Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 14 ಮೇ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡುವುದು ಸಹಜ. ಆಪ್ತರೊಂದಿಗೆ ಸಮಾಲೋಚನೆ ನಡೆಸಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾದೀತು.

ವೃಷಭ: ಕೌಟುಂಬಿಕವಾಗಿ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ. ನಿಮ್ಮ ಮಾತುಗಳಿಗೆ ಆಪ್ತರಿಂದ ಬೆಲೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ವೃತ್ತಿರಂಗದಲ್ಲಿ ಶಕ್ತಿಮೀರಿ ಪ್ರಯತ್ನ ಮಾಡಲಿದ್ದೀರಿ. ಅನಗತ್ಯ ಖರ್ಚುಗಳಿಗೆ ಕಡಿವಾಣವಿರಲಿ.

ಮಿಥುನ: ನಿಮ್ಮ ಜೊತೆಗೇ ಇದ್ದು ಲಾಭ ಪಡೆಯುವವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕಾಯುವುದು ಒಳಿತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ನಿಮ್ಮ ಕೆಲಸದ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ವಿರಾಮ ನೀಡಿ. ಹೊಸ ಬಗೆಯ ಯೋಚನೆಗಳನ್ನು ನಿಮ್ಮನ್ನು ಉಲ್ಲಾಸಗೊಳಿಸಲಿದೆ.

ಸಿಂಹ: ಸರಿಯಾದ ಮಾರ್ಗಗಳನ್ನು ಅನುಸರಿಸಿಕೊಂಡು ಹೋದಲ್ಲಿ ಅಭಿವೃದ್ಧಿಗೆ ದಾರಿಯಾಗಲಿದೆ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ತಪ್ಪದು. ಪ್ರೀತಿ ಪಾತ್ರರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ಚಿಂತೆ ಬೇಡ.

ಕನ್ಯಾ: ಕುಟುಂಬದ ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಮುನ್ನಡೆಯಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳು ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ತಾಳ್ಮೆ ಅಗತ್ಯ.

ತುಲಾ: ಕಷ್ಟ-ಸುಖ ಎರಡನ್ನೂ ಸಮನಾಗಿ ಸ್ವೀಕರಿಸಲು ಸಿದ್ಧರಾಗಿ. ಬಂಧು ಮಿತ್ರರಿಂದ ನಿಮಗೆ ಸೂಕ್ತ ಸಮಯದಲ್ಲಿ ಸಹಾಯ ದೊರೆಯಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತಿಸಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ನಿಮ್ಮ ಹಿತಚಿಂತಕರ ಮನಸ್ಸು ನೋಯಿಸುವ ಕೆಲಸ ಮಾಡಬೇಡಿ. ಗೃಹಿಣಿಯರಿಗೆ ಮನೆಕೆಲಸದಲ್ಲಿ ಕುಟುಂಬ ಸದಸ್ಯರ ನೆರವು ಸಿಗಲಿದೆ. ಆಗಾಗ ಅಡೆತಡೆಗಳು ಬಂದರೂ ಅಂತಿಮವಾಗಿ ಕಾರ್ಯಸಾಧನೆಯಾಗಲಿದೆ.

ಧನು: ಶುಭ ಮಂಗಲ ಕಾರ್ಯ ನೆರವೇರಿಸಬೇಕೆಂದರೂ ಅಡ್ಡಿ, ವಿಘ್ನಗಳು ತಪ್ಪದು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಕೌಟುಂಬಿಕವಾಗಿ ಬಂಧು ಮಿತ್ರರ ಒಡನಾಟ ಖುಷಿ ಕೊಡಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಕಷ್ಟದ ಸಮಯದಲ್ಲಿ ಅನಿರೀಕ್ಷಿತವಾಗಿ ಆಪ್ತರಿಂದ ಸಹಾಯ ಒದಗಿಬರುವುದು. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಪ್ರೇಮಿಗಳ ಗುಟ್ಟು ಮನೆಯವರ ಮುಂದೆ ಬಯಲಾಗಲಿದೆ. ತಾಳ್ಮೆ, ಸಂಯಮವಿರಲಿ.

ಮೀನ: ನಿವೇಶನ, ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಸರಕಾರಿ ಲೆಕ್ಕಪತ್ರಗಳನ್ನು ಜೋಪಾನ ಮಾಡುವ ಜವಾಬ್ಧಾರಿ ಹೆಗಲಿಗೇರಲಿದೆ. ಕಿರು ಓಡಾಟ ನಡೆಸುವಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ