ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 26 ಏಪ್ರಿಲ್ 2021 (08:49 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿಮ್ಮ ಉದಾಸೀನತೆಯೇ ನಿಮ್ಮ ಶತ್ರುವಾಗಲಿದೆ. ಕೌಟುಂಬಿಕವಾಗಿ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ತಾಳ್ಮೆ, ಸಂಯಮವಿರಲಿ.

ವೃಷಭ: ಎಲ್ಲವೂ ಇದ್ದರೂ ಏನೋ ಕಳೆದುಕೊಂಡ ನಿರಾಶಾಭಾವ ಮನಸ್ಸಿಗೆ ಕಾಡಲಿದೆ. ವೃತ್ತಿರಂಗದಲ್ಲಿ ಬೇರೆಯವರ ಕೆಲಸದಲ್ಲಿ ಮೂಗು ತೂರಿಸಲು ಹೋಗಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ವೆಚ್ಚವಾಗಲಿದೆ.

ಮಿಥುನ: ದೈಹಿಕವಾಗಿ ಶ್ರಮದ ಕೆಲಸದಿಂದಾಗಿ ದೇಹಾಯಾಸವಾದೀತು. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ಚಿಂತೆ ಬೇಡ.

ಕರ್ಕಟಕ: ಹಣಕಾಸಿನ ಹರಿವು ಎಷ್ಟೇ ಇದ್ದರೂ ಅಷ್ಟೇ ಖರ್ಚು ವೆಚ್ಚಗಳೂ ಕಂಡುಬರಲಿದೆ. ವ್ಯವಹಾರದಲ್ಲಿ ವಿಘ್ನಗಳು ತೋರಿಬಂದರೂ ಅಂತಿಮ ಯಶಸ್ಸು ನಿಮ್ಮದಾಗಲಿದೆ. ಮನಸ್ಸಿನ ಮಾತುಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವಿರಿ.

ಸಿಂಹ: ದಾಂಪತ್ಯ ಜೀವನದಲ್ಲಿ ಸಂಯಮವಿಲ್ಲದೇ ಹೋದಲ್ಲಿ ಭಿನ್ನಾಭಿಪ್ರಾಯಗಳು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಬುದ್ಧಿವಂತಿಕೆಯಿಂದ ವ್ಯವಹರಿಸುವುದು ಮುಖ್ಯ.

ಕನ್ಯಾ: ಹೊಸ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಪರಿಸ್ಥಿತಿಯನ್ನು ನೋಡಿಕೊಂಡು ಮುಂದುವರಿಯುವುದು ಮುಖ್ಯ. ಸಂಗಾತಿಯ ಅಭಿಪ್ರಾಯಗಳಿಗೆ ಬೆಲೆಕೊಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಮುಂದಾಗಲಿದ್ದೀರಿ.

ತುಲಾ: ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗಲಿದ್ದೀರಿ. ವಾಹನ ಸವಾರರಿಗೆ ಅಪಘಾತದ ಭಯವಿದ್ದು, ಚಾಲನೆಯಲ್ಲಿ ಎಚ್ಚರಿಕೆಯಿರಲಿ. ದೂರ ಸಂಚಾರವನ್ನು ಕೆಲವುದಿನಗಳ ಮಟ್ಟಿಗೆ ಮುಂದೂಡಲಿದ್ದೀರಿ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಕೃಷಿಕರಿಗೆ ಸೂಕ್ತ ಬೆಲೆ ಸಿಗದೇ ನಿರಾಸೆಯಾದೀತು.

ಧನು: ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಬೇಡದ ಮಾತುಗಳು ಮನ, ಮನೆ ಕೆಡಿಸೀತು. ತಾಳ್ಮೆ, ಸಂಯಮ ಅಗತ್ಯ. ದೇವರ ಪ್ರಾರ್ಥನೆ ಮಾಡಿ.

ಮಕರ: ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ವೈಯಕ್ತಿಕ ಕಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳು ನಿಧಾನಗತಿಯಲ್ಲಿ ನಡೆಯಲಿವೆ. ತಾಳ್ಮೆ ಬೇಕು.

ಕುಂಭ: ಕುಟುಂಬದಲ್ಲಿ ಬರುವ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವ ಟ್ರಬಲ್ ಶೂಟರ್ ಆಗಲಿದ್ದೀರಿ. ಮಹಿಳೆಯರಿಗೆ ಮನೆ ಕೆಲಸದಿಂದ ಕೊಂಚ ಬಿಡುವು ಸಿಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ.

ಮೀನ: ವೃತ್ತಿರಂಗದಲ್ಲಿ ನಿಮ್ಮನ್ನು ಉತ್ತೇಜಿಸುವ ಮಾತುಗಳು ಕೇಳಿಬಂದೀತು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಿತಶತ್ರುಗಳನ್ನು ಉದಾಸೀನ ಮಾಡುವುದೇ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಬಳಿಕ ಈ ಐದು ರಾಶಿಯವರಿಗೆ ಸಂಕಷ್ಟ ತಪ್ಪಿದ್ದಲ್ಲ

ಗ್ರಹಗತಿಗಳ ದೋಷ ನಿವಾರಣೆಗೆ ನವಗ್ರಹ ಕವಚಂ ಸ್ತೋತ್ರ ಓದಿ

ದೀಪಾವಳಿ ಸಂದರ್ಭದಲ್ಲಿ ಯಾವ ರಾಶಿಯವರು ಯಾವ ಲಕ್ಷ್ಮೀ ಮಂತ್ರ ಹೇಳಬೇಕು ನೋಡಿ

ಶುಕ್ರವಾರ ಶ್ರೀ ಧನಲಕ್ಷ್ಮಿ ಸ್ತೋತ್ರವನ್ನು ತಪ್ಪದೇ ಓದಿ

ದೀಪಾವಳಿ ದಿನ ಯಾವ ರಾಶಿಯವರು ಯಾವ ಬಟ್ಟೆ ಹಾಕಿಕೊಂಡರೆ ಅದೃಷ್ಟ ನೋಡಿ

ಮುಂದಿನ ಸುದ್ದಿ
Show comments