Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 14 ಮೇ 2021 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ನಿರ್ಧಾರ ಕೈಗೊಳ್ಳುವಾಗ ಗೊಂದಲ ಕಾಡುವುದು ಸಹಜ. ಆಪ್ತರೊಂದಿಗೆ ಸಮಾಲೋಚನೆ ನಡೆಸಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾದೀತು.

ವೃಷಭ: ಕೌಟುಂಬಿಕವಾಗಿ ನಿಮ್ಮ ತಾಳ್ಮೆ ಪರೀಕ್ಷೆ ನಡೆಯಲಿದೆ. ನಿಮ್ಮ ಮಾತುಗಳಿಗೆ ಆಪ್ತರಿಂದ ಬೆಲೆ ಸಿಗುತ್ತಿಲ್ಲ ಎಂಬ ಬೇಸರ ಕಾಡೀತು. ವೃತ್ತಿರಂಗದಲ್ಲಿ ಶಕ್ತಿಮೀರಿ ಪ್ರಯತ್ನ ಮಾಡಲಿದ್ದೀರಿ. ಅನಗತ್ಯ ಖರ್ಚುಗಳಿಗೆ ಕಡಿವಾಣವಿರಲಿ.

ಮಿಥುನ: ನಿಮ್ಮ ಜೊತೆಗೇ ಇದ್ದು ಲಾಭ ಪಡೆಯುವವರಿಂದಲೇ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕಾಯುವುದು ಒಳಿತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕರ್ಕಟಕ: ನಿಮ್ಮ ಕೆಲಸದ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಗೆ ವಿರಾಮ ನೀಡಿ. ಹೊಸ ಬಗೆಯ ಯೋಚನೆಗಳನ್ನು ನಿಮ್ಮನ್ನು ಉಲ್ಲಾಸಗೊಳಿಸಲಿದೆ.

ಸಿಂಹ: ಸರಿಯಾದ ಮಾರ್ಗಗಳನ್ನು ಅನುಸರಿಸಿಕೊಂಡು ಹೋದಲ್ಲಿ ಅಭಿವೃದ್ಧಿಗೆ ದಾರಿಯಾಗಲಿದೆ. ಸರಕಾರಿ ನೌಕರರಿಗೆ ಕಾರ್ಯದೊತ್ತಡ ತಪ್ಪದು. ಪ್ರೀತಿ ಪಾತ್ರರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ಚಿಂತೆ ಬೇಡ.

ಕನ್ಯಾ: ಕುಟುಂಬದ ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಮುನ್ನಡೆಯಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ವಿದ್ಯಾರ್ಥಿಗಳು ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ತಾಳ್ಮೆ ಅಗತ್ಯ.

ತುಲಾ: ಕಷ್ಟ-ಸುಖ ಎರಡನ್ನೂ ಸಮನಾಗಿ ಸ್ವೀಕರಿಸಲು ಸಿದ್ಧರಾಗಿ. ಬಂಧು ಮಿತ್ರರಿಂದ ನಿಮಗೆ ಸೂಕ್ತ ಸಮಯದಲ್ಲಿ ಸಹಾಯ ದೊರೆಯಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತಿಸಲಿದ್ದಾರೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ನಿಮ್ಮ ಹಿತಚಿಂತಕರ ಮನಸ್ಸು ನೋಯಿಸುವ ಕೆಲಸ ಮಾಡಬೇಡಿ. ಗೃಹಿಣಿಯರಿಗೆ ಮನೆಕೆಲಸದಲ್ಲಿ ಕುಟುಂಬ ಸದಸ್ಯರ ನೆರವು ಸಿಗಲಿದೆ. ಆಗಾಗ ಅಡೆತಡೆಗಳು ಬಂದರೂ ಅಂತಿಮವಾಗಿ ಕಾರ್ಯಸಾಧನೆಯಾಗಲಿದೆ.

ಧನು: ಶುಭ ಮಂಗಲ ಕಾರ್ಯ ನೆರವೇರಿಸಬೇಕೆಂದರೂ ಅಡ್ಡಿ, ವಿಘ್ನಗಳು ತಪ್ಪದು. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಯೋಚನೆಗಳಿಗೆ ಬೆಲೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಕೌಟುಂಬಿಕವಾಗಿ ಬಂಧು ಮಿತ್ರರ ಒಡನಾಟ ಖುಷಿ ಕೊಡಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಕಷ್ಟದ ಸಮಯದಲ್ಲಿ ಅನಿರೀಕ್ಷಿತವಾಗಿ ಆಪ್ತರಿಂದ ಸಹಾಯ ಒದಗಿಬರುವುದು. ಮಕ್ಕಳ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಪ್ರೇಮಿಗಳ ಗುಟ್ಟು ಮನೆಯವರ ಮುಂದೆ ಬಯಲಾಗಲಿದೆ. ತಾಳ್ಮೆ, ಸಂಯಮವಿರಲಿ.

ಮೀನ: ನಿವೇಶನ, ವಾಹನ ಖರೀದಿಗೆ ಮನಸ್ಸು ಮಾಡಲಿದ್ದೀರಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಸರಕಾರಿ ಲೆಕ್ಕಪತ್ರಗಳನ್ನು ಜೋಪಾನ ಮಾಡುವ ಜವಾಬ್ಧಾರಿ ಹೆಗಲಿಗೇರಲಿದೆ. ಕಿರು ಓಡಾಟ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments