ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 19 ಏಪ್ರಿಲ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ದೈಹಿಕವಾಗಿ ಆರೋಗ್ಯ ಸ್ಥಿತಿ ಚಿಂತೆಗೆ ಕಾರಣವಾದೀತು. ಆದರೆ ಆತಂಕಪಡುವ ಅಗತ್ಯವಿಲ್ಲ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ವೃಷಭ: ನೀವು ಯಾರನ್ನು ಆಪ್ತರು ಎಂದುಕೊಂಡಿದ್ದೀರೋ ಅವರಿಂದಲೇ ವಂಚನೆಗೊಳಗಾಗುವ ಪರಿಸ್ಥಿತಿ ಎದುರಾದೀತು. ಸರಕಾರಿ ಕಾಗದ ಪತ್ರಗಳನ್ನು ಎಚ್ಚರಿಕೆಯಿಂದ ಜೋಪಾನ ಮಾಡಿ. ಕೋರ್ಟು ಕಚೇರಿ ಕೆಲಸಗಳಿಗೆ ಓಡಾಡಬೇಕಾದೀತು.

ಮಿಥುನ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾಗಲಿದೆ. ವೈಯಕ್ತಿಕವಾಗಿ ನಿಮ್ಮ ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ಎದುರಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಯಾರಿಗೋಸ್ಕರವೋ ನಿಮ್ಮ ಸಿದ್ಧಾಂತಗಳೊಂದಿಗೆ ರಾಜಿಯಾಗಬೇಕಾಗಿಲ್ಲ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ವ್ಯಾಪಾರಿಗಳಿಗೆ ಅಭಿವೃದ್ಧಿಗೆ ಪೂರಕ ವಾತಾವರಣ ಒದಗಿಬರುವುದು.

ಸಿಂಹ: ಅನಗತ್ಯ ಯೋಚನೆಗಳಿಗೆ ಕಡಿವಾಣ ಹಾಕಿ ನಿಮ್ಮ ಕೆಲಸಗಳ ಕಡೆಗೆ ಗಮನ ಕೇಂದ್ರೀಕರಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಮೀರಿದ ಫಲಿತಾಂಶ ದೊರೆಯಲಿದೆ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ.

ಕನ್ಯಾ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಸಹೋದರರೊಂದಿಗೆ ಆಸ್ತಿ ಸಂಬಂಧವಾಗಿ ಮನಸ್ತಾಪಗಳಾದೀತು. ಹಿರಿಯರ ಸಲಹೆ ಪಡೆಯಿರಿ. ವೈದ್ಯಕೀಯ ವೃತ್ತಿಯವರಿಗೆ ಕೆಲಸದೊತ್ತಡ ತಪ್ಪದು.

ತುಲಾ: ಮಹಿಳೆಯರಿಗೆ, ಚಿನ್ನ, ಮಂಗಳ ವಸ್ತ್ರಾಭರಣ ಖರೀದಿ ಮಾಡುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬಂದೀತು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ.

ವೃಶ್ಚಿಕ: ದೈವಾನುಕೂಲದಿಂದ ಇಂದು ನೀವು ಕೈ ಹಿಡಿಯುವ ಕೆಲಸಗಳು ಯಶಸ್ವಿಯಾಗಲಿವೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು.

ಧನು: ಕ್ಷಣ ಕೋಪದಿಂದಾಗಿ ಆತ್ಮೀಯರೊಂದಿಗೆ ಮನಸ್ತಾಪಗಳು ಬಂದೀತು. ತಾಳ್ಮೆ, ಸಂಯವಿರಲಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯಿರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುಂದುವರಿದಲ್ಲಿ ಉತ್ತಮ ಅವಕಾಶಗಳು ನಿಮ್ಮದಾಗಲಿವೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗುವುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ನೆಮ್ಮದಿ.

ಕುಂಭ: ಕಾರ್ಯಸಾಧನೆಗಾಗಿ ಮುಂದುವರಿಯುವಾಗ ಅಡೆತಡೆಗಳು ಸಾಮಾನ್ಯ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿಗೆ ತೃಪ್ತಿಪಟ್ಟುಕೊಳ್ಳಬೇಕಾದ ಪರಿಸ್ಥಿತಿ ಬರಬಹುದು.

ಮೀನ: ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳು ಸಹೋದ್ಯೋಗಿಗಳ ಸಹಾಯದಿಂದ ನಿವಾರಿಸಲಿದ್ದೀರಿ. ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments