Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 2 ಮೇ 2021 (08:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಕೆಲವೊಂದು ವಿಚಾರಗಳು ಮಾನಸಿಕವಾಗಿ ನಿಮ್ಮನ್ನು ಕುಗ್ಗುವಂತೆ ಮಾಡಲಿವೆ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾದೀತು. ಹಿಂದಿನ ಘಟನೆಗಳನ್ನು ಮೆಲುಕು ಹಾಕುತ್ತಾ ನಿರುತ್ಸಾಹಕ್ಕೊಳಗಾಗದಿರಿ. ಕಿರು ಓಡಾಟ ನಡೆಸಲಿದ್ದೀರಿ.

ವೃಷಭ: ಸಂದಿಗ್ಧದ ಪರಿಸ್ಥಿತಿಯಲ್ಲಿ ನಿಮ್ಮ ಮನಸ್ಸಿನ ಮಾತುಗಳಿಗೆ ಕಿವಿಗೊಡುವುದು ಉತ್ತಮ. ಸಂಗಾತಿಯ ಬಹುದಿನಗಳ ಬೇಡಿಕೆ ಈಡೇರಿಸಲಿದ್ದೀರಿ. ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ಸಿಗುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಮಿಥುನ: ಪ್ರೀತಿ ಪಾತ್ರರ ಕೋಪತಾಪಗಳಿಗೆ ಗುರಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾದೀತು. ಕಷ್ಟದ ದಿನಗಳನ್ನು ಎದುರಿಸಲು ಸಿದ್ಧರಾಗಿ.

ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳಿಗೆ ಕುಟುಂಬಸ್ಥರ ಬೆಂಬಲ ಸಿಗದೇ ಹೋದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕಾಯಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ದೂರ ಸಂಚಾರದಿಂದ ದೇಹಾಯಾಸವಾದೀತು. ನಿಮ್ಮ ಕಾರ್ಯ ಸಾಧನೆಗಾಗಿ ಅಪರಿಚಿತರೊಂದಿಗೆ ವ್ಯವಹಾರ ಮಾಡಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಮನಸ್ಸಿನ ಮಾತಿಗೆ ಕಿವಿಗೊಡಿ.

ಕನ್ಯಾ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಕಾಗದ ಪತ್ರಗಳನ್ನು ಜೋಪಾನ ಮಾಡುವ ತಲೆನೋವು ಎದುರಾದೀತು.

ತುಲಾ: ನಿಮ್ಮ ಮಾತಿನಿಂದಲೇ ಇತರರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ತಾಳ್ಮೆ, ಸಂಯಮವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿ ಪಡೆಯುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಕಿರು ಸಂಚಾರ ಮಾಡುವಿರಿ.

ವೃಶ್ಚಿಕ: ಪ್ರೀತಿ ಪಾತ್ರರ ಯೋಗ ಕ್ಷೇಮಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಯಾವುದೇ ವಸ್ತುವಿನ ಮೇಲೆ ಅತಿಯಾದ ವ್ಯಾಮೋಹ ಬೇಡ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆ ಎದುರಾಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.

ಧನು: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿನ ಭಾರ ಕೊಂಚ ಹಗುರವಾಗಲಿದೆ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ನೆರೆಹೊರೆಯವರೊಂದಿಗೆ ನೀರಿಗಾಗಿ ವಾಗ್ವಾದ ನಡೆದೀತು. ಎಚ್ಚರ.

ಮಕರ: ಪತ್ನಿಯ ಮನದಾಸೆ ಪೂರೈಸಲು ಪ್ರಯತ್ನಪಡಲಿದ್ದೀರಿ. ನೂತನ ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಹಿರಿಯರ ಸಲಹೆ ಪಾಲಿಸಿರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಗಳಿಸಲು ಅವಕಾಶ ಸಿಗಲಿದೆ.

ಕುಂಭ: ಅನಗತ್ಯವಾಗಿ ಮಾನಸಿಕವಾಗಿ ಚಿಂತೆ ಮಾಡುವುದರಿಂದ ಕೆಲಸದಲ್ಲಿ ಉತ್ಸಾಹ ಕಳೆದುಕೊಳ್ಳಲಿದ್ಧೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮೀನ: ನಾವು ಎಣಿಸಿದ ರೀತಿಯಲ್ಲಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಭಾವನೆ ಕಾಡಲಿದೆ. ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments