Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 28 ಏಪ್ರಿಲ್ 2021 (09:13 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶುಭ ಕಾರ್ಯಗಳಿಗೆ ವಿಘ್ನ ಭಯ ತೋರಿಬರಲಿದೆ. ಮನೆಯಲ್ಲಿ ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾದೀತು. ಸಾಂಸಾರಿಕವಾಗಿ ಅನಗತ್ಯ ವಿಚಾರಗಳು ನೆಮ್ಮದಿ ಹಾಳುಮಾಡೀತು. ಮಾತಿನ ಮೇಲೆ ಸಂಯಮವಿರಲಿ.

ವೃಷಭ: ಅಗತ್ಯಕ್ಕೆ ತಕ್ಕಂತೆ ಅವಕಾಶಗಳು ಸಿಗದೇ ನಿರುದ್ಯೋಗಿಗಳಿಗೆ ನಿರಾಸೆಯಾದೀತು. ಸ್ವಯಂ ವ್ಯಾಪಾರಿಗಳಿಗೆ ವ್ಯವಹಾರಕ್ಕೆ ಅಡೆತಡೆಯಾಗಲಿದೆ. ಭವಿಷ್ಯದ ಬಗ್ಗೆ ಚಿಂತೆಯಾದೀತು. ದೂರ ಸಂಚಾರವನ್ನು ರದ್ದುಗೊಳಿಸಲಿದ್ದೀರಿ.

ಮಿಥುನ: ವೃತ್ತಿರಂಗದಲ್ಲಿ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ತೋರಿಬರಲಿದೆ. ಬಳಸಿಕೊಳ್ಳಿ.

ಕರ್ಕಟಕ: ಸಾಂಸಾರಿಕವಾಗಿ ಹೊಸ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಸರಕಾರಿ ಉದ್ಯೋಗಿಗಳಿಗೆ ಹಿನ್ನಡೆಯಾದೀತು.

ಸಿಂಹ: ಅಂದುಕೊಂಡ ಕೆಲಸ ಕಾರ್ಯಗಳು ನೆರವೇರದೇ ಹತಾಶೆಯಾದೀತು. ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಮನಸ್ಸಿನ ಮಾತುಗಳನ್ನು ಆತ್ಮೀಯರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳು ಕಂಡುಬರಲಿವೆ. ಭೂಮಿ, ವಾಹನ ಖರೀದಿ ವ್ಯವಹಾರಗಳನ್ನು ಮುಂದೂಡುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸತತವಾಗಿ ಪ್ರಯತ್ನಪಟ್ಟಲ್ಲಿ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚಗಳಾಗಲಿವೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ಅಂದುಕೊಂಡ ಕೆಲಸಗಳನ್ನು ಅನಿವಾರ್ಯವಾಗಿ ಮುಂದೂಡಬೇಕಾದೀತು. ರಾಜಕೀಯ ವರ್ಗದವರಿಗೆ ಕಾರ್ಯದೊತ್ತಡ ಅಧಿಕವಾಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದೀತು. ಸಾಲಗಾರರಿಂದ ಮುಕ್ತಿ.

ಧನು: ಎಷ್ಟೇ ಸಮಾಧಾನವಿದ್ದರೂ, ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗಲಿದೆ. ಅಧಿಕ ಓಡಾಟದಿಂದ ದೇಹಾಯಾಸವಾದೀತು. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ. ತಾಳ್ಮೆಯಿರಲಿ.

ಮಕರ: ಕಳೆದು ಹೋದ ಸಂಬಂಧಗಳು ಮರಳಿ ಕೂಡಿಕೊಳ್ಳಲಿವೆ. ಸಾಂಸಾರಿಕವಾಗಿ ನೆಮ್ಮದಿಯ ದಿನವಾಗಲಿದೆ. ಆದರೆ ಕಾರ್ಯಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ಅರ್ಧಕ್ಕೇ ಸ್ಥಗಿತಗೊಳ್ಳಲಿವೆ. ಭವಿಷ್ಯದ ಬಗ್ಗೆ ಚಿಂತೆಯಾದೀತು.

ಕುಂಭ: ವ್ಯಾಪಾರ, ವ್ಯವಹಾರದಲ್ಲಿ ಏರುಪೇರು ಕಂಡುಬರಲಿದೆ. ಶುಭ ಮಂಗಲ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಲ್ಲಿ ಭಾಗಿಯಾಗುವ ಯೋಗವಿದೆ. ನಿಮ್ಮ ದೈನಂದಿನ ಕೆಲಸಕ್ಕೆ ಅಡೆತಡೆಯಾದೀತು.

ಮೀನ: ಸಂಗಾತಿಯ ದೇಹಾರೋಗ್ಯ ಚಿಂತೆಗೆ ಕಾರಣವಾಗಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments