Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 9 ಮೇ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.



ಮೇಷ: ಪ್ರಯತ್ನ ಬಲ, ಆತ್ಮವಿಶ್ವಾಸವಿದ್ದರೆ ಎಂಥಾ ಕೆಲಸವಾದರೂ ನಿಭಾಯಿಸಬಲ್ಲೆ ಎಂಬ ಆತ್ಮವಿಶ್ವಾಸ ನಿಮ್ಮದಾಗಲಿದೆ. ಹೊಸ ಕೆಲಸಕ್ಕೆ ಕೈ ಹಾಕಲು ಪ್ರಯತ್ನಿಸಲಿದ್ದೀರಿ. ಸಂಗಾತಿಯೊಂದಿಗೆ ಅನಗತ್ಯ ಮನಸ್ತಾಪ ಬೇಡ. ತಾಳ್ಮೆಯಿರಲಿ.

ವೃಷಭ: ಹಿರಿಯರ ಸೂಕ್ತ ಸಲಹೆ, ಮಾರ್ಗದರ್ಶನ ಪಾಲಿಸಿದಲ್ಲಿ ಅಂದುಕೊಂಡ ಕೆಲಸಗಳು ನೆರವೇರಲಿವೆ. ಮಹತ್ವದ ಕೆಲಸಗಳಿಗೆ ಮುಂದಾಗಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ.

ಮಿಥುನ: ಆರ್ಥಿಕವಾಗಿ ಆದಾಯ ವೃದ್ಧಿಯಾಗಲಿದೆ. ಆದರೆ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ವೈದ್ಯಕೀಯ ವೃತ್ತಿಯವರಿಗೆ ಕಾರ್ಯದೊತ್ತಡವಿರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಕ್ಕೀತು.

ಕರ್ಕಟಕ: ದೂರ ಸಂಚಾರಗಳನ್ನು ಅನಿವಾರ್ಯವಾಗಿ ಮುಂದೂಡಲಿದ್ದೀರಿ. ಮನೆಯಲ್ಲಿ ನಡೆಯಬೇಕಿದ್ದ ಶುಭ ಮಂಗಲ ಕಾರ್ಯಗಳು ಮುಂದೂಡಿಕೆಯಾಗಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದು ನೆರವೇರಿಸಲಾಗದೇ ನಿರಾಸೆಯಾದೀತು. ವೈಯಕ್ತಿಕವಾಗಿ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಆರ್ಥಿಕವಾಗಿ ವಿವಿಧ ಮೂಲಗಳಿಂದ ಧನಾದಾಯ ವೃದ್ಧಿಯಾಗಲಿದೆ. ಚಿಂತೆ ಬೇಡ.

ಕನ್ಯಾ: ವೃತ್ತಿರಂಗದಲ್ಲಿ ಬದಲಾವಣೆ ಮನಸ್ಸು ಬಯಸೀತು. ಮೇಲಧಿಕಾರಿಗಳ ಕಿರಿ ಕಿರಿ ಮನಸ್ಸಿಗೆ ಬೇಸರವುಂಟು ಮಾಡಲಿದೆ. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ: ನಿಮ್ಮ ದುಡುಕು ವರ್ತನೆಯಿಂದ ಕೈಗೆ ಬಂದಿದ್ದೂ ಬಾಯಿಗೆ ಬರದ ಸ್ಥಿತಿಯಾದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.

ವೃಶ್ಚಿಕ: ವ್ಯಾಪಾರಿಗಳು ಧನಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ಸರಕಾರಿ ಕಾಗದ ಪತ್ರಗಳನ್ನು ಜೋಪಾನ ಮಾಡುವ ಹೊಣೆಗಾರಿಕೆ ನಿಮ್ಮದಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಧನು: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗಿದ್ದು ಇನ್ನೊಂದು ಎನ್ನುವ ಸ್ಥಿತಿ ನಿಮ್ಮದಾಗಲಿದೆ. ಅನಗತ್ಯ ಚಿಂತೆಗಳನ್ನು ಬದಿಗಿಟ್ಟು ಕೆಲಸದತ್ತ ಗಮನಹರಿಸಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ತಾಳ್ಮೆಯಿರಲಿ.

ಮಕರ: ಇಂದು ನಿಮ್ಮ ಮಾತೇ ನಿಮಗೆ ಶತ್ರುವಾದೀತು. ಕೌಟುಂಬಿಕವಾಗಿ ಇತರರ ಅಸಮಾಧಾನಕ್ಕೆ ಗುರಿಯಾಗಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ.

ಕುಂಭ: ಇತರರ ಕೆಲಸದಲ್ಲಿ ಮೂಗು ತೂರಿಸಲು ಹೋಗಿ ಸಮಸ್ಯೆಗೆ ಸಿಲುಕದಿರಿ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆ ಪ್ರಕಟಿಸಲು ಸಕಾಲ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಚಿಂತೆ ಬೇಡ.

ಮೀನ: ಹಿಂದೆ ಮಾಡಿ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ವೃತ್ತಿರಂಗದಲ್ಲಿ ಹೊಸಬಗೆಯ ಚಿಂತನೆಯಿದ್ದಲ್ಲಿ ಯಶಸ್ಸು ಸಾಧ‍್ಯ. ಕಟ್ಟಡ ಕಾಮಗಾರಿ ಕೆಲಸಗಳನ್ನು ಮುಂದೂಡುವುದು ಉತ್ತಮ. ದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments