Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 8 ಮೇ 2021 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ನಿಮ್ಮ ಸಾಂಸಾರಿಕ ಸಮಸ್ಯೆಗಳಿಗೆ ಸದ್ಯಕ್ಕೆ ಪರಿಹಾರ ಸಿಕ್ಕರೂ ಅದು ತಾತ್ಕಾಲಿಕವೆನಿಸೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಪ್ರೇಮಿಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ವೃತ್ತಿರಂಗದ ಬಗ್ಗೆ ಚಿಂತೆಯಾಗಲಿದೆ.

ಮಿಥುನ: ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾದೀತು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಬುದ್ಧಿವಂತಿಕೆ ಪ್ರದರ್ಶಿಸಬೇಕಾದ ಸಮಯ ಬರಲಿದೆ. ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕೃಷಿಕರಿಗೆ ಅತ್ತ ಲಾಭವೂ ಅಲ್ಲದ ನಷ್ಟವೂ ಅಲ್ಲದ ವ್ಯವಹಾರವಾಗಲಿದೆ.

ಸಿಂಹ: ಯಾರದ್ದೋ ಬಗ್ಗೆ ಭ್ರಮೆಯಲ್ಲಿದ್ದರೆ ಅದನ್ನು ತೆಗೆದುಹಾಕಿ, ನಿಜ ರೂಪ ನೀಡುವ ಸಮಯ ಬರಲಿದೆ. ರಾಜಕೀಯ ವ್ಯಕ್ತಿಗಳಿಗೆ ಸತ್ವ ಪರೀಕ್ಷೆ ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಮುಖ್ಯ.

ಕನ್ಯಾ: ನಿಮ್ಮ ಕ್ರಿಯಾಶೀಲತೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಅಸ್ಥಿರತೆ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ.

ತುಲಾ: ಸಹನೆಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ಕೈಗೆ ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ಪ್ರಾರ್ಥನೆ ಮಾಡಿದರೆ ಎಲ್ಲವೂ ಶುಭವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ನೀವು ಊಹಿಸಿದ ರೀತಿಯಲ್ಲೇ ಕೆಲಸಗಳು ಸಾಗುವುದರಿಂದ ಅನಗತ್ಯ ಚಿಂತೆ ಬೇಡ. ಗೃಹ ರಿಪೇರಿ, ವಾಹನ ರಿಪೇರಿ ಇತ್ಯಾದಿಗಳಿಗಾಗಿ ಖರ್ಚು ವೆಚ್ಚಗಳು ಕಂಡುಬಂದೀತು. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಕಂಡುಬರಲಿದೆ.

ಧನು: ನಿಮ್ಮಿಂದ ಲಾಭ ಪಡೆಯಲು ಹೊಂಚು ಹಾಕಿರರುವವರ ಮೇಲೆ ನಿಗಾ ಇರಲಿ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಅನೇಕ ರೀತಿಯ ಯೋಚನೆಗಳು ಬರಲಿದ್ದು, ತಾಳ್ಮೆ, ಸಂಯಮದಿಂದ ನಿರ್ಧಾರ ಕೈಗೊಳ್ಳಬೇಕಾದೀತು. ದೈಹಿಕವಾಗಿ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿವಿಧ ಮೂಲಗಳಿಂದ ಧನಪ್ರಾಪ್ತಿಯಾಗಲಿದೆ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯ ನೆರವೇರಲಿದೆ. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡಿಕೊಳ್ಳಿ.

ಮೀನ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳನ್ನು ಮುಂದೂಡಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ