Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 4 ಮೇ 2021 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉತ್ತಮ ಅವಕಾಶಕ್ಕಾಗಿ ಕಾಯಲೇಬೇಕಾದ ಪರಿಸ್ಥಿತಿ ನಿಮ್ಮದು. ತಾಳ್ಮೆ ಪರೀಕ್ಷೆ ನಡೆದೀತು. ನ್ಯಾಯಾಲಯದ ಪ್ರಕ್ರಿಯೆಗಳು ವಿಳಂಬಗತಿಯಲ್ಲಿ ಸಾಗಲಿವೆ. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟದ ಭೀತಿ ಎದುರಾದೀತು.

ವೃಷಭ: ವೃತ್ತಿರಂಗದಲ್ಲಿ ನಿಮಗಿದ್ದ ಕಂಟಕಗಳು ನಿವಾರಣೆಯಾಗಿ ನಿಮ್ಮ ಹಾದಿ ಸುಗಮವಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಕೃಷಿಕರಿಗೆ ಲಾಭವೂ ಇಲ್ಲದ ನಷ್ಟವೂ ಇಲ್ಲದ ಸಮಸ್ಥಿತಿ.

ಮಿಥುನ: ಸರಕಾರಿ ಕೆಲಸಗಳು ಸುಗಮವಾಗಿ ನೆರವೇರಲಿವೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನೂತನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ಕೆಲವು ದಿನ ಕಾಯುವುದು ಒಳಿತು. ತಾಳ್ಮೆಯಿರಲಿ.

ಕರ್ಕಟಕ: ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟದಿಂದ ನಿಮ್ಮ ಕೆಲಸಗಳು ಅರ್ಧಕ್ಕೇ ನಿಂತು ಹೋದೀತು. ನಿರುದ್ಯೋಗಿಗಳಿಗೆ ಉದ್ಯೋಗಕ್ಕೆ ಹೆಚ್ಚು ಶ್ರಮಪಡಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಹುಡುಕಿಕೊಂಡು ಬರಲಿವೆ. ಮನೆಗೆ ಅನಿರೀಕ್ಷಿತ ಅತಿಥಿಯ ಆಗಮನವಾದೀತು. ಹಿರಿಯರೊಂದಿಗೆ ವಾದ ವಿವಾದ ಬೇಡ. ಸಂಗಾತಿಯ ಸಲಹೆ ಉಪಯೋಗಕ್ಕೆ ಬರಲಿದೆ.

ಕನ್ಯಾ: ವ್ಯಾವಹಾರಿಕವಾಗಿ ನಿಮಗೆ ಮುನ್ನಡೆಯ ಯೋಗವಿದೆ. ಆದರೆ ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾದೀತು. ಕೌಟುಂಬಿಕವಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಸಾಂಸಾರಿಕವಾಗಿ ನಿಮ್ಮ ಮಾತೇ ನಿಮಗೆ ಶತ್ರುವಾದೀತು. ನೀವು ಹೇಳುವುದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ಎದುರಾದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ತಾಳ್ಮೆ, ಸಂಯಮವಿರಲಿ.

ವೃಶ್ಚಿಕ: ದಾಯಾದಿ ವ್ಯವಹಾರಗಳು ಕೋರ್ಟು ಮೆಟ್ಟಿಲೇರಲಿವೆ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ಸರಕಾರಿ ವೃತ್ತಿಯವರಿಗೆ ಆದಾಯ ವೃದ್ಧಿಯಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಧನು: ಪ್ರೀತಿ, ಪ್ರೇಮ ಸಂಬಂಧಗಳಲ್ಲಿ ಜಯ ಸಿಗಲಿದೆ. ನಿಮ್ಮದಲ್ಲದ ವಸ್ತುವಿನ ಮೇಲೆ ಅತಿಯಾದ ವ್ಯಾಮೋಹ ಬೇಡ. ವೈಯಕ್ತಿಕ ಕಷ್ಟ-ಸುಖಗಳನ್ನು ಸಂಗಾತಿ ಜೊತೆ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.

ಮಕರ: ಕೆಲವೊಂದು ಅನಿರೀಕ್ಷಿತ ಘಟನೆಗಳು ನಿಮ್ಮ ದೈನಂದಿನ ಕೆಲಸಗಳ ಮೇಲೆ ಪ್ರಭಾವ ಬೀರಲಿವೆ. ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ. ಸ್ವಯಂ ವೃತ್ತಿಯವರಿಗೆ ಕೊಂಚ ಚೇತರಿಕೆ ಕಂಡುಬಂದೀತು.

ಕುಂಭ: ಕಷ್ಟದ ಸಮಯದಲ್ಲಿ ಮಿತ್ರರು ಕೊಡುವ ಕೆಲವೊಂದು ಸಲಹೆಗಳು ನೆರವಿಗೆ ಬರಲಿವೆ. ಅವಿವಾಹಿತರಿಗೆ ಅಡೆತಡೆಗಳಿದ್ದರೂ ವಿವಾಹ ಕೂಡಿಬರಲಿದೆ. ಕೆಲಸ ಕಾರ್ಯದಲ್ಲಿ ವಿಳಂಬವಿದ್ದರೂ ಅಂತಿಮ ಜಯ ಸಿಗಲಿದೆ.

ಮೀನ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳನ್ನು ಹೊರಲು ಸಿದ್ಧರಾಗಬೇಕಾಗುತ್ತದೆ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗ ಕೂಡಿಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಷಯ ತೃತೀಯ ದಿನದಂದು ಈ ಕೆಲಸಗಳನ್ನು ಮಾಡಿದರೆ ಉತ್ತಮ