Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 27 ಏಪ್ರಿಲ್ 2021 (08:59 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಅನವಶ್ಯಕವಾಗಿ ಹಣ ಪೋಲು ಮಾಡಬೇಡಿ. ಸರಿಯಾದ ಯೋಜನೆಯೊಂದಿಗೆ ಹೆಜ್ಜೆಯಿಡಿ. ಸಂಗಾತಿಯ ಮೇಲೆ ಅಸಮಾಧಾನ ತೋರಿಬರಲಿದೆ. ತಾಳ್ಮೆ, ಸಂಯಮ ಅಗತ್ಯ. ಹಿರಿಯರಿಗೆ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ವೃತ್ತಿರಂಗದಲ್ಲಿ ಎಲ್ಲವೂ ನೀವಂದುಕೊಂಡಂತೆ ನಡೆಯುತ್ತಿಲ್ಲ ಎಂಬ ಚಿಂತೆ ಕಾಡಲಿದೆ. ಆದರೆ ಸಹೋದ್ಯೋಗಿಗಳು ನಿಮ್ಮ ಕಷ್ಟಕ್ಕೆ ಸ್ಪಂದಿಸಲಿದ್ದಾರೆ. ಕೃಷಿಕರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ.

ಮಿಥುನ: ಜೀವನದಲ್ಲಿ ಕಷ್ಟ-ಸುಖ ಎರಡನ್ನೂ ಸಮನಾಗಿ ಸ್ವೀಕರಿಸಲು ಸಿದ್ಧರಾಗಿ. ಸಂಗಾತಿಯು ನಿಮ್ಮ ಕಷ್ಟಗಳಿಗೆ ಹೆಗಲು ಕೊಡಲಿದ್ದಾರೆ. ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ಯೋಗ್ಯ ವಯಸ್ಕರು ವಿವಾಹ ಸಂಬಂಧವಾದ ಅಡೆತಡೆಗಳನ್ನು ನಿವಾರಿಸಲು ಕುಲದೇವರ ಮೊರೆ ಹೋಗಲಿದ್ದಾರೆ. ನೂತನ ದಂಪತಿಗಳು ಸುಂದರ ಕ್ಷಣ ಕಳೆಯಲಿದ್ದಾರೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳನ್ನು ಕೆಲವು ದಿನ ಮುಂದೂಡುವುದು ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಶುಭ ಮಂಗಲ ಕಾರ್ಯಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಲಿದ್ದೀರಿ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಯಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ಸಾಮಾನ್ಯ. ಎದುರಿಸಿಕೊಂಡು ಹೋಗಲಿದ್ದೀರಿ.

ತುಲಾ: ರಾಜಕೀಯ ವ್ಯಕ್ತಿಗಳಿಗೆ ಮಹಿಳೆಯರಿಂದ ಅಪವಾದದ ಭೀತಿ ಎದುರಾಗಲಿದೆ. ನೆರೆಹೊರೆಯವರೊಂದಿಗೆ ನೀರಿಗಾಗಿ ಕಲಹ ನಡೆದೀತು. ತಾಳ್ಮೆಯಿಂದ ನಡೆದುಕೊಳ್ಳಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿ ಬರಲಿದೆ.

ವೃಶ್ಚಿಕ: ಸಾಂಸಾರಿಕವಾಗಿ ನಿಮ್ಮ ಸುಖ ಸಂಸಾರಕ್ಕೆ ಹುಳಿ ಹಿಂಡುವವರಿಂದ ದೂರವಿರುವುದೇ ಉತ್ತಮ. ಕಾರ್ಯಕ್ಷೇತ್ರದಲ್ಲಿ ಕಾರ್ಯದೊತ್ತಡ ಕಂಡುಬಂದೀತು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.  ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.

ಧನು: ಅನಗತ್ಯ ವಿಚಾರಗಳ ಬಗ್ಗೆ ಚಿಂತೆ ಮಾಡುತ್ತಾ ದೇಹಾರೋಗ್ಯ ಕೆಡಿಸಿಕೊಳ್ಳಬೇಡಿ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳು ಪೂರ್ತಿಯಾಗಲಿವೆ. ಮಕ್ಕಳಿಂದ ಸಮಾಧಾನ, ನೆಮ್ಮದಿ ಪ್ರಾಪ್ತಿಯಾದೀತು.

ಮಕರ: ಸಂತಾನಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಮಾನಸಿಕವಾಗಿ ಆತ್ಮವಿಶ್ವಾಸ ತಂದುಕೊಳ್ಳಿ. ಕಳೆದು ಹೋದ ಸಂಬಂಧದ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಿಕೊಳ್ಳಿ.

ಕುಂಭ: ಕಷ್ಟ-ಸುಖ ಎರಡನ್ನೂ ಎದುರಿಸುವ ಮನಸ್ಥಿತಿ ರೂಪಿಸಿಕೊಳ್ಳಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ಯೋಗ ಸದ್ಯದಲ್ಲೇ ನನಸಾಗಲಿದೆ.

ಮೀನ: ನಿಮ್ಮ ಹಿತ ಬಯಸುವ ವ್ಯಕ್ತಿಗಳನ್ನು ಗುರುತಿಸಿ. ವ್ಯವಹಾರದಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಕೊಡದಿರಿ. ಆರ್ಥಿಕವಾಗಿ ಖರ್ಚುವೆಚ್ಚಗಳ ಬಗ್ಗೆ ನಿಯಂತ್ರಣವಿರಲಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments