Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 1 ಮೇ 2021 (07:12 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ದುಡಿಮೆ ಕಡಿಮೆ ಖರ್ಚು ಹೆಚ್ಚು ಎನ್ನುವ ಪರಿಸ್ಥಿತಿ ಎದುರಾಗಲಿದೆ. ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹಿಂದೆ ಆಡಿದ ಮಾತುಗಳಿಗೆ ಪಶ್ಚಾತ್ತಾಪಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಹೊಸ ರೀತಿಯ ಸವಾಲುಗಳಿಗೆ ಸಿದ್ಧರಾಗಿ.

ವೃಷಭ: ಸಾಂಸಾರಿಕವಾಗಿ ಸಂಯಮ ತಪ್ಪಿದಲ್ಲಿ ಸಾಮರಸ್ಯ ತಪ್ಪೀತು. ಮಕ್ಕಳ ವಿದ್ಯಾಭ್ಯಾಸ ಜೀವನ ಚಿಂತೆಗೆ ಕಾರಣವಾದೀತು. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ಮಿಥುನ: ಮಾನಸಿಕ ಉದ್ವೇಗದಿಂದಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಡವಲಿದ್ದೀರಿ. ಆಪ್ತರೊಂದಿಗೆ ಸಮಾಲೋಚನೆ ನಡೆಸಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ತೃಪ್ತಿ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.

ಕರ್ಕಟಕ: ಕಾರ್ಯಕ್ಷೇತ್ರದಲ್ಲಿ ವಿಘ್ನ ಭಯ ತೋರಿಬರಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ ದಿನದಾರಂಭ ಮಾಡಿದರೆ ಉತ್ತಮ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭ ಪಡೆಯುವ ಚಿಂತೆ ಕಾಡಲಿದೆ. ತಾಳ್ಮೆಯಿರಲಿ.

ಸಿಂಹ: ನಿಮ್ಮ ಕಾರ್ಯಸಾಧನೆಗೆ ಅಪರಿಚಿತರಿಂದಲೂ ನೆರವು ಸಿಕ್ಕೀತು. ಆದರೆ ಅನಗತ್ಯವಾಗಿ ಮಾತು, ವರ್ತನೆಯಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ನಿರುದ್ಯೋಗಿಗಳು ಸೂಕ್ತ ಉದ್ಯೋಗಕ್ಕೆ ಕೆಲವು ದಿನ ಕಾಯುವುದು ಒಳಿತು.

ಕನ್ಯಾ: ವ್ಯಾಪಾರ, ವ್ಯವಹಾರದಲ್ಲಿ ನೀವು ಅಂದುಕೊಂಡಂತೇ ಎಲ್ಲವೂ ನಡೆಯದು. ಆದರೆ ಚಿಂತೆ ಬೇಡ. ಗೃಹಿಣಿಯರಿಗೆ ಮನೆಗೆಲಸ ಹೊರೆಯೆನಿಸೀತು. ಪ್ರೀತಿ ಪಾತ್ರರೊಂದಿಗೆ ನಿಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಸಂಗಾತಿಗೆ ಅನಿರೀಕ್ಷಿತ ಅಚ್ಚರಿ ಕೊಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ. ಉದ್ದೇಶಿತ ಶುಭ ಮಂಗಲ ಕಾರ್ಯಗಳನ್ನು ಮುಂದೂಡಬೇಕಾಗುತ್ತದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಬರುವಂತಹ ಸಮಸ್ಯೆಗಳನ್ನು ನಿಭಾಯಿಸಲಿದ್ದೀರಿ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸುವ ಯೋಗವಿದೆ. ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿಬರಲಿದೆ.

ಧನು: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಕೋಪ ತಾಪಗಳಿಂದ ನಿರ್ಧಾರ ತೆಗೆದುಕೊಂಡರೆ ತೊಂದರೆಯಾದೀತು. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ಅನಗತ್ಯ ಚಿಂತೆ ಬೇಡ.

ಮಕರ: ಯೋಗ್ಯ ವಯಸ್ಕರು ಸೂಕ್ತ ವೈವಾಹಿಕ ಸಂಬಂಧ ಕಂಡುಕೊಳ್ಳಲಿದ್ದಾರೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ರಾಜಕೀಯ ರಂಗದಲ್ಲಿರುವವರಿಗೆ ಕಾರ್ಯದೊತ್ತಡ ಅಧಿಕವೆನಿಸಲಿದೆ. ತಮ್ಮವರಿಗೆ ಒಳಿತು ಮಾಡಲು ಹೋಗಿ ಅಪವಾದಕ್ಕೆ ಗುರಿಯಾಗುವ ಸಂದರ್ಭ ಎದುರಾದೀತು. ಕಾರ್ಯರಂಗದಲ್ಲಿ ಶತ್ರುಬಾಧೆ ಅಲಕ್ಷಿಸುವುದು ಬೇಡ. ತಾಳ್ಮೆಯಿರಲಿ.

ಮೀನ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಹೋದಲ್ಲಿ ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಆಕಸ್ಮಿಕವಾಗಿ ಧನಲಾಭವಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ