Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 8 ಮೇ 2021 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ವ್ಯವಹಾರದಲ್ಲಿ ಹಂತ ಹಂತವಾಗಿ ಚೇತರಿಕೆ ಕಂಡುಬರಲಿದೆ. ನಿಮ್ಮ ಸಾಂಸಾರಿಕ ಸಮಸ್ಯೆಗಳಿಗೆ ಸದ್ಯಕ್ಕೆ ಪರಿಹಾರ ಸಿಕ್ಕರೂ ಅದು ತಾತ್ಕಾಲಿಕವೆನಿಸೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಪ್ರೇಮಿಗಳ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ವೃತ್ತಿರಂಗದ ಬಗ್ಗೆ ಚಿಂತೆಯಾಗಲಿದೆ.

ಮಿಥುನ: ಅವಿವಾಹಿತರಿಗೆ ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾದೀತು. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಲಿವೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ವ್ಯಾಪಾರ, ವ್ಯವಹಾರದಲ್ಲಿ ನಿಮ್ಮ ಬುದ್ಧಿವಂತಿಕೆ ಪ್ರದರ್ಶಿಸಬೇಕಾದ ಸಮಯ ಬರಲಿದೆ. ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕೃಷಿಕರಿಗೆ ಅತ್ತ ಲಾಭವೂ ಅಲ್ಲದ ನಷ್ಟವೂ ಅಲ್ಲದ ವ್ಯವಹಾರವಾಗಲಿದೆ.

ಸಿಂಹ: ಯಾರದ್ದೋ ಬಗ್ಗೆ ಭ್ರಮೆಯಲ್ಲಿದ್ದರೆ ಅದನ್ನು ತೆಗೆದುಹಾಕಿ, ನಿಜ ರೂಪ ನೀಡುವ ಸಮಯ ಬರಲಿದೆ. ರಾಜಕೀಯ ವ್ಯಕ್ತಿಗಳಿಗೆ ಸತ್ವ ಪರೀಕ್ಷೆ ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಮುಖ್ಯ.

ಕನ್ಯಾ: ನಿಮ್ಮ ಕ್ರಿಯಾಶೀಲತೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಅಸ್ಥಿರತೆ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ.

ತುಲಾ: ಸಹನೆಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ಕೈಗೆ ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ಪ್ರಾರ್ಥನೆ ಮಾಡಿದರೆ ಎಲ್ಲವೂ ಶುಭವಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ನೀವು ಊಹಿಸಿದ ರೀತಿಯಲ್ಲೇ ಕೆಲಸಗಳು ಸಾಗುವುದರಿಂದ ಅನಗತ್ಯ ಚಿಂತೆ ಬೇಡ. ಗೃಹ ರಿಪೇರಿ, ವಾಹನ ರಿಪೇರಿ ಇತ್ಯಾದಿಗಳಿಗಾಗಿ ಖರ್ಚು ವೆಚ್ಚಗಳು ಕಂಡುಬಂದೀತು. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಕಂಡುಬರಲಿದೆ.

ಧನು: ನಿಮ್ಮಿಂದ ಲಾಭ ಪಡೆಯಲು ಹೊಂಚು ಹಾಕಿರರುವವರ ಮೇಲೆ ನಿಗಾ ಇರಲಿ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಅನೇಕ ರೀತಿಯ ಯೋಚನೆಗಳು ಬರಲಿದ್ದು, ತಾಳ್ಮೆ, ಸಂಯಮದಿಂದ ನಿರ್ಧಾರ ಕೈಗೊಳ್ಳಬೇಕಾದೀತು. ದೈಹಿಕವಾಗಿ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿವಿಧ ಮೂಲಗಳಿಂದ ಧನಪ್ರಾಪ್ತಿಯಾಗಲಿದೆ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯ ನೆರವೇರಲಿದೆ. ಸಾಂಸಾರಿಕವಾಗಿ ಸಾಮರಸ್ಯ ಕಾಪಾಡಿಕೊಳ್ಳಿ.

ಮೀನ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕೋರ್ಟು ಕಚೇರಿ ವ್ಯವಹಾರಗಳನ್ನು ಮುಂದೂಡಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments