Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 21 ಏಪ್ರಿಲ್ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅತಿಯಾಗಿ ಕೆಲಸ ಮಾಡುವ ಉತ್ಸಾಹ ಕಂಡುಬರಲಿದೆ. ಆರ್ಥಿಕವಾಗಿ ಬೇಡದ ಖರ್ಚು ವೆಚ್ಚಗಳನ್ನು ಹತೋಟಿಗೆ ತರಲು ಯತ್ನಿಸುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ವೃಷಭ: ವೃತ್ತಿರಂಗದಲ್ಲಿ ಹೆಚ್ಚಿನ ಹೊಣೆಗಾರಿಕೆ ನಿಮ್ಮ ಹೆಗಲಿಗೇರಲಿದೆ. ವೈಯಕ್ತಿಕ ವಿಚಾರಗಳನ್ನು ತಿಳಿಯಲು ನೆರೆಹೊರೆಯವರು ಕಾದಿರುತ್ತಾರೆ. ತಾಳ್ಮೆ, ಸಂಯವಿರಲಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಾಂಸಾರಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಚಿಂತೆಗೀಡುಮಾಡಲಿದೆ.

ಕರ್ಕಟಕ: ವ್ಯಾವಹಾರಿಕವಾಗಿ ನಿಮ್ಮ ಪ್ರಯತ್ನಬಲಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಶುಭ ಕಾರ್ಯಗಳಿಗೆ ಚಾಲನೆ ನೀಡಲು ಇದು ಸಕಾಲ. ಗೃಹ ನಿರ್ಮಾಣ ಕಾರ್ಯಗಳಿಗೆ ಕೈ ಹಾಕಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ. ಕುಲದೇವರ ಪ್ರಾರ್ಥನೆ ಮಾಡುವುದನ್ನು ಮರೆಯದಿರಿ.

ಕನ್ಯಾ: ನಿಮ್ಮ ಕಷ್ಟಗಳಿಗೆ ಸಂಗಾತಿಯು ಹೆಗಲುಕೊಡಲಿದ್ದಾರೆ. ಮಕ್ಕಳಿಂದ ಸಂತಸ ಪಡೆಯಲಿದ್ದೀರಿ. ಹಿರಿಯರ ದೇಹಾರೋಗ್ಯ ಚಿಂತೆಗೀಡುಮಾಡೀತು. ಉದ್ಯೋಗ ಕ್ಷೇತ್ರದಲ್ಲಿ ದಿಡೀರ್ ಸ‍್ಥಾನ ಪಲ್ಲಟವಾದೀತು.

ತುಲಾ: ಎಷ್ಟೋ ದಿನಗಳಿಂದ ಅಂದುಕೊಂಡ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಜೀವನದಲ್ಲಿ ಸಿಹಿ-ಕಹಿ ಎರಡನ್ನೂ ಸಮನಾಗಿ ಸ್ವೀಕರಿಸುವ ಮನಸ್ಥಿತಿ ಬೆಳೆಸಿಕೊಳ್ಳಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಗೊಳ್ಳಲಿದೆ.

ವೃಶ್ಚಿಕ: ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಜೀವನದಲ್ಲಿ ಅಭಿವೃದ್ಧಿಯಾಗಬೇಕಾದರೆ ಕೆಲವೊಂದನ್ನು ತ್ಯಾಗ ಮಾಡಲೇಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಚಿಂತೆ ಬೇಡ.

ಧನು: ನಿಮ್ಮ ಪಾಲಿನ ಕೆಲಸ ಮುಗಿಸಲು ತರಾತುರಿ ಕಂಡುಬರಲಿದೆ. ರಾಗ-ಧ್ವೇಷಗಳನ್ನು ಬಿಟ್ಟು ವಿಶಾಲ ಮನೋಭಾವದಿಂದ ಯೋಚನೆ ಮಾಡಿದರೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಅನಗತ್ಯ ವಾದ ವಿವಾದ ಬೇಡ.

ಮಕರ: ಸಾಮಾಜಿಕವಾಗಿ ನಿಮ್ಮ ಜನಪ್ರಿಯತೆ ಹೆಚ್ಚಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಬಂಧುಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ

ಕುಂಭ: ಸಂಗಾತಿಯ ಕೆಲವೊಂದು ಮಾತುಗಳು ನಿಮಗೆ ಹಿಡಿಸದೇ ಹೋಗಬಹುದು. ಸಾಂಸಾರಿಕವಾಗಿ ಸಾಮರಸ್ಯದ ಕೊರತೆ ಉಂಟಾದೀತು. ಹಿರಿಯರ ಆರೋಗ್ಯ ನಿಮಿತ್ತ  ಆಸ್ಪತ್ರೆಗೆ ಅಲೆದಾಡಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಮೀನ: ಆರ್ಥಿಕ ಅಡಚಣೆಗಳು ದೂರವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಯಲ್ಲಿ ಬಂಧುಮಿತ್ರರ ಆಗಮನದಿಂದ ಸಂಭ್ರಮದ ವಾತಾವರಣವಿರಲಿದೆ. ದೂರದ ಸಂಬಂಧಿಗಳಿಂದ ನಿಮ್ಮ ವ್ಯವಹಾರಕ್ಕೆ ಅನುಕೂಲವಾದೀತು.

Share this Story:

Follow Webdunia kannada

ಮುಂದಿನ ಸುದ್ದಿ

ಹಣದ ಸಮಸ್ಯೆ ನಿವಾರಿಸಲು ಬುಧವಾರದಂದು ಈ ಪರಿಹಾರ ಮಾಡಿ