Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 24 ಏಪ್ರಿಲ್ 2021 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಾಜೂಕಾರಿ ಪರಿಸ್ಥಿತಿ ನಿಭಾಯಿಸುವ ನಿಮ್ಮ ಬಗ್ಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಬಹುದು. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ.

ವೃಷಭ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅದರ ಸದುಪಯೋಗ ಪಡಿಸಿಕೊಳ್ಳುವಲ್ಲಿ ಸೋಲಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಸಂಗಾತಿಗೆ ಅಚ್ಚರಿಯ ಉಡುಗೊರೆ ಕೊಡಲಿದ್ದೀರಿ.

ಮಿಥುನ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಉದರ ಸಂಬಂಧೀ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ.ಕೆಳ ಹಂತದ ನೌಕರರಿಗೆ ಮುಂಬಡ್ತಿ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆಗಳು ಎದುರಾಗಲಿವೆ.

ಕರ್ಕಟಕ: ಶುಭ ಮಂಗಲ ಕಾರ್ಯಗಳು ಅಡೆತಡೆಯಿಲ್ಲದೇ ನಿರ್ವಿಘ್ನವಾಗಿ ನೆರವೇರಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯೇ ಉತ್ತಮ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಸಿಂಹ: ಮಹಿಳೆಯರು ಬಿಡುವಿನ ದಿನದ ಖುಷಿ ಅನುಭವಿಸಲಿದ್ದಾರೆ. ಹೊಸ ಮಿತ್ರರನ್ನು ಸಂಪಾದಿಸುವಿರಿ. ಅನಗತ್ಯ ವಿಚಾರಗಳಿಗೆ ವಾದ ವಿವಾದಗಳಾಗದಂತೆ ಎಚ್ಚರಿಕೆ ವಹಿಸಿ. ದೂರ ಸಂಚಾರಗಳನ್ನು ಮುಂದೂಡುವುದು ಒಳ್ಳೆಯದು.

ಕನ್ಯಾ: ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ.ನಿಮ್ಮ ಬಗ್ಗೆ ಅಸೂಯೆ ಪಡುವ ಜನರಿಂದ ದೂರವಿದ್ದರೆ ಉತ್ತಮ. ಗೃಹ ಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಂಗಾತಿಯ ಮೆಚ್ಚುಗೆಗೆ ಪಾತ್ರರಾಗುವಿರಿ.

ತುಲಾ: ಮಕ್ಕಳ ಬಹುದಿನಗಳ ಬೇಡಿಕೆ ಪೂರೈಸಲು ಖರ್ಚು ವೆಚ್ಚ ಮಾಡಲಿದ್ದೀರಿ. ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿಕೊಡಲಿದೆ. ಸಂಗಾತಿಯೊಂದಿಗೆ ವಾಗ್ವಾದವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆ, ಸಂಯಮವಿರಲಿ.

ವೃಶ್ಚಿಕ: ಸ್ವಯಂ ಉದ್ಯೋಗಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಹಿರಿಯರಿಗೆ ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಎಚ್ಚರಿಕೆಯಿರಲಿ.

ಧನು: ಬೇರೆಯವರು ನಿಮ್ಮ ಬಗ್ಗೆ ಏನು ಯೋಚಿಸುತ್ತಾರೋ ಎಂಬ ಅತಿಯಾದ ಕಲ್ಪನೆಯೇ ನಿಮ್ಮನ್ನು ಚಿಂತೆಗೆ ದೂಡಲಿದೆ. ಸಂಗಾತಿಯೊಂದಿಗೆ ಮನಸ್ಸಿನ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರಲಿದೆ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸುವಿರಿ. ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ಹಣಕಾಸಿನ ಮುಗ್ಗಟ್ಟುಗಳು ತೋರಿಬಂದಾಗ ಮಿತ್ರರ ಸಹಾಯ ಪಡೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸಹೋದರ ವರ್ಗದವರೊಂದಿಗೆ ಆಸ್ತಿ ವಿಚಾರವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮೀನ: ಆಪ್ತರ ಬುದ್ಧಿ ಮಾತುಗಳನ್ನು ಉಪೇಕ್ಷಿಸುವುದು ಒಳ್ಳೆಯದಲ್ಲ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಹೆಗಲಿಗೇರಲಿದೆ. ಕ್ರೀಡಾಳುಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಅನಗತ್ಯ ಚಿಂತೆ ಬೇಡ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಾಹಿತ ಮಹಿಳೆಯ ಕನಸಿನಲ್ಲಿ ಕಾಮನಬಿಲ್ಲು ಕಂಡುಬಂದರೆ ಎನರ್ಥ ಗೊತ್ತಾ?