Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 23 ಏಪ್ರಿಲ್ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು, ಬಾಕಿ ಹಣ ಪಾವತಿಯಾಗಲಿದೆ. ಸಾಂಸಾರಿಕವಾಗಿ ಅನೇಕ ತಾಪತ್ರಯಗಳು ತಪ್ಪಿದ್ದಲ್ಲ. ಸಂಬಂಧಗಳನ್ನು ನಾಜೂಕಾಗಿ ನಿಭಾಯಿಸಿ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಲಿದೆ.

ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಲಿದ್ದೀರಿ. ಕಟ್ಟಡ ಕಾಮಗಾರಿ ಕಾರ್ಮಿಕರಿಗೆ ಕೆಲಸ ಕಾರ್ಯಕ್ಕೆ ತೊಂದರೆಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.

ಮಿಥುನ: ಸಾಕಷ್ಟು ಧನಾಗಮನವಿದ್ದರೂ ಅಷ್ಟೇ ಖರ್ಚು ವೆಚ್ಚಗಳೂ ಕಂಡುಬರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಹಿಂದೆ ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಉದಾಸೀನತೆ ಸಲ್ಲದು.

ಕರ್ಕಟಕ: ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಪ್ರಭಾವದಿಂದ ನಿಮ್ಮ ಕೆಲಸ ಮಾಡಿಸಿಕೊಳ‍್ಳುತ್ತೀರಿ. ಆದರೆ ನಿಮ್ಮ ಏಳಿಗೆ ಬಗ್ಗೆ ಅಸೂಯೆಪಡುವವರಿರುತ್ತಾರೆ ಎಚ್ಚರಿಕೆಯಿರಲಿ. ಸಂಗಾತಿಯ ಬಹುದಿನಗಳ ಕನಸು ನನಸು ಮಾಡಲಿದ್ದೀರಿ.

ಸಿಂಹ: ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಅಡ್ಡಿ ಆತಂಕಗಳಿದ್ದರೂ ಅಂತಿಮವಾಗಿ ನಿಮ್ಮ ಕಾರ್ಯಸಾಧನೆಯಾದೀತು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ತಪ್ಪದು. ಆದರೂ ನಿಮ್ಮ ಕ್ರಿಯಾಶೀಲತೆಯಿಂದಾಗಿ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.

ತುಲಾ: ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಕೃಷಿಕರಿಗೆ ಬೆಳೆದ ಬೆಳೆ ಲಾಭ ತಂದುಕೊಡಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ವೈಯಕ್ತಿಕ ಸಮಸ್ಯೆಗಳನ್ನು ನೀವಾಗಿಯೇ ಬಗೆಹರಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ ಹೆಚ್ಚಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಧನು: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಮನೆಯ ಇತರ ಸದಸ್ಯರಿಗೆ ಇಷ್ಟವಾಗದೇ ಹೋಗಬಹುದು. ಆದರೆ ನೀವು ಇನ್ನೊಬ್ಬರ ಮಾತು ಕೇಳಿ ನಿರ್ಧಾರ ಬದಲಾಯಿಸುವ ಜಾಯಮಾನದವರಲ್ಲ. ತಾಳ್ಮೆ, ಸಂಯಮವಿರಲಿ.

ಮಕರ: ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರಿಕೆಯಿಂದಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ.

ಕುಂಭ: ಕೌಟುಂಬಿಕವಾಗಿ ಸಹೋದರರ ನಡುವೆ ಭಿನ್ನಾಭಿಪ್ರಾಯಗಳಾಗಬಹುದು. ಹಿರಿಯರ ಸಲಹೆಗಳನ್ನು ಪಾಲಿಸಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಕಿರು ಓಡಾಟ ನಡೆಸುವಿರಿ.

ಮೀನ: ಕಟ್ಟಡ ಕಾಮಗಾರಿ ನಿರ್ಮಾಣ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವದು ಒಳಿತು. ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ.

Share this Story:

Follow Webdunia kannada

ಮುಂದಿನ ಸುದ್ದಿ

ವ್ಯಕ್ತಿಯಲ್ಲಿ ಸಕಾರಾತ್ಮಕ ಭಾವನೆ ಮೂಡಲು ಈ ಮರದ ಕೆಳಗೆ ಕುಳಿತುಕೊಳ್ಳಿ