Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 29 ಏಪ್ರಿಲ್ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನೀವು ನಿರೀಕ್ಷಿಸಿದ್ದು ಒಂದು, ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಲಿದ್ದೀರಿ. ಕೌಟುಂಬಿಕವಾಗಿ ಮಾತಿನ ಮೇಲೆ ಹಿಡಿತವಿರಲಿ. ತಾಳ್ಮೆ ಅತೀ ಅಗತ್ಯ.

ವೃಷಭ: ನೀವು ಹಿಂದೆ ಮಾಡಿದ ಕೆಲಸ, ಆಡಿದ ಮಾತುಗಳಿಗೆ ಪಶ್ಚಾತ್ತಾಪ ಪಡುವ ಪರಿಸ್ಥಿತಿ ಎದುರಾಗಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾದೀತು.

ಮಿಥುನ: ನಿರುದ್ಯೋಗಿಗಳು ಆದಾಯ ಗಳಿಕೆಗೆ ನಾನಾ ದಾರಿ ಹುಡುಕಲಿದ್ದಾರೆ. ಕಲಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ವ್ಯಾಪಾರಿಗಳಿಗೆ ನಷ್ಟದ ಭೀತಿ ಎದುರಾಗಲಿದೆ. ಖರ್ಚು ವೆಚ್ಚಗಳಿಗೆ ಕಡಿವಾಣವಿರಲಿ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಕೆಲವೊಂದು ಖರ್ಚು ವೆಚ್ಚಗಳು ಎದುರಾದೀತು. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ತಾಳ್ಮೆಯಿರಲಿ.

ಸಿಂಹ: ಉದ್ವೇಗಕ್ಕೊಳಗಾಗಿ ನಿರ್ಧಾರ ತೆಗೆದುಕೊಳ್ಳಲು ಹೋದರೆ ಕೈಸುಟ್ಟುಕೊಳ್ಳಬೇಕಾದೀತು. ತಾಳ್ಮೆ, ಸಂಯಮವಿರಬೇಕು. ವಿದ್ಯಾರ್ಥಿಗಳಿಗೆ ಭವಿಷ್ಯದ ಚಿಂತೆ ಕಾಡಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ವ್ಯಾಪಾರ, ವ್ಯವಹಾರಗಳಲ್ಲಿ ಹೆಚ್ಚಿನ ಲಾಭವಾಗದು. ಆದರೆ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಬಂಡವಾಳ ಹೂಡಿಕೆಗೆ ಕೆಲವು ದಿನಗಳ ಕಾಲ ಕಾಯುವುದು ಉತ್ತಮ. ದೂರ ಸಂಚಾರ ಮುಂದೂಡಲಿದ್ದೀರಿ.

ತುಲಾ: ಆರ್ಥಿಕವಾಗಿ ಹಿನ್ನಡೆ ತೋರಿಬಂದರೂ ನಿಮ್ಮ ಅಗತ್ಯಗಳಿಗೆ ಖರ್ಚು ಮಾಡಲೇಬೇಕಾಗುತ್ತದೆ. ಉದ್ಯೋಗ ರಂಗದಲ್ಲಿ ಮುನ್ನಡೆ ತೋರಿಬರಲಿದ್ದು, ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಶ್ಚಿಕ: ವಧು-ವರಾನ್ವೇಷಣೆಯಲ್ಲಿ ತೊಡಗಿದ್ದವರು ಕೆಲವು ದಿನ ಕಾಯುವುದು ಉತ್ತಮ. ಪ್ರೇಮಿಗಳಿಗೆ ವಿರಹ ವೇದನೆ ಕಂಡುಬಂದೀತು. ಪ್ರಾಮಾಣಿಕವಾಗಿದ್ದರೆ ಅದಕ್ಕೆ ಫಲ ಸಿಗಲಿದೆ. ಹಿರಿಯರ ಆರೋಗ್ಯದ ಕಾಳಜಿ ಮಾಡಿ.

ಧನು: ನಿಮ್ಮ ಯೋಚನೆಗಳನ್ನು ಬದಲಾಯಿಸಬೇಕಾದ ಕಾಲವಿದು. ಬೇರೆಯವರ ವಿಚಾರದಲ್ಲಿ ಅನಗತ್ಯವಾಗಿ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಬೇಡಿ. ಸಂಗಾತಿಯ ಮಾತಿಗೆ ಕಿವಿಗೊಡಿ. ಅನಗತ್ಯ ಚಿಂತೆ ಬೇಡ.

ಮಕರ: ನೀವು ಇಂದು ಕೈಗೊಳ್ಳುವ ನಿರ್ಧಾರ ನಿಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಸಮಾಧಾನ ಸಿಗುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕುಂಭ: ಆರ್ಥಿಕ ವಿಚಾರದಲ್ಲಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಸಂಗಾತಿಯ ಕೆಲವೊಂದು ಮಾತುಗಳು ಅಪಥ್ಯವೆನಿಸೀತು. ತಾಳ್ಮೆ ಕಳೆದುಕೊಂಡರೆ ಕೌಟುಂಬಿಕವಾಗಿ ಭಿನ್ನಾಭಿಪ್ರಾಯವಾದೀತು. ಪ್ರಯಾಣದಲ್ಲಿ ಎಚ್ಚರ.

ಮೀನ: ಹಿಂದಿನ ಕಹಿ ಘಟನೆಗಳನ್ನು ಮರೆತು ಮುನ್ನಡೆಯಬೇಕಾದ ಅನಿವಾರ್ಯತೆಯಿದೆ. ಪೋಷಕರೊಂದಿಗೆ ಅನಗತ್ಯ ಭಿನ್ನಾಭಿಪ್ರಾಯ ಬೇಡ. ದೂರ ಪ್ರಯಾಣಗಳನ್ನು ಮುಂದೂಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಇಂದು ಈ ಸ್ತೋತ್ರ ಓದಿ

ಶ್ರೀ ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ

ವಿಘ್ನ ವಿನಾಯಕನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments