Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 10 ಮೇ 2021 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಏನೇ ಮಾಡಿದರೂ ನಿತ್ಯದ ಚಿಂತೆ ತಪ್ಪದು. ದೈನಂದಿನ ಕೆಲಸಗಳಿಂದ ದೇಹ ಹೈರಾಣಾಗಲಿದೆ. ಕೌಟುಂಬಿಕವಾಗಿ ತಾಳ್ಮೆಯಿಂದ ಮಾತು, ನಡೆ ಇದ್ದರೆ ಸಮಸ್ಯೆಯಾಗದು. ಆರ್ಥಿಕವಾಗಿ ಖರ್ಚು ವೆಚ್ಚಗಳು ಚಿಂತೆಗೆ ಕಾರಣವಾಗಲಿದೆ.

ವೃಷಭ: ಪ್ರತಿ ಹಂತದಲ್ಲೂ ವಿವೇಚನೆಯಿಂದ ಕೆಲಸ ಮಾಡಬೇಕಾದ ಅಗತ್ಯವಿದೆ. ಕೆಲಸ ಕಾರ್ಯಗಳಲ್ಲಿ ವಿಳಂಬಗತಿ ತೋರಿಬರಲಿದೆ. ಹಣಕಾಸಿನ ಹರಿವು ಕಡಿಮೆಯಾಗಲಿದೆ. ಭವಿಷ್ಯದ ಬಗ್ಗೆ ಎಚ್ಚರಿಕೆಯ ಹೆಜ್ಜೆಯಿಡಬೇಕು.

ಮಿಥುನ: ಮೇಲ್ವರ್ಗದ ಅಧಿಕಾರಿಗಳಿಗೆ ವೃತ್ತಿರಂಗದಲ್ಲಿ ಮುನ್ನಡೆಯ ಯೋಗವಿದೆ. ಕೂಡಿಟ್ಟ ಹಣ ಖರ್ಚಾಗಲಿದೆ. ವಿದ್ಯಾರ್ಥಿಗಳ ಭವಿಷ್ಯ ಅಂತ್ರವಾದೀತು. ದೈಹಿಕ ಆರೋಗ್ಯವನ್ನು ಕಡೆಗಣಿಸದಿರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಧೈರ್ಯದಿಂದ ಮುನ್ನಡೆದರೆ ಯಶಸ್ಸು ಸಾಧ್ಯ. ಕೃಷಿಕರಿಗೆ ಸಣ್ಣ ಮಟ್ಟಿನ ಲಾಭವಾದೀತು.

ಸಿಂಹ: ಆದಾಯ ವೃದ್ಧಿಯಿಂದ ಮನಸ್ಸಿಗೆ ಸಂತಸವಾದೀತು. ಕೌಟುಂಬಿಕವಾಗಿ ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು.

ಕನ್ಯಾ: ಮಕ್ಕಳ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತಸವಾಗಲಿದೆ.

ತುಲಾ: ಅರ್ಧಕ್ಕೇ ನಿಂತಿದ್ದ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ತಾಳ್ಮೆಯಿರಲಿ.

ವೃಶ್ಚಿಕ: ಕಳೆದು ಹೋದ ವಸ್ತುಗಳ ಆಕಸ್ಮಿಕವಾಗಿ ಕೈಗೆ ಸಿಗಲಿದೆ. ಪ್ರೀತಿ ಪಾತ್ರರ ಭೇಟಿಗಾಗಿ ಮನಸ್ಸು ಹಾತೊರೆಯಲಿದೆ. ಪ್ರೇಮಿಗಳಿಗೆ ಅಗಲುವಿಕೆಯ ನೋವು ಕಾಡಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮಗೆ ಪ್ರೀತಿ ಪಾತ್ರರು ಎನಿಸಿಕೊಂಡವರ ಬಗ್ಗೆ ಚಾಡಿ ಮಾತು ಕೇಳಿಬಂದೀತು. ನೆರೆಹೊರೆಯವರೊಂದಿಗೆ ನೀರಿಗಾಗಿ ಸಂಘರ್ಷವಾದೀತು. ತಾಳ್ಮೆ, ಸಂಯವಿರಲಿ. ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಬೆನ್ನ ಹಿಂದೆ ಪಿತೂರಿ ನಡೆಸುತ್ತಿದ್ದ ಶತ್ರುಗಳು ನಾಶವಾಗಲಿದ್ದಾರೆ. ನಿಮ್ಮ ಒಳ್ಳೆಯ ಕೆಲಸಗಳಿಗೆ ತಕ್ಕ ಮನ್ನಣೆ ಸಿಗುವುದು. ಕಷ್ಟದಲ್ಲಿರುವ ಮಿತ್ರರಿಗೆ ಸಹಾಯ ಮಾಡಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸುವಿರಿ.

ಕುಂಭ: ಕ್ರಿಯಾಶೀಲ ಕೆಲಸಗಳಿಂದ ಮನಸ್ಸಿಗೂ ದೇಹಕ್ಕೂ ಉಲ್ಲಾಸ ಸಿಗಲಿದೆ. ಬಂಧುಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಶುಭ ಮಂಗಲ ಕಾರ್ಯಗಳನ್ನು ಅನಿವಾರ್ಯವಾಗಿ ಮುಂದೂಡಲಿದ್ದೀರಿ. ತಾಳ್ಮೆಯಿರಲಿ.

ಮೀನ: ಕುಟುಂಬದ ಒಳಿತಿಗಾಗಿ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಕಷ್ಟಗಳಿಗೆ ಹೆಗಲು ಕೊಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Hanuman Mantra: ಹನುಮಂತನ ಅನುಗ್ರಹಕ್ಕಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಓದಿ

Saraswathi Mantra: ವಿದ್ಯೆಯಲ್ಲಿ ಯಶಸ್ಸು ಸಿಗಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

ಮನೆಯಲ್ಲಿ ಅಷ್ಟೈಶ್ವರ್ಯ ಇರಬೇಕೆಂದರೆ ಈ ಸ್ತೋತ್ರ ಓದಿ

Rahu Dosha: ರಾಹು ದೋಷವಿದ್ದಲ್ಲಿ ಈ ಮಂತ್ರವನ್ನು ಜಪಿಸಿ

ಮಂಗಳವಾರ ದುರ್ಗಾ ದೇವಿಯ ಈ ಸ್ತೋತ್ರವನ್ನು ಓದಿದರೆ ಏನು ಲಾಭ ನೋಡಿ

ಮುಂದಿನ ಸುದ್ದಿ
Show comments