Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 17 ಏಪ್ರಿಲ್ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ವರಮಾನದಲ್ಲಿ ಕೊಂಚ ಸುಧಾರಣೆಯಾಗಲಿದೆ. ನಿಧಾನವಾಗಿ ಸಹಜ ಸ್ಥಿತಿಗೆ ಮರಳಲಿದ್ದೀರಿ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ವೃತ್ತಿರಂಗದಲ್ಲಿ ಒಳ್ಳೆಯ ದಿನಗಳಿಗಾಗಿ ತಾಳ್ಮೆಯಿಂದ ಕಾಯುವುದು ಉತ್ತಮ. ವ್ಯಾವಹಾರಿಕವಾಗಿ ನಿಮ್ಮನ್ನು ವಂಚಿಸುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಸಂಗಾತಿಯ ಬೇಡಿಕೆ ಪೂರೈಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ:ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಶುಭ ಮಂಗಲ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಿದ್ದೀರಿ. ಮಿತ್ರರ ಕಷ್ಟಗಳಿಗೆ ನೆರವಾಗುವಿರಿ. ಚಿಂತೆ ಬೇಡ.

ಕರ್ಕಟಕ: ಆರ್ಥಿಕವಾಗಿ ನಾನಾ ರೀತಿಯ ಖರ್ಚು ವೆಚ್ಚಗಳು ಕಂಡುಬರಲಿದೆ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಕೆಲವು ದಿನ ಕಾಯುವುದು ಉತ್ತಮ. ಕೋರ್ಟು ಕಚೇರಿ ಕೆಲಸಗಳು ಅನಿರೀಕ್ಷಿತ ರೀತಿಯಲ್ಲಿ ನೆರವೇರಲಿದೆ.

ಸಿಂಹ: ನೀವು ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಕೌಟುಂಬಿಕವಾಗಿ ತಾಳ್ಮೆ, ಸಮಾಧಾನವೇ ನಿಮ್ಮ ಅಸ್ತ್ರವಾಗಲಿದೆ.

ಕನ್ಯಾ: ಯಾವುದೇ ಕೆಲಸವಾದರೂ ಛಲದಿಂದ ಮುಂದುವರಿದಲ್ಲಿ ಯಶಸ್ಸು ನಿಮ್ಮದಾಗಲಿದೆ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ತುಲಾ: ಕುಟುಂಬಸ್ಥರ ಸಹಕಾರದೊಂದಿಗೆ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವೃತ್ತಿರಂಗದಲ್ಲಿ ಮುನ್ನಡೆಗೆ ಪೂರಕವಾದ ವಾತಾವರಣವಿರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಚಿಂತೆ ಬೇಡ.

ವೃಶ್ಚಿಕ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಆದರೆ ಆತಂಕಪಡುವ ಅಗತ್ಯವಿಲ್ಲ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವ ಯೋಗ ಕೂಡಿಬರಲಿದೆ.

ಧನು: ಇಂದಿನ ದಿನ ಕೇಳಿಬರುವ ಶುಭ ವಾರ್ತೆಯೊಂದು ನಿಮ್ಮನ್ನು ದಿನವಿಡೀ ಉಲ್ಲಸಿತರಾಗಿಡಲಿದೆ. ನೂತನ ದಂಪತಿಗಳಿಗೆ ಸಂತೋಷದಾಯಕ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಆದರೆ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಕಾರ್ಯಭಾರದಿಂದಾಗಿ ದೇಹಾಯಾಸವಾದೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಗೊಳ್ಳಲಿದೆ.

ಕುಂಭ: ಉದ್ಯೋಗ ವ್ಯವಹಾರದಲ್ಲಿ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಮಕ್ಕಳಿಂದ ಶುಭ ವಾರ್ತೆ ಕೇಳಿಬಂದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗುವುದು.

ಮೀನ: ಉದ್ಯೋಗ ಬೇಟೆ ನಡೆಸುತ್ತಿರುವ ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಎದುರಾಗಲಿವೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಅರಶಿನದಿಂದ ಈ ಕೆಲಸ ಮಾಡಿದರೆ ನಿಮಗೆ ಅದೃಷ್ಟ ಒಲಿದು ಬರುತ್ತದೆ