಗದವರ ಭೇಟಿಯಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಸಂಗಾತಿಯೊಂದಿಗೆ ಕೌಟುಂಬಿಕ ವಿಚಾರಕ್ಕೆ ವಾಗ್ವಾದ ನಡೆಸಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಮಕ್ಕಳಿಂದ ಸಂತೋಷ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಮನೆ ರಿಪೇರಿ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಕನ್ಯಾ: ಬಯಸಿದ್ದೊಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಖರ್ಚು ವೆಚ್ಚಗಳ ಬಗ್ಗೆ ಗಮನವಿರಲಿ.

ತುಲಾ: ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ. ವ್ಯಾಪಾರಿ ವರ್ಗದವರಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ವೃಶ್ಚಿಕ: ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರಗಳನ್ನು ಕೈಗೊಳ್ಳುವುದು ಉತ್ತಮ. ಪ್ರೀತಿ ಪಾತ್ರರನ್ನು ಅನಿರೀಕ್ಷಿತವಾಗಿ ಭೇಟಿ ಮಾಡಲಿದ್ದೀರಿ. ಉದ್ವೇಗದಲ್ಲಿ ನಿರ್ಧಾರಗಳನ್ನು ತೆಗೆದುಕೊಂಡರೆ ಅಪಾಯ ತಪ್ಪಿದ್ದಲ್ಲ.

ಧನು: ನಿಮ್ಮ ನಿರೀಕ್ಷೆಯ ರೀತಿಯಲ್ಲಿ ಕೆಲಸಗಳು ಸಾಗದು. ಹಾಗಿದ್ದರೂ ಆಶಾವಾದಿಯಾಗಿರಿ. ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ನಿಮಗೆ ಸಿಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಮಕರ: ಬೇರೆಯವರ ಅಭಿಪ್ರಾಯಗಳಿಗೆ ಬೆಲೆಕೊಡುವುದನ್ನು ಕಲಿಯಿರಿ. ಆತ್ಮೀಯರೊಂದಿಗೆ ಅತ್ಯುತ್ತಮ ಕ್ಷಣ ಕಳೆಯಲಿದ್ದೀರಿ. ಕುಟುಂಬ ಸದಸ್ಯರ ಕಷ್ಟಗಳಿಗೆ ಕಿವಿಗೊಡಲಿದ್ದೀರಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿದೆ.

ಕುಂಭ: ವಾಹನ ಖರೀದಿ ಮಾಡುವ ನಿಮ್ಮ ಕನಸು ಕೈಗೂಡಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ವೃತ್ತಿ ಲಾಭ ತಂದುಕೊಡಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನ ಆಸೆಗಳನ್ನು ಅದುಮಿಟ್ಟುಕೊಳ‍್ಳುವುದು  ಬೇಡ. ಆಪ್ತರೊಂದಿಗೆ ಹಂಚಿಕೊಳ್ಳುವುದು ಉತ್ತಮ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಆರೋಗ್ಯ ಸಮಸ್ಯೆಯಾದೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments